ಕೊಡಗು

ಡ್ಯಾಂ ಪಕ್ಕದಲ್ಲೇ ಗಣಿಗಾರಿಕೆ: ಹಾರಂಗಿ ಡ್ಯಾಮ್‌ಗೂ ಕಾದಿದೆ ಕಂಟಕ?

ಕೊಡಗು: ಜಿಲ್ಲೆಯ ಏಕೈಕ ನೀರು ಸಂಗ್ರಹಣಾ ಜಲಾಶಯವಾಗಿರುವ ಹಾರಂಗಿ ಜಲಾಶಯಕ್ಕೆ ಈಗ ಆತಂಕ ಎದುರಾಗಿದೆ. ಜಿಲ್ಲೆಯ ಸಾವಿರಾರು ಎಕರೆ ಕೃಷಿಗೆ ನೀರು ಕೊಡುವ ಏಕೈಕ ಅಣೆಕಟ್ಟು ಇದಾಗಿದ್ದು, ಇಂದು ಇಂತಹ ಡ್ಯಾಂ ಗೂ ಕೂಡಾ ಕಂಟಕ ಎದುರಾಗಿದೆ.

ಡ್ಯಾಂ ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಟ್ಟ ಕೊರೆದು ಕಲ್ಲು ಗಣಿಗಾರಿಕೆ ಮಾಡುವ ಮೂಲಕ ಪರೋಕ್ಷವಾಗಿ ಡ್ಯಾಂಗೆ ತೊಂದರೆ ಉಂಟಾಗುತ್ತಿದೆ. 1982 ರಲ್ಲಿ ಉದ್ಘಾಟನೆಯಾದ 162ಅಡಿ ಎತ್ತರದ (8.50 TMC ಸಾಮರ್ಥ್ಯ) 2775.8 ಉದ್ದವಿರುವ ಅಣೆಕಟ್ಟು ಇಂದು ಕೆಆರ್‌ಎಸ್‌ ಜಲಾಶಯದ ರೀತಿಯಲ್ಲಿ ತೊಂದರೆಗೆ ಸಿಲುಕಲಿದೆ.

ಸೋಮವಾರ ಪೇಟೆ ತಾಲ್ಲೂಕಿನ ಹೊಸಳ್ಳಿ ವ್ಯಾಪ್ತಿಯ ಮತ್ತು ಕುಶಾಲನಗರ ನಗರ ವ್ಯಾಪ್ತಿಯಲ್ಲಿ ಸರ್ಕಾರಿ ಜಾಗದಲ್ಲಿ ಕಲ್ಲು ಗಣಿಗಾರಿಕೆ ನಡೆಯುವ ಮೂಲಕ ಪ್ರಕೃತಿ ಸಂಪತ್ತು ನಾಶವಾಗುತ್ತ ಬರತ್ತಿದ್ದು, ಇದರಿಂದ ಡ್ಯಾಂನ ಭದ್ರತೆಗೆ ಹೆಚ್ಚಿನ ಪೆಟ್ಟು ಬೀಳಲಿದೆ ಎಂದು ಸ್ಥಳೀಯರು ದೂರಿದ್ದಾರೆ.

ಸರ್ಕಾರದ, ಜಿಲ್ಲಾಡಳಿತದ ಎಲ್ಲಾ NOC ಮತ್ತು ಅನುಮತಿ ಪಡೆದು ನಡೆಯುತ್ತಿರುವ ಗಣಿಗಾರಿಕೆಯಾಗಿದ್ದು, ಆರಣ್ಯವ್ಯಾಪ್ತಿಯಲ್ಲಿ ಬಫೋರ್ ಜೋನ್ ಬಿಡದೆ ನಡೆಯುತ್ತಿದೆ. ಇದರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಈವರೆಗೆ ಯಾವುದೇ ಕ್ರಮ ಕೈಗೊಳ್ಳದೇ ಇರುವುದು ಬೇಸರದ ಸಂಗತಿಯಾಗಿದೆ.

100 ಅಡಿಗೂ ಹೆಚ್ಚು ಆಳದಲ್ಲಿ ಬಂಡೆ ಸಿಡಿಸಿ, ಭೂಮಿ ಕೊರೆದು ಗಣಿಗಾರಿಕೆ ನಡೆಯುತ್ತಿದ್ದು, ಇದರಿಂದ ಡ್ಯಾಂಗೆ ತೊಂದರೆಯಗಲಿದೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಕೆಆರ್‌ಎಸ್‌ ಅಣೆಕಟ್ಟಿನ ಸುತ್ತಮುತ್ತಲಿನ 20 ಕಿಲೋಮೀಟರ್ ದೂರದಲ್ಲಿ ಕಲ್ಲು ಗಣಿಗಾರಿಕೆ ನಡೆಸದಂತೆ ಕೋರ್ಟ್ ಆದೇಶ ಹೊರಡಿಸಿರುವ ರೀತಿಯಲ್ಲಿಯೇ ಹಾರಂಗಿ ಸುತಮುತ್ತಲಿನಲ್ಲಿ ಕಲ್ಲು ಗಣಿಗಾರಿಕೆ ತಡೆಯುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇನ್ನು ಈ ಡ್ಯಾಂ ಒಂದು ವೇಳೆ ಹಾನಿಗೆ ಒಳಗಾದಲ್ಲಿ ಅಕ್ಕಪಕ್ಕದ ಮೂರ್ನಾಲ್ಕು ಗ್ರಾಮಗಳು ಮುಳುಗಲಿದೆ. ಹಾಗೂ ಅಪಾರ ಪ್ರಮಾಣದ ಅಸ್ತಪಾಸ್ತಿಗೆ ಕೆಡುಕಾಗಲಿದೆ ಎಂದು ಸ್ಥಳೀಯರು ಬೇಸರ ಹೊರಹಾಕಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

7 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

7 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

7 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

8 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

8 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

8 hours ago