ಕೊಡಗು

ಸರ್ಕಾರಿ ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸುವುದನ್ನು ರೂಢಿಸಿಕೊಳ್ಳಿ: ಎ.ಎಸ್.ಪೊನ್ನಣ್ಣ

ಮಡಿಕೇರಿ: ಸಾರ್ವಜನಿಕರು ದೂರವಾಣಿ ಕರೆ ಮಾಡಿದಾಗ ಅವರಿಗೆ ಸ್ಪಂದಿಸುವ ಗುಣವನ್ನು ರೂಡಿಸಿಕೊಳ್ಳಿ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ನವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕ್ಷೇತ್ರವ್ಯಾಪ್ತಿಯ ವಿರಾಜಪೇಟೆ ಮತ್ತು ಮಡಿಕೇರಿ ತಾಲ್ಲೂಕಿನಾದ್ಯಂತ ಅಧಿಕಾರಿಗಳೊಂದಿಗೆ ಮಳೆಹಾನಿ ಪ್ರದೇಶ ವೀಕ್ಷಣೆ ಮಾಡಿ ಎಮ್ಮೆಮಾಡು ಪಂಚಾಯತ್ ನಲ್ಲಿ ಸಭೆ ನಡೆಸಿ ಮಾತನಾಡಿದ ಸಂಧರ್ಭದಲ್ಲಿ, ಅಲ್ಲಿನ ನಾಗರೀಕರು ಅಧಿಕಾರಿಗಳು ತಮ್ಮ ದೂರವಾಣಿ ಕರೆ ಸ್ವೀಕರಿಸುವುದಿಲ್ಲ ಎಂದು ಅಳಲು ತೋಡಿಕೊಂಡಾಗ ಅಸಮಾಧಾನ ಗೊಂಡ ಪೊನ್ನಣ್ಣ ನವರು ಮಳೆಗಾಳಿಗೆ ಗ್ರಾಮೀಣ ಪ್ರದೇಶದಲ್ಲಿ ರಸ್ತೆ ,ವಿದ್ಯುತ್, ಮತ್ತು ನೀರಿನ ವ್ಯವಸ್ಥೆ ಸಹಜವಾಗಿ ಹದಗೆಡುತ್ತದೆ. ಈ ಸಂಧರ್ಭದಲ್ಲಿ ಜನರು ಸಂಬಂದಿಸಿದ ಅಧಿಕಾರಿ, ಸಿಬ್ಬಂದಿಗಳಿಗೆ ಕರೆ ಮಾಡುತ್ತಾರೆ. ಅವರ ಕರೆಯನ್ನು ಸ್ವೀಕರಿಸುವ ಸೌಜನ್ಯ ವಿಲ್ಲದಿದ್ದರೆ ಹೇಗೆ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಅತೀ ಗಾಳಿಯಿಂದ ಜಿಲ್ಲೆಯಲ್ಲಿ 2318 ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದು ಇವುಗಳನ್ನು ತ್ವರಿತವಾಗಿ ಸರಿಪಡಿಸಲು ಇಲಾಖೆಗೆ ಸೂಚನೆ ನೀಡಿದ್ದು ಸಾರ್ವಜನಿಕರು ಸಹಕರಿಸಬೇಕಾಗಿ ಕೋರಿದರು.ಕ್ಷೇತ್ರದಲ್ಲಿ ಮಳೆಯಿಂದ ಹಾನಿಯಾಗಿರುವ ರಸ್ತೆಗಳ ಬಗ್ಗೆ ಸಂಪೂರ್ಣ ವರದಿ ಪಡೆದಿದ್ದು ಎಲ್ಲವನ್ನು ಸರಿಪಡಿಸಲು ಬದ್ದರಿದ್ದೇನೆ ಎಂದು ತಿಳಿಸಿದರು.

2018 ರಲ್ಲಿ ಆಗಷ್ಟ್ ತಿಂಗಳಿನಲ್ಲಿ ಸುರಿದ ಮಳೆಯಿಂದ ಆದ ಅನಾಹುತದ ಬಗ್ಗೆ ಸ್ಮರಿಸಿದ ಪೊನ್ನಣ್ಣ ನವರು ಆಗಷ್ಟ್ ನಲ್ಲಿ ಮಳೆಯಿಂದ ಆಗುವ ಅನಾಹುತಗಳನ್ನು ತಡೆಯಲು ಅಧಿಕಾರಿಗಳ ಜೊತೆಗೆ ಎಲ್ಲಾ ನಾಗರೀಕರು ಸಜ್ಜಾಗಿರಲು ಕರೆ ನೀಡಿದರು.

ಮಡಿಕೇರಿ ತಹಶಿಲ್ದಾರ ಪ್ರವೀಣ್, ಪಿಡಬ್ಲೂಡಿ ಇಂಜಿನಿರ್‌ ಗಳು, ಕಂದಾಯ ಅಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತೀತಿರ ಧರ್ಮಜಾ ಉತ್ತಪ್ಪ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಇಸ್ಮಾಯಿಲ್, ಪಂಚಾಯತ್ ರಾಜ್ ಜಿಲ್ಲಾಧ್ಯಕ್ಷರಾದ ತೆನ್ನಿರ ಮೈನಾ, ಸಾಮಾಜಿಕ ಜಾಲತಾಣದ ಅಧ್ಯಕ್ಷರಾದ ಹೊಸೂರು ಸೂರಜ್,ಕೆಡಿಪಿ ಸದಸ್ಯರಾದ ಬಾಚಿಮಂಡ ಲವ ಚಿಣ್ಣಪ್ಪ, ವಲಯ ಕಾಂಗ್ರೆಸ್ ಅಧ್ಯಕ್ಷರಾದ ಹಂಸ, ಯೂಸುಫ್ ಸೇರಿದಂತೆ ಗ್ರಾಮಸ್ಥರು ಪ್ರಮುಖರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸೋಮವಾರಪೇಟೆಯಲ್ಲಿ ಗ್ಯಾಸ್ ಸೋರಿಕೆಗೆ ಯುವತಿ ಸಾವು

ಸೋಮವಾರಪೇಟೆ: ಇಲ್ಲಿನ ಹೋಂಸ್ಟೇ ಒಂದರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಗ್ಯಾಸ್‌ ಸೋರಿಕೆಯಿಂದ ಮೈಸೂರಿನ ಯುವತಿ ಮೃತಪಟ್ಟಿದ್ದಾಳೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ…

5 hours ago

ರಾಜ್ಯದಲ್ಲಿ ಎಂಟು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎಂಟು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ…

6 hours ago

ಚಿರತೆ ದಾಳಿಗೆ ನಾಯಿ ಸಾವು: ಗ್ರಾಮಸ್ಥರಲ್ಲಿ ಭೀತಿ

ಕೊಳ್ಳೇಗಾಲ: ತಾಲ್ಲೂಕಿನ ಜಕ್ಕಳ್ಳಿ ಬಳಿ ಚಿರತೆ ನಾಯಿಯೊಂದನ್ನು ಕೊಂದು ತಿಂದುಹಾಕಿದ್ದು, ಗ್ರಾಮಸ್ಥರು, ಕೂಲಿ ಕಾರ್ಮಿಕರು ಭಯಭೀತರಾಗಿದ್ದಾರೆ. ವೀರಮಾದು ಅವರ ತೋಟದ…

6 hours ago

ಎಲ್‌ಪಿಜಿ ದರ ಭಾರತದಲ್ಲೇ ಅಗ್ಗ: ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ಸಮರ್ಥನೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದ್ದರೂ, ಭಾರತದಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್…

7 hours ago

ಬಾವಿಗೆ ಬಿದ್ದಿದ್ದ ಹಸು ರಕ್ಷಣೆ

ಮಹಾದೇಶ್‌ ಎಂ ಗೌಡ:  ಹನೂರು ತಾಲ್ಲೂಕು ವರದಿಗಾರರು  ಹನೂರು: ಮೇವು ಮೇಯುವ ವೇಳೆ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ…

7 hours ago

ಭಾರತದ ಜನಸಂಖ್ಯೆಯಲ್ಲಿ ಗಣನೀಯ ಕುಸಿತವಾಗುತ್ತಿದೆ: ಎಲಾನ್‌ ಮಸ್ಕ್‌ ಆತಂಕ

ವಾಷಿಂಗ್ಟನ್:‌ ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…

8 hours ago