ಮಡಿಕೇರಿ: ಕೊಡಗಿನಲ್ಲಿ ಮಳೆ ತಗ್ಗಿದ ಪರಿಣಾಮ ನಿಸರ್ಗದ ಚೆಲುವಿನ ಲಾಸ್ಯ ಎಲ್ಲರ ಕಣ್ಮನ ತಣಿಸುತ್ತಿದೆ. ಹೀಗಾಗಿ ಕೊಡಗಿನತ್ತ ಪ್ರವಾಸಿಗರ ದಂಡೇ ಆಗಮಿಸುತ್ತಿದೆ.
ಕೊಡಗಿನ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರು ಒಂದಷ್ಟು ಸಮಯವನ್ನು ಪ್ರಶಾಂತ ವಾತಾವರಣ ನಿಸರ್ಗದ ಮಡಿಲಲ್ಲಿ ಕಳೆದು ಹೋಗುವುದೇ ಎಲ್ಲಿಲ್ಲದ ಸಡಗರವಾಗಿದೆ. ಅದರಲ್ಲೂ ಮಡಿಕೇರಿ ನಗರಕ್ಕೆ ಭೇಟಿ ನೀಡಿದವರು ರಾಜಾಸೀಟ್ಗೆ ತೆರಳಿ ಅಲ್ಲಿ ಕಾಲ ಕಳೆಯುವುದು ಖುಚಿ ಕೊಡುತ್ತಿದೆ.
ಕೊಡಗಿನ ಪ್ರವಾಸಿ ತಾಣಗಳ ಪೈಕಿ ನಿಸರ್ಗದ ಸುಂದರತೆಯಿಂದಲೇ ಹೆಸರು ವಾಸಿಯಾಗಿರುವುದು ಮಡಿಕೇರಿಯ ರಾಜಾಸೀಟ್. ಇದು ಪ್ರವಾಸಿಗರ ಪ್ರಮುಖ ಸಂದರ್ಶನಕ್ಕೆ ಯೋಗ್ಯ ತಾಣವಾಗಿದೆ. ಇಲ್ಲಿ ಮಟ ಮಟ ಮಧ್ಯಾಹ್ನದ ವೇಳೆಯೂ ತಂಗಾಳಿ ಬೀಸಿದ ಅನುಭವವಾಗುತ್ತದೆ.
ಇಲ್ಲಿಂದ ನಿಂತು ನೋಡುವ ಕಣ್ಣುಗಳಿಗೆ ಹತ್ತಾರು ಸುಂದರ ದೃಶ್ಯಗಳು ಕಣ್ಣ ಮುಂದೆ ಹಾದು ಹೋಗುತ್ತಲೇ ಇರುತ್ತದೆ. ಇಲ್ಲಿ ಉಸಿರಾಡಲು ಒಳ್ಳೆಯ ಗಾಳಿ, ಸದ್ದು ಗದ್ದಲವಿಲ್ಲದ ಪ್ರಶಾಂತತೆ, ಕಣ್ಣನ್ನು ತಂಪಾಗಿಸುವ ಹಸಿರು ನೆಮ್ಮದಿ ನೀಡುತ್ತಿದೆ.
ಈ ಹಿನ್ನೆಲೆಯಲ್ಲಿ ರಾಜಾಸೀಟ್ಗೆ ಬರುವ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಹೋಗುತ್ತಿದ್ದು, ಪ್ರವಾಸೋದ್ಯಮ ಈಗ ಬಹಳ ಚೇತರಿಕೆ ಕಾಣುತ್ತಿದೆ.
ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…
ನವದೆಹಲಿ: ಮೆಡಿಕಲ್ ಶಾಪ್ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…
ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…
ವಾಷಿಂಗ್ಟನ್: ಮಧ್ಯಪ್ರಾಚ್ಯ ಯುದ್ಧವನ್ನು ಕೊನೆಗೊಳಿಸಲು ಇರಾನ್ ಮತ್ತು ಅಮೇರಿಕಾ ನಡುವಿನ ಒಪ್ಪಂದ್ ನಂತರ ಶುಕ್ರವಾರದಿಂದ ಹಾರ್ಮುಜ್ ಜಲಸಂಧಿ ಸಂಪೂರ್ಣವಾಗಿ ಮುಕ್ತವಾಗಲಿದೆ…
ಒಡಿಶಾ ರಾಜ್ಯದ ಮುಖ್ಯಮಂತ್ರಿ ಮೋಹನ ಚರಣ ಮಾಂಝಿ ಅವರು ಎಲ್ಕೆಜಿಯಿಂದ ಸ್ನಾತಕೋತ್ತರ ಪದವಿಯವರೆಗೆ ( ವೈದ್ಯಕೀಯ, ಇಂಜಿನಿಯರಿಂಗ್, ಫಾರ್ಮಸಿ, ಕೃಷಿ,…
ಮೈಸೂರು ನಗರದಲ್ಲಿ ಬೀದಿ ನಾಯಿಗಳ ಉಪಟಳ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿದಿನ ನಾಯಿ ಕಡಿತದ ನೂರಾರು ಪ್ರಕರಣಗಳು ವರದಿಯಾಗುತ್ತಿವೆ. ಮೈಸೂರು…