ಕೊಡಗು : ಕಳೆದ ೧೫ ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರಿಂದಾಗಿ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಕಾವೇರಿ ನದಿ ಪ್ರವಾಹದಿಂದ ಮಡಿಕೇರಿ ತಾಲೂಕಿನ ಹಲವೆಡೆ ಅವಾಂತರಗಳು ಸೃಷ್ಠಿಯಾಗಿವೆ. ಪ್ರವಾಹದಿಂದ ರಾಜ್ಯದ ಹಲವು ರಾಜ್ಯ ಹೆದ್ದಾರಿಗಳು ಬಂದ್ ಆಗಿವೆ.
ನಾಪೋಕ್ಲು-ಚೆರಿಯಪರಂಬು, ನಾಪೋಕ್ಲು ಹೊದವಾಡ-ಬೊಳಿಬಾಣೆ ರಸ್ತೆ ಜಲಾವೃತಗೊಂಡಿದೆ. ಇದರಿಂದಾಗಿ ಅಕ್ಕಪಕ್ಕದ ಊರಿಗೆ ತೆರಳಲು ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಹದಲ್ಲಿ ರಸ್ತೆ ದಾಟಲು ಸಹ ವಾಹನ ಸವಾರರು ಸಹಾಸ ಮಾಡುವಂತ ಪರಿಸ್ಥಿತಿ ಇದೆ.
ಇನ್ನು ಜೋರು ಗಾಳಿ ಮಳೆಯಿಂದಾಗಿ ವಿರಾಜಪೇಟೆ ತಾಲೂಕಿನ ಹಾತೂರು ಗ್ರಾಮದ ಬಳಿ ಬೃಹತ್ ಮರ ಹೆದ್ದಾರಿ ಮೇಲೆಬಿದ್ದಿದ್ದು, ವಿರಾಜಪೇಟೆ-ಗೋಣಿಕೊಪ್ಪಲಿ ರಸ್ತೆ ಸಂಪರ್ಕ ಕಡಿತವಾಗಿದೆ. ಅರಣ್ಯ ಇಲಾಖೆಯಿಂದ ಮರ ತೆರವು ಕಾರ್ಯ ನಡೆಯುತ್ತಿದೆ.
ಮತ್ತೊಂದು ಕಡೆ ಅಪಾರವಾದ ಮಳೆಯಿಂದ ಜಿಲ್ಲೆಯಲ್ಲಿರುವ ಜಲಪಾತಗಳು ಭೋರ್ಗರೆಯುತ್ತಿವೆ. ಇದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಯಾವುದೇ ಜಲಪಾತಗಳಿಗೆ ಇಳಿದು ಸ್ನಾನ ಮಾಡುವುದು ಹಾಗೂ ನದಿ-ತೊರೆಗಳು ಝರಿಗಳು ಸಾರ್ವಜನಿಕ ಕೆರೆಗಳಲ್ಲೂ ಸ್ನಾನ ಮಾಡುವುದನ್ನ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…