ಮಡಿಕೇರಿ: ಆಕಸ್ಮಿಕವಾಗಿ ಒಂಟಿ ನಳಿಕೆಯ ಬಂದೂಕಿನಿಂದ ಗುಂಡು ಹಾರಿ ವ್ಯಕ್ತಿಯೊಬ್ಬರು ಅಸು ನೀಗಿರುವ ಘಟನೆ ನಿನ್ನೆ ರಾತ್ರಿ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.
ಚೇರಂಬಾಣೆಯ ಪೊನ್ನಚೆಟ್ಟಿರ ಮಿತ್ರ ಚಂಗಪ್ಪ (49) ಎಂಬುವವರು ಆಕಸ್ಮಿಕವಾಗಿ ತಗುಲಿದ ಗುಂಡೇಟಿಗೆ ಬಲಿಯಾದವರಾಗಿದ್ದಾರೆ.
ಚೇರಂಬಾಣೆ ಪಟ್ಟಣದಲ್ಲಿ ವೈನ್ ಶಾಪ್ ಹೊಂದಿರುವ ಮಿತ್ರ ಅವರು ರಾತ್ರಿ 12 ಗಂಟೆ ಸಮಯದಲ್ಲಿ ವೈನ್ ಶಾಪ್ ಮುಚ್ಚಿ ಬಂದೂಕಿನೊಂದಿಗೆ ಹೊರಬಂದಿದ್ದಾರೆ. ಇದೇ ಸಂದರ್ಭ ಹಾಲು ಸರಬರಾಜಿನ ವಾಹನ ಬಂದಿದ್ದು, ಮಿತ್ರ ಚಂಗಪ್ಪ ಅವರು ಹಾಲು ಕೊಂಡುಕೊಳ್ಳಲೆಂದು ಕೈಯಲ್ಲಿದ್ದ ಬಂದೂಕು ಅನ್ನು ಸ್ಕೂಟರ್ ಮೇಲಿಟ್ಟಿದ್ದಾರೆ ಎನ್ನಲಾಗಿದೆ. ಈ ಸಂದರ್ಭ ಕೆಳಗೆ ಬಿದ್ದ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿ ಮಿತ್ರ ಅವರ ಸೊಂಟದ ಭಾಗಕ್ಕೆ ತಗುಲಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಭಾಗಮಂಡಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…
ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರ್ಗಿ,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಮಹೋತ್ಸವದ ಅಂಗವಾಗಿ…
ಇಸ್ಲಾಮಾಬಾದ್: ಇರಾನ್, ಅಮೇರಿಕಾ-ಇಸ್ರೇಲ್ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು ಉಲ್ಬಣಗೊಂಡಿದೆ. ಇದರಿಂದ ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದಾಗಿದೆ. ಮಾರ್ಚ್.23ರಂದು…
ಮಡಿಕೇರಿ: ನಾಡಿನಾದ್ಯಂತ ಇಂದು ಹೊಸ ವರ್ಷ ಯುಗಾದಿ ಸಂಭ್ರಮ ಮನೆ ಮಾಡಿದ್ದು, ಕೊಡಗಿನ ಮನೆ ಮನೆಯಲ್ಲೂ ಯುಗಾದಿ ಹಬ್ಬದ ಸಡಗರ…
ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಮೈಸೂರು ಜಿಲ್ಲೆ…