ಮಡಿಕೇರಿ: ಆಕಸ್ಮಿಕವಾಗಿ ಒಂಟಿ ನಳಿಕೆಯ ಬಂದೂಕಿನಿಂದ ಗುಂಡು ಹಾರಿ ವ್ಯಕ್ತಿಯೊಬ್ಬರು ಅಸು ನೀಗಿರುವ ಘಟನೆ ನಿನ್ನೆ ರಾತ್ರಿ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.
ಚೇರಂಬಾಣೆಯ ಪೊನ್ನಚೆಟ್ಟಿರ ಮಿತ್ರ ಚಂಗಪ್ಪ (49) ಎಂಬುವವರು ಆಕಸ್ಮಿಕವಾಗಿ ತಗುಲಿದ ಗುಂಡೇಟಿಗೆ ಬಲಿಯಾದವರಾಗಿದ್ದಾರೆ.
ಚೇರಂಬಾಣೆ ಪಟ್ಟಣದಲ್ಲಿ ವೈನ್ ಶಾಪ್ ಹೊಂದಿರುವ ಮಿತ್ರ ಅವರು ರಾತ್ರಿ 12 ಗಂಟೆ ಸಮಯದಲ್ಲಿ ವೈನ್ ಶಾಪ್ ಮುಚ್ಚಿ ಬಂದೂಕಿನೊಂದಿಗೆ ಹೊರಬಂದಿದ್ದಾರೆ. ಇದೇ ಸಂದರ್ಭ ಹಾಲು ಸರಬರಾಜಿನ ವಾಹನ ಬಂದಿದ್ದು, ಮಿತ್ರ ಚಂಗಪ್ಪ ಅವರು ಹಾಲು ಕೊಂಡುಕೊಳ್ಳಲೆಂದು ಕೈಯಲ್ಲಿದ್ದ ಬಂದೂಕು ಅನ್ನು ಸ್ಕೂಟರ್ ಮೇಲಿಟ್ಟಿದ್ದಾರೆ ಎನ್ನಲಾಗಿದೆ. ಈ ಸಂದರ್ಭ ಕೆಳಗೆ ಬಿದ್ದ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿ ಮಿತ್ರ ಅವರ ಸೊಂಟದ ಭಾಗಕ್ಕೆ ತಗುಲಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಭಾಗಮಂಡಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…