Oplus_131072
ಮಡಿಕೇರಿ: ಕೆಲವು ಖಾಸಗಿ ಹಣಕಾಸು ಸಂಸ್ಥೆಗಳು, ಬಡ ಕೂಲಿ ಕಾರ್ಮಿಕರಿಗೆ ಹಾಗೂ ಇತರರಿಗೆ ಯಾವುದೇ ಆಧಾರವಿಲ್ಲದೇ ಲಕ್ಷಾಂತರ ರೂ. ಸಾಲ ನೀಡಿ ಸಾಲ ವಸೂಲಾತಿಗಾಗಿ ಕಿರುಕುಳ ನೀಡುತ್ತಿರುವ ಬಗ್ಗೆ ಕುಶಾಲನಗರದ ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ.ಎಲ್. ವಿಶ್ವ ತಾಲ್ಲೂಕು ತಹಶೀಲ್ದಾರ್ ಮನವಿ ಸಲ್ಲಿಸಿ ಖಾಸಗಿ ಹಣಕಾಸು ಸಂಸ್ಥೆಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೀನುಕೊಲ್ಲಿ ಹಾಡಿ, ಗುಳಿಗ ಪೈಸಾರಿ ಮತ್ತು ಗ್ರಾಮ ಪಂಚಾಯಿತಿಯ ಇತರೆ ಭಾಗಗಳಲ್ಲಿ ವಾಸಿಸುತ್ತಿರುವ ಬಡ ಕಾರ್ಮಿಕರು, ದಿನನಿತ್ಯದ ಜೀವನ ನಡೆಸಲು ಕೂಲಿ ನಡೆಸಿಕೊಂಡು ಬದುಕು ಕಟ್ಟಿಕೊಂಡಿರುವ ಜನರು ಕೆಲವು ಖಾಸಗಿ ಹಣಕಾಸು ಸಂಸ್ಥೆಗಳಿಂದ ಲಕ್ಷಾಂತರ ರೂಪಾಯಿಗಳನ್ನು ಅಧಿಕ ಬಡ್ಡಿಗೆ ಸಾಲವಾಗಿ ಪಡೆದುಕೊಂಡಿದ್ದು, ಇತ್ತೀಚಿನ ದಿನಗಳಲ್ಲಿ ಅಸಲು ಮತ್ತು ಬಡ್ಡಿ ಮರು ಪಾವತಿಸಲು ಸಾಧ್ಯವಾಗದೇ ಹಾಗೂ ಖಾಸಗಿ ಹಣಕಾಸು ಸಂಸ್ಥೆಗಳ ಕಿರುಕುಳ ತಾಳಲಾರದೆ ಕೆಲವರು ಊರು ಬಿಟ್ಟಿರುತ್ತಾರೆ. ಈ ವಿಚಾರವಾಗಿ ಕೆಲವರು ಮೌಖಿಕವಾಗಿ ಗ್ರಾಮ ಪಂಚಾಯಿತಿಗೆ ಪುಕಾರು ನೀಡಿದ್ದರು.
ಈ ಹಿನ್ನೆಲೆಯಲ್ಲಿ ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸಿ.ಎಲ್. ವಿಶ್ವ, ಉಪಾಧ್ಯಕ್ಷರಾದ ಕುಸುಮ, ಸದಸ್ಯರುಗಳಾದ ಸಮೀರ, ಜಾಜಿರವರು ಕುಶಾಲನಗರ ತಹಶೀಲ್ದಾರ್ ರವರಿಗೆ ಖುದ್ದಾಗಿ ಮನವಿ ಸಲ್ಲಿಸಿ, ಪರಿಸ್ಥಿತಿಯ ಗಂಭೀರತೆಯ ಬಗ್ಗೆ ಮನದಟ್ಟು ಮಾಡಿಕೊಟ್ಟರು.
ಈ ಸಂದರ್ಭ ತಹಶೀಲ್ದಾರ್ ಅವರು ಮಾತನಾಡಿ, ಈ ವಿಚಾರದ ಬಗ್ಗೆ ಕ್ರಮ ತೆಗೆದುಕೊಳ್ಳುವುದಾಗಿ ಮತ್ತು ಜಿಲ್ಲಾಧಿಕಾರಿಗಳ ಗಮನಕ್ಕೆ ತರುವುದಾಗಿ ಹೇಳಿದರು.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…