ಮಡಿಕೇರಿ: ಕೊಡಗಿನಲ್ಲಿ ಮಳೆ ತಗ್ಗಿದ ಪರಿಣಾಮ ನಿಸರ್ಗದ ಚೆಲುವಿನ ಲಾಸ್ಯ ಎಲ್ಲರ ಕಣ್ಮನ ತಣಿಸುತ್ತಿದೆ. ಹೀಗಾಗಿ ಕೊಡಗಿನತ್ತ ಪ್ರವಾಸಿಗರ ದಂಡೇ ಆಗಮಿಸುತ್ತಿದೆ.
ಕೊಡಗಿನ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರು ಒಂದಷ್ಟು ಸಮಯವನ್ನು ಪ್ರಶಾಂತ ವಾತಾವರಣ ನಿಸರ್ಗದ ಮಡಿಲಲ್ಲಿ ಕಳೆದು ಹೋಗುವುದೇ ಎಲ್ಲಿಲ್ಲದ ಸಡಗರವಾಗಿದೆ. ಅದರಲ್ಲೂ ಮಡಿಕೇರಿ ನಗರಕ್ಕೆ ಭೇಟಿ ನೀಡಿದವರು ರಾಜಾಸೀಟ್ಗೆ ತೆರಳಿ ಅಲ್ಲಿ ಕಾಲ ಕಳೆಯುವುದು ಖುಚಿ ಕೊಡುತ್ತಿದೆ.
ಕೊಡಗಿನ ಪ್ರವಾಸಿ ತಾಣಗಳ ಪೈಕಿ ನಿಸರ್ಗದ ಸುಂದರತೆಯಿಂದಲೇ ಹೆಸರು ವಾಸಿಯಾಗಿರುವುದು ಮಡಿಕೇರಿಯ ರಾಜಾಸೀಟ್. ಇದು ಪ್ರವಾಸಿಗರ ಪ್ರಮುಖ ಸಂದರ್ಶನಕ್ಕೆ ಯೋಗ್ಯ ತಾಣವಾಗಿದೆ. ಇಲ್ಲಿ ಮಟ ಮಟ ಮಧ್ಯಾಹ್ನದ ವೇಳೆಯೂ ತಂಗಾಳಿ ಬೀಸಿದ ಅನುಭವವಾಗುತ್ತದೆ.
ಇಲ್ಲಿಂದ ನಿಂತು ನೋಡುವ ಕಣ್ಣುಗಳಿಗೆ ಹತ್ತಾರು ಸುಂದರ ದೃಶ್ಯಗಳು ಕಣ್ಣ ಮುಂದೆ ಹಾದು ಹೋಗುತ್ತಲೇ ಇರುತ್ತದೆ. ಇಲ್ಲಿ ಉಸಿರಾಡಲು ಒಳ್ಳೆಯ ಗಾಳಿ, ಸದ್ದು ಗದ್ದಲವಿಲ್ಲದ ಪ್ರಶಾಂತತೆ, ಕಣ್ಣನ್ನು ತಂಪಾಗಿಸುವ ಹಸಿರು ನೆಮ್ಮದಿ ನೀಡುತ್ತಿದೆ.
ಈ ಹಿನ್ನೆಲೆಯಲ್ಲಿ ರಾಜಾಸೀಟ್ಗೆ ಬರುವ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಹೋಗುತ್ತಿದ್ದು, ಪ್ರವಾಸೋದ್ಯಮ ಈಗ ಬಹಳ ಚೇತರಿಕೆ ಕಾಣುತ್ತಿದೆ.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…