ಕೊಡಗು

ಮಹಿಳೆಯರ ಸಬಲೀಕರಣಕ್ಕೆ ಹಲವು ಕಾರ್ಯಕ್ರಮ: ವೀಣಾ ಅಚ್ಚಯ್ಯ

ಮಡಿಕೇರಿ: ಸರ್ಕಾರ ಮಹಿಳೆಯರ ಸಬಲೀಕರಣಕ್ಕೆ ಗೃಹಲಕ್ಷ್ಮಿ, ಶಕ್ತಿ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಇವುಗಳನ್ನು ಬಳಸಿಕೊಂಡು ಅಭಿವೃದ್ಧಿಯತ್ತ ಮುನ್ನಡೆಯಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಕಾರದಲ್ಲಿ ನಗರ ದಸರಾ ಸಮಿತಿ ವತಿಯಿಂದ ಗಾಂಧಿ ಮೈದಾನದಲ್ಲಿ ಮಂಗಳವಾರ ನಡೆದ ‘ಮಹಿಳಾ ದಸರಾ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಮಹಿಳೆಯರು ರಾಜಕೀಯ, ಆರ್ಥಿಕ, ವಾಣಿಜ್ಯ, ಆಡಳಿತ, ಬಾಹ್ಯಾಕಾಶ, ಕ್ರೀಡೆ, ಸಿನಿಮಾ, ಹೀಗೆ ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ ಎಂದು ವೀಣಾ ಅಚ್ಚಯ್ಯ ಅವರು ಬಣ್ಣಿಸಿದರು.

ಪಟ್ಟಣ, ನಗರ ಮತ್ತು ಬೃಹತ್ ನಗರಗಳಲ್ಲಿ ಮಹಿಳೆಯರು ಮುಂಚೂಣಿಯಲ್ಲಿದ್ದು, ಗ್ರಾಮೀಣ ಪ್ರದೇಶದ ಮಹಿಳೆಯರಿಗೂ ಅವಕಾಶಗಳು ಒದಗಬೇಕು ಎಂದು ವೀಣಾ ಅಚ್ಚಯ್ಯ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಮಹಿಳೆಯರು ಸಾಮಾಜಿಕ ಹಾಗು ಸಾರ್ವಜನಿಕ ಕ್ಷೇತ್ರಗಳಲ್ಲಿ ಮತ್ತಷ್ಟು ತೊಡಗಿಸಿಕೊಂಡಲ್ಲಿ ಶ್ರೇಯೋಭಿವೃದ್ಧಿ ಮತ್ತಷ್ಟು ಹೆಚ್ಚಲಿದೆ. ರಾಷ್ಟ್ರದ ಅಭಿವೃದ್ಧಿಗೆ ಮಹಿಳೆಯರ ಪಾತ್ರ ಹೆಚ್ಚಿನದ್ದಾಗಿದೆ ಎಂದು ನುಡಿದರು.

ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮಾಜಿ ಅಧ್ಯಕ್ಷರಾದ ಕೆ.ಪಿ.ಚಂದ್ರಕಲಾ ಮಾತನಾಡಿ ಮಹಿಳೆಯರಿಗೆ ರಾಜಕೀಯ ಕ್ಷೇತ್ರದಲ್ಲಿ ಶೇ.50ರಷ್ಟು ಮೀಸಲು ಶೀಘ್ರ ಜಾರಿಯಾಗಬೇಕು ಎಂದು ಅವರು ಒತ್ತಾಯಿಸಿದರು.
ಮಹಿಳಾ ಮತ್ತು ಪುರುಷ ಸಮಾನವಾಗಿ ಬದುಕಿದಾಗ ಸಮಾಜ ಅಭಿವೃದ್ಧಿ ಸಾಧ್ಯ ಎಂಬುದನ್ನು ಮರೆಯುವಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಗಂಡು-ಹೆಣ್ಣು ಸಮಾನರು ಎಂಬುದನ್ನು ಅರಿತುಕೊಳ್ಳಬೇಕು ಎಂದರು.

ಈ ಹಿಂದೆ ಸ್ತ್ರೀಶಕ್ತಿ ಸಂಘಗಳನ್ನು ಸ್ಥಾಪಿಸುವ ಮೂಲಕ ಸರ್ಕಾರ ಮಹಿಳೆಯರ ಸಬಲೀಕರಣಕ್ಕೆ ಶ್ರಮಿಸಿತು ಎಂಬುದನ್ನು ಮರೆಯಬಾರದು ಎಂದು ಅವರು ಇದೇ ಸಂದರ್ಭದಲ್ಲಿ ಸ್ಮರಿಸಿದರು.
ಮಹಿಳೆಯರು ಸಹಕಾರ ಸಂಘ ಸಂಸ್ಥೆಗಳ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಆರ್ಥಿಕ, ಕುಟುಂಬ, ಸಾಮಾಜಿಕ, ಜೀವನ ನಿರ್ವಹಣೆ ಅರಿತು ಕೊಳ್ಳಬೇಕು. ಹೀಗಾದಾಗ ರಾಷ್ಟ್ರದ ಅಭಿವೃದ್ಧಿ ಸಾಧ್ಯ. ಆ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯಬೇಕು ಎಂದು ಕೆ.ಪಿ.ಚಂದ್ರಕಲಾ ಅವರು ಪ್ರತಿಪಾದಿಸಿದರು.

ಮಹಿಳಾ ದಸರಾಗೆ ದಿವ್ಯ ಮಂತರ್ ಗೌಡ ಅವರು ಚಾಲನೆ ನೀಡಿದರು. ನಗರಸಭಾ ಸದಸ್ಯರಾದ ಅನಿತಾ ಪೂವಯ್ಯ, ಸವಿತಾ ರಾಕೇಶ್, ಚಿತ್ರಾವತಿ, ಕಲಾವತಿ, ಪ್ರಮುಖರಾದ ಜುಲೈಕಾಭಿ, ಲೀಲಾ ಶೇಷಮ್ಮ, ಸೂರಯ್ಯಾ ಅಬ್ರಾರ್, ಉಷಾ, ಎಚ್.ಎನ್.ಶಾರದ, ಸವಿತಾ, ಸೀತಾಲಕ್ಷ್ಮಿ, ರಜನಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಬ್ಬಂದಿಗಳು, ಅಂಗನವಾಡಿ, ಆಶಾ ಕಾರ್ಯಕರ್ತರು ಇತರರು ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮೂರು ಮರಿಗಳಿಗೆ ಜನ್ಮ ನೀಡಿದ ಗಾಮಿನಿ ಚೀತಾ

ಮಧ್ಯಪ್ರದೇಶ: ಇಲ್ಲಿನ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಗಾಮಿನಿ ಚೀತಾ ಮೂರು ಮರಿಗಳಿಗೆ ಜನ್ಮ ನೀಡಿದೆ. ಕೇಂದ್ರ ಪರಿಸರ ಸಚಿವ ಭೂಪೇಂದರ್‌…

11 mins ago

ಗ್ರಾಮದೇವತೆ ಹಬ್ಬದಲ್ಲಿ ಅವಘಡ: ಬಂಡಿ ಓಡಿಸುವಾಗ ಕೆಳಗೆ ಬಿದ್ದು ಯುವಕ ಸಾವು

ಮೈಸೂರು: ಗ್ರಾಮದೇವತೆ ಹಬ್ಬದಲ್ಲಿ ಬಂಡಿ ಓಡಿಸುವಾಗ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ತಲಕಾಡು ಗ್ರಾಮದಲ್ಲಿ ನಡೆದಿದೆ.…

1 hour ago

ಹುಣಸೂರು| ಅಕ್ರಮ ರಸಗೊಬ್ಬರ ದಾಸ್ತಾನು ಗೋದಾಮಿನ ಮೇಲೆ ದಾಳಿ: 1296 ಮೂಟೆ ಯೂರಿಯಾ ವಶ

ಹುಣಸೂರು: ತಾಲ್ಲೂಕಿನ ಸಾಲುಮರದ ತಿಮ್ಮಕ್ಕ ಉದ್ಯಾನವನ ಪಕ್ಕದ ಕಲ್‌ಬೆಟ್ಟದ ಬಳಿ ಗೋಡೌನ್ ಒಂದರಲ್ಲಿ ೧೮ ಲಕ್ಷ ರೂ. ಮೌಲ್ಯದ ೧,೨೯೬…

1 hour ago

ಓದುಗರ ಪತ್ರ: ಫ್ಲೆಕ್ಸ್ ಹಾವಳಿಗೆ ಕಡಿವಾಣ ಹಾಕಿ

ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಫ್ಲೆಕ್ಸ್ ಹಾವಳಿ ಮಿತಿ ಮೀರಿದ್ದು, ರಸ್ತೆ ಬದಿಯಲ್ಲಿ ಹಾಕಿರುವ ಬೃಹದಾಕಾರದ ಫ್ಲೆಕ್ಸ್‌ಗಳಿಂದಾಗಿ ಪ್ರತಿನಿತ್ಯ ರಸ್ತೆಯಲ್ಲಿ ಸಂಚರಿಸುವ…

4 hours ago

ಓದುಗರ ಪತ್ರ: ಪಾರದರ್ಶಕ ಆಡಳಿತಾತ್ಮಕ ವ್ಯವಸ್ಥೆ ಜಾರಿಯಾಗಲಿ

ಉತ್ತರ ಪ್ರದೇಶ ಸರ್ಕಾರವು ಆ ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ‘ಮಾನವ ಸಂಪದ್ ಪೋರ್ಟಲ್’ ಎಂಬ ಅಧಿಕೃತ…

4 hours ago

ಓದುಗರ ಪತ್ರ: ಕಸ ತೆರವುಗೊಳಿಸಿ

ಹುಣಸೂರು ತಾಲ್ಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ಗ್ರಾಪಂನವರು ಸಕಾಲಕ್ಕೆ ಕಸ ವಿಲೇವಾರಿ ಮಾಡದೇ ಇರುವುದರಿಂದ ಕಸದ ರಾಶಿಯೇ ಬಿದ್ದಿದ್ದು, ಸೊಳ್ಳೆ, ನೊಣಗಳ…

4 hours ago