ಕೊಡಗು

ದಿನದಿಂದ ದಿನಕ್ಕೆ ಅದ್ಭುತವಾಗ್ತಿದೆ ಮಡಿಕೇರಿಯ ರಾಜಾಸೀಟ್‌

ಮಡಿಕೇರಿ: ಕೊಡಗಿನಲ್ಲಿ ಮಳೆ ತಗ್ಗಿದ ಪರಿಣಾಮ ನಿಸರ್ಗದ ಚೆಲುವಿನ ಲಾಸ್ಯ ಎಲ್ಲರ ಕಣ್ಮನ ತಣಿಸುತ್ತಿದೆ. ಹೀಗಾಗಿ ಕೊಡಗಿನತ್ತ ಪ್ರವಾಸಿಗರ ದಂಡೇ ಆಗಮಿಸುತ್ತಿದೆ.

ಕೊಡಗಿನ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರು ಒಂದಷ್ಟು ಸಮಯವನ್ನು ಪ್ರಶಾಂತ ವಾತಾವರಣ ನಿಸರ್ಗದ ಮಡಿಲಲ್ಲಿ ಕಳೆದು ಹೋಗುವುದೇ ಎಲ್ಲಿಲ್ಲದ ಸಡಗರವಾಗಿದೆ. ಅದರಲ್ಲೂ ಮಡಿಕೇರಿ ನಗರಕ್ಕೆ ಭೇಟಿ ನೀಡಿದವರು ರಾಜಾಸೀಟ್‌ಗೆ ತೆರಳಿ ಅಲ್ಲಿ ಕಾಲ ಕಳೆಯುವುದು ಖುಚಿ ಕೊಡುತ್ತಿದೆ.

ಕೊಡಗಿನ ಪ್ರವಾಸಿ ತಾಣಗಳ ಪೈಕಿ ನಿಸರ್ಗದ ಸುಂದರತೆಯಿಂದಲೇ ಹೆಸರು ವಾಸಿಯಾಗಿರುವುದು ಮಡಿಕೇರಿಯ ರಾಜಾಸೀಟ್.‌ ಇದು ಪ್ರವಾಸಿಗರ ಪ್ರಮುಖ ಸಂದರ್ಶನಕ್ಕೆ ಯೋಗ್ಯ ತಾಣವಾಗಿದೆ. ಇಲ್ಲಿ ಮಟ ಮಟ ಮಧ್ಯಾಹ್ನದ ವೇಳೆಯೂ ತಂಗಾಳಿ ಬೀಸಿದ ಅನುಭವವಾಗುತ್ತದೆ.

ಇಲ್ಲಿಂದ ನಿಂತು ನೋಡುವ ಕಣ್ಣುಗಳಿಗೆ ಹತ್ತಾರು ಸುಂದರ ದೃಶ್ಯಗಳು ಕಣ್ಣ ಮುಂದೆ ಹಾದು ಹೋಗುತ್ತಲೇ ಇರುತ್ತದೆ. ಇಲ್ಲಿ ಉಸಿರಾಡಲು ಒಳ್ಳೆಯ ಗಾಳಿ, ಸದ್ದು ಗದ್ದಲವಿಲ್ಲದ ಪ್ರಶಾಂತತೆ, ಕಣ್ಣನ್ನು ತಂಪಾಗಿಸುವ ಹಸಿರು ನೆಮ್ಮದಿ ನೀಡುತ್ತಿದೆ.

ಈ ಹಿನ್ನೆಲೆಯಲ್ಲಿ ರಾಜಾಸೀಟ್‌ಗೆ ಬರುವ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಹೋಗುತ್ತಿದ್ದು, ಪ್ರವಾಸೋದ್ಯಮ ಈಗ ಬಹಳ ಚೇತರಿಕೆ ಕಾಣುತ್ತಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

IPL 2026 | ಕಂಗೆಟ್ಟ ಕ್ಯಾಪಿಟಲ್ಸ್‌ ; ಡೆಲ್ಲಿ ವಿರುದ್ಧ ಆರ್‌ಸಿಬಿಗೆ ಸುಲಭ ಜಯ

ನವದೆಹಲಿ : ಹ್ಯಾಜಲ್‌ವುಡ್‌, ಭುವನೇಶ್ವರ್ ಬೌಲಿಂಗ್‌ ಅಬ್ಬರ, ಸಂಘಟಿತ ಫೀಲ್ಡಿಂಗ್‌ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು…

5 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಮೈಸೂರು : ಕೆ-ಸೆಟ್‌ ಮತ್ತು ಯುಜಿಸಿ-ನೆಟ್‌, ಜೆಆರ್‌ಎಫ್‌ ಅರ್ಹತಾ ಪರೀಕ್ಷೆ ಬರೆಯುವವರಿಗೆ 45 ದಿನಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ…

6 hours ago

ಹಾಸನ | ಮೆದುಳಿನಲ್ಲಿ ತೀವ್ರ ರಕ್ತಸ್ರಾವ ; 25 ವರ್ಷದ ಸಾಫ್ಟ್‌ವೇರ್‌ ಇಂಜಿನಿಯರ್‌ ಯುವತಿ ಸಾವು

ಹಾಸನ : ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ…

6 hours ago

ಚೆಲುವಾಂಬ ಆಸ್ಪತ್ರೆ | 15 ತಿಂಗಳಲ್ಲಿ 421 ಶಿಶು ಮರಣ ; ದಾಖಲೆ ಬಿಡುಗಡೆ ಮಾಡಿದ ಮಾಜಿ ಶಾಸಕ ನಾಗೇಂದ್ರ

ಮೈಸೂರು : ಮೈಸೂರು ಪ್ರಾಂತ್ಯದಲ್ಲೇ ಪ್ರಸೂತಿ, ಸ್ತ್ರೀರೋಗ ಮತ್ತು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಹೆಸರುವಾಸಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ…

6 hours ago

ಪಶ್ಚಿಮ ಬಂಗಾಳ ಎರಡನೇ ಹಂತದ ಚುನಾವಣೆ : ಏ.29ರಂದು ಮತದಾನ ; ಭಾರೀ ಬಿಗಿ ಭದ್ರತೆ

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…

7 hours ago

ಅರಳುಮರಳು ಮಾತು, ಕ್ಷಮಿಸಿಬಿಡೋಣ : ಎಚ್.ವಿಶ್ವನಾಥ್ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

ಶಿವಮೊಗ್ಗ : ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್‌ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…

8 hours ago