ಕೊಡಗು

ಅಕ್ರಮ ನಾಡ ಬಂದೂಕು ತಯಾರಿಸಿ ಮಾರಾಟ; ಓರ್ವ ತಯಾರಕ, ಮೂವರು ಖರೀದಿದಾರರ ಬಂಧನ

ಮಡಿಕೇರಿ: ಮನೆಯೊಂದರಲ್ಲಿ ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆಹಚ್ಚಿರುವ ಪೊಲೀಸರು, ಈ ದಂಧೆಯಲ್ಲಿ ತೊಡಗಿದ್ದ ಕೇರಳ ಮೂಲದ ಓರ್ವ ಆರೋಪಿಯನ್ನು ಮತ್ತು ಈತನಿಂದ ಅಕ್ರಮ ನಾಡ ಬಂದೂಕುಗಳನ್ನು ಖರೀದಿಸಿದ್ದ ಮೂವರನ್ನು ಬಂಧಿಸಿದ್ದಾರೆ.

ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಯ ಸಣ್ಣಪುಲಿಕೋಟು ಗ್ರಾಮದ ಮನೆಯೊಂದರಲ್ಲಿ ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರಿಸಿ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಮಡಿಕೇರಿ ಉಪವಿಭಾಗ ಡಿಎಸ್‌ಪಿ ಮಹೇಶ್ ಕುಮಾರ್ ನೇತೃತ್ವದಲ್ಲಿ ಸಿಪಿಐ ಅನೂಪ್ ಮಾದಪ್ಪ ಹಾಗೂ ಶೋಭಾ ಲಾಮಾಣಿ ಹಾಗೂ ಭಾಗಮಂಡಲ ಪೊಲೀಸ್ ಠಾಣೆಯ ಸಿಬ್ಬಂದಿಗಳ ವಿಶೇಷ ತಂಡವನ್ನು ರಚಿಸಲಾಗಿತ್ತು.

ಈ ತಂಡವು ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ಆ.15ರಂದು ರಂದು ಸಣ್ಣಪುಲಿಕೋಟು ಗ್ರಾಮದ ಬಾಡಿಗೆ ಮನೆಯಲ್ಲಿ ವಾಸವಿದ್ದ ಕೇರಳ ರಾಜ್ಯ ಇಡುಕ್ಕಿ ಜಿಲ್ಲೆ ಮೂಲದ ಸುರೇಶ್ ಎಂಬಾತನ ಮನೆಯ ಮೇಲೆ ದಾಳಿ ನಡೆಸಿದೆ. ಈ ಸಂದರ್ಭ, ಅಕ್ರಮವಾಗಿ ನಾಡ ಬಂದೂಕು ತಯಾರಿಸಲು ಬಳಸುತ್ತಿದ್ದ ಸಾಮಾಗ್ರಿಗಳು ಮತ್ತು 02 – ನಾಡ ಬಂದೂಕು (ಎಸ್.ಬಿ.ಬಿ.ಎಲ್) ಹಾಗೂ 01 ನಾಡ ಪಿಸ್ತೂಲ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ಕಲಂ: 3, 25 Indian Arms Act ಅಡಿಯಲ್ಲಿ ಪ್ರಕರಣ ದಾಖಲಿಸಿ ಆರೋಪಿ ಸುರೇಶ್, 52 ವರ್ಷ ಎಂಬಾತನನ್ನು ಬಂಧಿಸಲಾಗಿದೆ.

ಅಲ್ಲದೇ ಆರೋಪಿ ಸುರೇಶ್ ಅಕ್ರಮವಾಗಿ ತಯಾರಿಸಿರುವ ನಾಡ ಬಂದೂಕುಗಳನ್ನು ಖರೀದಿ ಮಾಡಿದ್ದ ಕೋಟಿ, ಎನ್.ಜೆ.ಶಿವರಾಮ ಹಾಗೂ ಎಸ್.ರವಿ ಇವರುಗಳಿಂದ ತಲಾ ಒಂದು ನಾಡ ಬಂದೂಕು (ಎಸ್.ಬಿ.ಬಿ.ಎಲ್) ಅನ್ನು ವಶಪಡಿಸಿಕೊಂಡು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಒಟ್ಟು 05 – ನಾಡ ಬಂದೂಕು (ಎಸ್.ಬಿ.ಬಿ.ಎಲ್) ಹಾಗೂ 01 – ನಾಡ ಪಿಸ್ತೂಲ್ ಅನ್ನು ವಶಪಡಿಸಿಕೊಳ್ಳಲಾಗಿರುತ್ತದೆ.

ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿರವರುಗಳನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ. ರಾಮರಾಜನ್ ಶ್ಲಾಘಿಸಿದ್ದಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

1 hour ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

1 hour ago

ಮಣ್ಣಿನ ಘಮ, ನಾಟಿ ಸಂಭ್ರಮ, ಗ್ರಾಮೀಣ ಕ್ರೀಡೆಗಳ ಉತ್ಸಾಹ

ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ  ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…

1 hour ago

ಮಳೆ ಕೊರತೆ; ರೈತರ ಕೈ ಸೇರದ ಬೆಳೆಗಳು

ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…

1 hour ago

ದುಬಾರಿ ಬಾಡಿಗೆ: ಬಾಡಿಗೆದಾರರಿಲ್ಲದೆ ಖಾಲಿ ಬಿದ್ದ ಮಳಿಗೆಗಳು

ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…

1 hour ago