ಕೊಡಗು

ಕಾನೂನು ಬಾಹಿರ ಕೊಳವೆ ಬಾವಿ ಕೊರೆಯಲು ಯತ್ನಿಸಿದ ವ್ಯಕ್ತಿ: ಸ್ಥಳೀಯರಿಂದ ಹಿಗ್ಗಾಮುಗ್ಗಾ ತರಾಟೆ

ಸಿದ್ದಾಪುರ: ಗ್ರಾಮ ಪಂಚಾಯಿತಿಯ ಸಾರ್ವಜನಿಕ ನೀರು ಸರಬರಾಜು ಕೊಳವೆ ಬಾವಿ ಅನತಿ ದೂರದಲ್ಲಿ ಅನುಮತಿ ಪಡೆಯದೆ ಕಾನೂನು ಬಾಹಿರವಾಗಿ ಕೊಳವೆ ಬಾವಿ ಕೊರೆಯುವುದನ್ನು ತಡೆಯುವಲ್ಲಿ ಸ್ಥಳೀಯರು ಯಶಸ್ವಿಯಾಗಿದ್ದಾರೆ.

ನೆಲ್ಲಿ ಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 1ನೇ ವಾರ್ಡ್‌ನ ಬೀರನ ಕೈಮಾಡದಲ್ಲಿ ಪಂಚಾಯಿತಿ ಅನುಮತಿ ಪಡೆಯದೆ ಕೊಳವೆ ಬಾವಿ ಕೊರೆಯಲಾಗುತ್ತಿತ್ತು. ಸಾರ್ವಜನಿಕ ನೀರು ಸರಬರಾಜು ಕೊಳವೆ ಬಾವಿಯ ಅನತಿ ದೂರದಲ್ಲಿ ಇದನ್ನು ಕೊರೆಯಲಾಗುತ್ತಿತ್ತು. ಇದಕ್ಕೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ವಿಷಯ ತಿಳಿದ ಕೂಡಲೇ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಧನಲಕ್ಷ್ಮಿ ಸ್ಥಳಕ್ಕಾಗಮಿಸಿ ಕೊಳವೆಬಾವಿ ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡರು. ಕೊಳವೆ ಬಾವಿ ತೆರೆಯಲು ಯಾವುದೇ ಅನುಮತಿ ಪತ್ರ ಇಲ್ಲದೆ ಇರುವುದರಿಂದ ಅದನ್ನು ಮುಚ್ಚಿಸಿ ಗಾಡಿಯನ್ನು ಹಿಂದಿರುಗಿಸಿ ಕಳುಹಿಸಿದರು.

ಈ ಬಗ್ಗೆ ಮಾತನಾಡಿದ ಸ್ಥಳೀಯರಾದ ಮಣಿ ಎಂಬುವವರು, 150ಕ್ಕೂ ಹೆಚ್ಚು ಕುಟುಂಬಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಕೊಳವೆ ಬಾವಿ ಪಕ್ಕದಲ್ಲಿ ವ್ಯಕ್ತಿಯೊಬ್ಬರು ಖಾಸಗಿ ಕೊಳವೆ ಬಾವಿಯನ್ನು ಕೊರೆಸುತ್ತಿದ್ದರು. ಇದರಿಂದ ಗ್ರಾಮ ಪಂಚಾಯಿತಿಯ ಕೊಳವೆ ಬಾವಿಯಲ್ಲಿ ನೀರಿನ ಮಟ್ಟ ಕಡಿಮೆ ಆಗಲಿದೆ ಎಂಬ ಕಾರಣಕ್ಕಾಗಿ ಅದನ್ನು ತಡೆಯಲಾಗಿದೆ. ಈಗಾಗಲೆ ಬೇಸಿಗೆಯಲ್ಲಿ ಈ ಭಾಗದಲ್ಲಿ ನೀರಿನ ಅಭಾವ ಸೃಷ್ಟಿಯಾಗುತ್ತಿದ್ದು, ಈ ಕೊಳವೆ ಬಾವಿ ಬಂದರೆ ಮತ್ತಷ್ಟು ಸಮಸ್ಯೆಯಾಗುವ ದೃಷ್ಟಿಯಿಂದ ಸ್ಥಗಿತಗೊಳಿಸಲಾಗಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

6 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

8 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

9 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

11 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

16 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

23 hours ago