ಕೊಡಗು : ಕಳೆದ ೧೫ ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರಿಂದಾಗಿ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಕಾವೇರಿ ನದಿ ಪ್ರವಾಹದಿಂದ ಮಡಿಕೇರಿ ತಾಲೂಕಿನ ಹಲವೆಡೆ ಅವಾಂತರಗಳು ಸೃಷ್ಠಿಯಾಗಿವೆ. ಪ್ರವಾಹದಿಂದ ರಾಜ್ಯದ ಹಲವು ರಾಜ್ಯ ಹೆದ್ದಾರಿಗಳು ಬಂದ್ ಆಗಿವೆ.
ನಾಪೋಕ್ಲು-ಚೆರಿಯಪರಂಬು, ನಾಪೋಕ್ಲು ಹೊದವಾಡ-ಬೊಳಿಬಾಣೆ ರಸ್ತೆ ಜಲಾವೃತಗೊಂಡಿದೆ. ಇದರಿಂದಾಗಿ ಅಕ್ಕಪಕ್ಕದ ಊರಿಗೆ ತೆರಳಲು ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಹದಲ್ಲಿ ರಸ್ತೆ ದಾಟಲು ಸಹ ವಾಹನ ಸವಾರರು ಸಹಾಸ ಮಾಡುವಂತ ಪರಿಸ್ಥಿತಿ ಇದೆ.
ಇನ್ನು ಜೋರು ಗಾಳಿ ಮಳೆಯಿಂದಾಗಿ ವಿರಾಜಪೇಟೆ ತಾಲೂಕಿನ ಹಾತೂರು ಗ್ರಾಮದ ಬಳಿ ಬೃಹತ್ ಮರ ಹೆದ್ದಾರಿ ಮೇಲೆಬಿದ್ದಿದ್ದು, ವಿರಾಜಪೇಟೆ-ಗೋಣಿಕೊಪ್ಪಲಿ ರಸ್ತೆ ಸಂಪರ್ಕ ಕಡಿತವಾಗಿದೆ. ಅರಣ್ಯ ಇಲಾಖೆಯಿಂದ ಮರ ತೆರವು ಕಾರ್ಯ ನಡೆಯುತ್ತಿದೆ.
ಮತ್ತೊಂದು ಕಡೆ ಅಪಾರವಾದ ಮಳೆಯಿಂದ ಜಿಲ್ಲೆಯಲ್ಲಿರುವ ಜಲಪಾತಗಳು ಭೋರ್ಗರೆಯುತ್ತಿವೆ. ಇದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಯಾವುದೇ ಜಲಪಾತಗಳಿಗೆ ಇಳಿದು ಸ್ನಾನ ಮಾಡುವುದು ಹಾಗೂ ನದಿ-ತೊರೆಗಳು ಝರಿಗಳು ಸಾರ್ವಜನಿಕ ಕೆರೆಗಳಲ್ಲೂ ಸ್ನಾನ ಮಾಡುವುದನ್ನ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್ಸ್ಟೆಬಲ್ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…
ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…
ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಈಗ ಎರಡನೇ ಬಾರಿ ಜಾಮೀನಿಗಾಗಿ…
ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…
ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…
1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…