ಕೊಡಗು

ಸರ್ಕಾರಿ ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸುವುದನ್ನು ರೂಢಿಸಿಕೊಳ್ಳಿ: ಎ.ಎಸ್.ಪೊನ್ನಣ್ಣ

ಮಡಿಕೇರಿ: ಸಾರ್ವಜನಿಕರು ದೂರವಾಣಿ ಕರೆ ಮಾಡಿದಾಗ ಅವರಿಗೆ ಸ್ಪಂದಿಸುವ ಗುಣವನ್ನು ರೂಡಿಸಿಕೊಳ್ಳಿ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ನವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕ್ಷೇತ್ರವ್ಯಾಪ್ತಿಯ ವಿರಾಜಪೇಟೆ ಮತ್ತು ಮಡಿಕೇರಿ ತಾಲ್ಲೂಕಿನಾದ್ಯಂತ ಅಧಿಕಾರಿಗಳೊಂದಿಗೆ ಮಳೆಹಾನಿ ಪ್ರದೇಶ ವೀಕ್ಷಣೆ ಮಾಡಿ ಎಮ್ಮೆಮಾಡು ಪಂಚಾಯತ್ ನಲ್ಲಿ ಸಭೆ ನಡೆಸಿ ಮಾತನಾಡಿದ ಸಂಧರ್ಭದಲ್ಲಿ, ಅಲ್ಲಿನ ನಾಗರೀಕರು ಅಧಿಕಾರಿಗಳು ತಮ್ಮ ದೂರವಾಣಿ ಕರೆ ಸ್ವೀಕರಿಸುವುದಿಲ್ಲ ಎಂದು ಅಳಲು ತೋಡಿಕೊಂಡಾಗ ಅಸಮಾಧಾನ ಗೊಂಡ ಪೊನ್ನಣ್ಣ ನವರು ಮಳೆಗಾಳಿಗೆ ಗ್ರಾಮೀಣ ಪ್ರದೇಶದಲ್ಲಿ ರಸ್ತೆ ,ವಿದ್ಯುತ್, ಮತ್ತು ನೀರಿನ ವ್ಯವಸ್ಥೆ ಸಹಜವಾಗಿ ಹದಗೆಡುತ್ತದೆ. ಈ ಸಂಧರ್ಭದಲ್ಲಿ ಜನರು ಸಂಬಂದಿಸಿದ ಅಧಿಕಾರಿ, ಸಿಬ್ಬಂದಿಗಳಿಗೆ ಕರೆ ಮಾಡುತ್ತಾರೆ. ಅವರ ಕರೆಯನ್ನು ಸ್ವೀಕರಿಸುವ ಸೌಜನ್ಯ ವಿಲ್ಲದಿದ್ದರೆ ಹೇಗೆ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಅತೀ ಗಾಳಿಯಿಂದ ಜಿಲ್ಲೆಯಲ್ಲಿ 2318 ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು ಇವುಗಳನ್ನು ತ್ವರಿತವಾಗಿ ಸರಿಪಡಿಸಲು ಇಲಾಖೆಗೆ ಸೂಚನೆ ನೀಡಿದ್ದು ಸಾರ್ವಜನಿಕರು ಸಹಕರಿಸಬೇಕಾಗಿ ಕೋರಿದರು.ಕ್ಷೇತ್ರದಲ್ಲಿ ಮಳೆಯಿಂದ ಹಾನಿಯಾಗಿರುವ ರಸ್ತೆಗಳ ಬಗ್ಗೆ ಸಂಪೂರ್ಣ ವರದಿ ಪಡೆದಿದ್ದು ಎಲ್ಲವನ್ನು ಸರಿಪಡಿಸಲು ಬದ್ದರಿದ್ದೇನೆ ಎಂದು ತಿಳಿಸಿದರು.

2018 ರಲ್ಲಿ ಆಗಷ್ಟ್ ತಿಂಗಳಿನಲ್ಲಿ ಸುರಿದ ಮಳೆಯಿಂದ ಆದ ಅನಾಹುತದ ಬಗ್ಗೆ ಸ್ಮರಿಸಿದ ಪೊನ್ನಣ್ಣ ನವರು ಆಗಷ್ಟ್ ನಲ್ಲಿ ಮಳೆಯಿಂದ ಆಗುವ ಅನಾಹುತಗಳನ್ನು ತಡೆಯಲು ಅಧಿಕಾರಿಗಳ ಜೊತೆಗೆ ಎಲ್ಲಾ ನಾಗರೀಕರು ಸಜ್ಜಾಗಿರಲು ಕರೆ ನೀಡಿದರು.

ಮಡಿಕೇರಿ ತಹಶಿಲ್ದಾರ ಪ್ರವೀಣ್, ಪಿಡಬ್ಲೂಡಿ ಇಂಜಿನಿರ್‌ ಗಳು, ಕಂದಾಯ ಅಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತೀತಿರ ಧರ್ಮಜಾ ಉತ್ತಪ್ಪ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಇಸ್ಮಾಯಿಲ್, ಪಂಚಾಯತ್ ರಾಜ್ ಜಿಲ್ಲಾಧ್ಯಕ್ಷರಾದ ತೆನ್ನಿರ ಮೈನಾ, ಸಾಮಾಜಿಕ ಜಾಲತಾಣದ ಅಧ್ಯಕ್ಷರಾದ ಹೊಸೂರು ಸೂರಜ್,ಕೆಡಿಪಿ ಸದಸ್ಯರಾದ ಬಾಚಿಮಂಡ ಲವ ಚಿಣ್ಣಪ್ಪ, ವಲಯ ಕಾಂಗ್ರೆಸ್ ಅಧ್ಯಕ್ಷರಾದ ಹಂಸ, ಯೂಸುಫ್ ಸೇರಿದಂತೆ ಗ್ರಾಮಸ್ಥರು ಪ್ರಮುಖರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

10 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

11 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

12 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

15 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

16 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

16 hours ago