ಮಡಿಕೇರಿ : ಜಮ್ಮಾ, ಸಿ ಮತ್ತು ಡಿ ಲ್ಯಾಂಡ್ ಹಾಗೂ ವನ್ಯಜೀವಿ ಸಂಘರ್ಷಗಳ ಕುರಿತು ಅರಣ್ಯ ಸಚಿವ ಈಶ್ವರ ಖಂಡ್ರೆರವರ ಕಚೇರಿಯಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು, ಶಾಸಕರಾದ ಎ.ಎಸ್. ಪೊನ್ನಣ್ಣ, ಡಾ.ಮಂಥರ್ ಗೌಡ ಅವರುಗಳ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಯಿತು.
ಶಾಸಕ ಎ.ಎಸ್. ಪೊನ್ನಣ್ಣ ಮಾತನಾಡಿ, ಜಮ್ಮಾಮಲೆ ಹಿಡುವಳಿದಾರರ ಆಸ್ತಿ ಹಕ್ಕು ರಕ್ಷಣೆ ಮಾಡಬೇಕು. ಈ ಬಗ್ಗೆ ಶ್ರೀಘ್ರವಾಗಿ ಕ್ರಮ ವಹಿಸಬೇಕೆಂದು ಒತ್ತಾಯಿಸಿದರು. ಸಚಿವರು ಕೂಡಲೇ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದರು.
ಸಿ ಮತ್ತು ಡಿ ಲ್ಯಾಂಡ್ ಬಗ್ಗೆ ಜಂಟಿ ಸರ್ವೆ ಮಾಡಿ ಹಿಡುವಳಿದಾರರಿಗೆ ನ್ಯಾಯ ಒದಗಿಸಬೇಕು. ಕೊಡಗು ಜಿಲ್ಲೆಯಲ್ಲಿ ಆನೆಗಳ ಹಾವಳಿಯಿಂದ ಮಾನವ-ಪ್ರಾಣ ಹಾನಿಯನ್ನು ಹೆಚ್ಚಾಗುತ್ತಿದೆ. ಇದನ್ನು ತಡೆಗಟ್ಟಬೇಕು, ಆನೆ, ಹುಲಿಗಳ ನಿರಂತರ ದಾಳಿಯಿಂದ ಕೊಡಗಿನ ರೈತಾಪಿ ಜನರ ಜೀವ ಹಾನಿ ಉಂಟಾಗುತ್ತಿದೆ. ಜೊತೆಗೆ ಕೃಷಿ ನಷ್ಟವನ್ನು ಅನುಭವಿಸುತ್ತಿದ್ದಾರೆ. ಹುಲಿ ಮತ್ತು ಆನೆಗಳನ್ನು ಸ್ಥಳಾಂತರಿಸಿ ಜೀವ ಹಾನಿ ಉಂಟಾಗುವುದನ್ನು ಅಧಿಕಾರಿಗಳು ಶೀಘ್ರವಾಗಿ ತಡೆಗಟ್ಟಬೇಕೆಂದು ಸಭೆಯಲ್ಲಿ ಪ್ರಸ್ತಾಪಿಸಿದರು.
ಸಚಿವರು ಇದಕ್ಕೆ ಪ್ರತಿಕ್ರಿಯಿಸಿ, ಅಧಿಕಾರಿಗಳು ಕೂಡಲೇ ಮಾನವನ ಪ್ರಾಣ ಹಾನಿಯಾಗದಂತೆ ಕ್ರಮ ವಹಿಸಿ, ಜನರಿಗೆ ಧೈರ್ಯ ತುಂಬಬೇಕು. ನಿರಂತರವಾಗಿ ಗ್ರಾಮಗಳಿಗೆ ಭೇಟಿ ನೀಡಿ ಜನರಿಗೆ ಅರಿವು ಮಾಡಿಸಲು ಕಾರ್ಯಪ್ರವೃತ್ತರಾಗಬೇಕೆಂದು ಸೂಚಿಸಿದರು.
ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳು, ಜಮ್ಮಾಮಲೆ ಅಸೋಷಿಯೇಷನ್ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…