ಕೊಡಗು

ಆಕಸ್ಮಿಕವಾಗಿ ಹಾರಿದ ಗುಂಡಿಗೆ ವ್ಯಕ್ತಿ ಸಾವು

ಮಡಿಕೇರಿ: ಆಕಸ್ಮಿಕವಾಗಿ ಒಂಟಿ ನಳಿಕೆಯ ಬಂದೂಕಿನಿಂದ ಗುಂಡು ಹಾರಿ ವ್ಯಕ್ತಿಯೊಬ್ಬರು ಅಸು ನೀಗಿರುವ ಘಟನೆ ನಿನ್ನೆ ರಾತ್ರಿ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.
ಚೇರಂಬಾಣೆಯ ಪೊನ್ನಚೆಟ್ಟಿರ ಮಿತ್ರ ಚಂಗಪ್ಪ (49) ಎಂಬುವವರು ಆಕಸ್ಮಿಕವಾಗಿ ತಗುಲಿದ ಗುಂಡೇಟಿಗೆ ಬಲಿಯಾದವರಾಗಿದ್ದಾರೆ.
ಚೇರಂಬಾಣೆ ಪಟ್ಟಣದಲ್ಲಿ ವೈನ್ ಶಾಪ್ ಹೊಂದಿರುವ ಮಿತ್ರ ಅವರು ರಾತ್ರಿ 12 ಗಂಟೆ ಸಮಯದಲ್ಲಿ ವೈನ್ ಶಾಪ್ ಮುಚ್ಚಿ ಬಂದೂಕಿನೊಂದಿಗೆ ಹೊರಬಂದಿದ್ದಾರೆ. ಇದೇ ಸಂದರ್ಭ ಹಾಲು ಸರಬರಾಜಿನ ವಾಹನ ಬಂದಿದ್ದು, ಮಿತ್ರ ಚಂಗಪ್ಪ ಅವರು ಹಾಲು ಕೊಂಡುಕೊಳ್ಳಲೆಂದು ಕೈಯಲ್ಲಿದ್ದ ಬಂದೂಕು ಅನ್ನು ಸ್ಕೂಟರ್ ಮೇಲಿಟ್ಟಿದ್ದಾರೆ‌ ಎನ್ನಲಾಗಿದೆ. ಈ ಸಂದರ್ಭ ಕೆಳಗೆ ಬಿದ್ದ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿ ಮಿತ್ರ ಅವರ ಸೊಂಟದ ಭಾಗಕ್ಕೆ ತಗುಲಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಭಾಗಮಂಡಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

AddThis Website Tools
ಆಂದೋಲನ ಡೆಸ್ಕ್

Recent Posts

ಅಟ್ಲಾಂಟಿಕ್‌ ಮಹಾಸಾಗರದಲ್ಲಿ ದಾಖಲೆ ಬರೆದ ಅನನ್ಯ : ಸಿಎಂ ಶ್ಲಾಘನೆ

ಬೆಂಗಳೂರು : ಅಟ್ಲಾಂಟಿಕ್ ಮಹಾಸಾಗರವನ್ನು ಸತತ ೫೨ ದಿನಗಳ ಕಾಲ ಏಕಾಂಗಿಯಾಗಿ ರೋವಿಂಗ್ ಮಾಡಿ ದಾಟಿ ದಾಖಲೆಗೈದ ಅನನ್ಯ ಪ್ರಸಾದ್…

8 hours ago

ಸಾರಾ ಮಹೇಶ್‌ ಪುತ್ರನ ಮದುವೆ ; ಎಚ್‌ಡಿಕೆ, ಕಿಚ್ಚ ಸುದೀಪ್‌ ಭಾಗಿ

ಮೈಸೂರು : ಮಾಜಿ ಸಚಿವ ಸಾ.ರಾ.ಮಹೇಶ್ ಅವರ ಎರಡನೇ ಪುತ್ರ ಸಾ.ರಾ.ಜಯಂತ್ ಮತ್ತು ಎಂ.ಎಸ್.ವರ್ಷಾ ಅವರ ವಿವಾಹ ಆರತಕ್ಷತೆ ಸಮಾರಂಭದಲ್ಲಿ…

8 hours ago

ಮೂಢನಂಬಿಕೆ ಮಹಿಳೆಯರ ಪಾಲಿನ ರಾಕ್ಷಸ ; ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌

ಸಾಧಕಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಚಿವರ ಹೇಳಿಕೆ ಬೆಂಗಳೂರು: ಮಹಿಳೆಯರ ಪಾಲಿಗೆ ಮೂಢನಂಬಿಕೆಯೇ ರಾಕ್ಷಸ. ಇಂದಿನ ಆಧುನಿಕ ಕಾಲದಲ್ಲೂ ಊರು…

9 hours ago

ಮಹಿಳೆ ನಾಯಕತ್ವ ಗುಣ ಬೆಳೆಸಿಕೊಳ್ಳಲಿ ; ಸಚಿವೆ ಹೆಬ್ಬಾಳಕರ್

 ಕಾಂಗ್ರೆಸ್ ಸರ್ಕಾರ ಎಂದಿಗೂ‌ ಮಹಿಳೆಯರ ಪರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ದಿನಾಚರಣೆ ಆಚರಣೆ ಬೆಂಗಳೂರು:…

9 hours ago

ಮಂಡ್ಯ | ರಾಜಕೀಯ ಪಕ್ಷಗಳು ಬೂತ್ ಮಟ್ಟದ ಏಜೆಂಟರ ವಿವರ ಸಲ್ಲಿಸಿ ; ಜಿಲ್ಲಾಧಿಕಾರಿ ಕುಮಾರ

ಮಂಡ್ಯ : ರಾಜಕೀಯ ಪಕ್ಷಗಳು ನೇಮಕ ಮಾಡಿರುವ ಬೂತ್ ಮಟ್ಟದ ಏಜೆಂಟ್ ಗಳು ಬದಲಾಗಿದ್ದಲ್ಲಿ, ಅವರ ವಿವರದೊಂದಿಗೆ ಬೂತ್ ಲೆವಲ್…

10 hours ago

ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲು!

ಹಾಸನ : ಸ್ನೇಹಿತರೊಂದಿಗೆ ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲಾಗಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಎಂ.ದಾಸಪುರ ಗ್ರಾಮದಲ್ಲಿ ನಡೆದಿದೆ. ಜಿಲ್ಲೆಯ…

10 hours ago