ಕೊಡಗು : ಕಳೆದ ೧೫ ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರಿಂದಾಗಿ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಕಾವೇರಿ ನದಿ ಪ್ರವಾಹದಿಂದ ಮಡಿಕೇರಿ ತಾಲೂಕಿನ ಹಲವೆಡೆ ಅವಾಂತರಗಳು ಸೃಷ್ಠಿಯಾಗಿವೆ. ಪ್ರವಾಹದಿಂದ ರಾಜ್ಯದ ಹಲವು ರಾಜ್ಯ ಹೆದ್ದಾರಿಗಳು ಬಂದ್ ಆಗಿವೆ.
ನಾಪೋಕ್ಲು-ಚೆರಿಯಪರಂಬು, ನಾಪೋಕ್ಲು ಹೊದವಾಡ-ಬೊಳಿಬಾಣೆ ರಸ್ತೆ ಜಲಾವೃತಗೊಂಡಿದೆ. ಇದರಿಂದಾಗಿ ಅಕ್ಕಪಕ್ಕದ ಊರಿಗೆ ತೆರಳಲು ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಹದಲ್ಲಿ ರಸ್ತೆ ದಾಟಲು ಸಹ ವಾಹನ ಸವಾರರು ಸಹಾಸ ಮಾಡುವಂತ ಪರಿಸ್ಥಿತಿ ಇದೆ.
ಇನ್ನು ಜೋರು ಗಾಳಿ ಮಳೆಯಿಂದಾಗಿ ವಿರಾಜಪೇಟೆ ತಾಲೂಕಿನ ಹಾತೂರು ಗ್ರಾಮದ ಬಳಿ ಬೃಹತ್ ಮರ ಹೆದ್ದಾರಿ ಮೇಲೆಬಿದ್ದಿದ್ದು, ವಿರಾಜಪೇಟೆ-ಗೋಣಿಕೊಪ್ಪಲಿ ರಸ್ತೆ ಸಂಪರ್ಕ ಕಡಿತವಾಗಿದೆ. ಅರಣ್ಯ ಇಲಾಖೆಯಿಂದ ಮರ ತೆರವು ಕಾರ್ಯ ನಡೆಯುತ್ತಿದೆ.
ಮತ್ತೊಂದು ಕಡೆ ಅಪಾರವಾದ ಮಳೆಯಿಂದ ಜಿಲ್ಲೆಯಲ್ಲಿರುವ ಜಲಪಾತಗಳು ಭೋರ್ಗರೆಯುತ್ತಿವೆ. ಇದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಯಾವುದೇ ಜಲಪಾತಗಳಿಗೆ ಇಳಿದು ಸ್ನಾನ ಮಾಡುವುದು ಹಾಗೂ ನದಿ-ತೊರೆಗಳು ಝರಿಗಳು ಸಾರ್ವಜನಿಕ ಕೆರೆಗಳಲ್ಲೂ ಸ್ನಾನ ಮಾಡುವುದನ್ನ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…