ಕೊಡಗು: ಜಿಲ್ಲೆಯ ಏಕೈಕ ನೀರು ಸಂಗ್ರಹಣಾ ಜಲಾಶಯವಾಗಿರುವ ಹಾರಂಗಿ ಜಲಾಶಯಕ್ಕೆ ಈಗ ಆತಂಕ ಎದುರಾಗಿದೆ. ಜಿಲ್ಲೆಯ ಸಾವಿರಾರು ಎಕರೆ ಕೃಷಿಗೆ ನೀರು ಕೊಡುವ ಏಕೈಕ ಅಣೆಕಟ್ಟು ಇದಾಗಿದ್ದು, ಇಂದು ಇಂತಹ ಡ್ಯಾಂ ಗೂ ಕೂಡಾ ಕಂಟಕ ಎದುರಾಗಿದೆ.
ಡ್ಯಾಂ ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಟ್ಟ ಕೊರೆದು ಕಲ್ಲು ಗಣಿಗಾರಿಕೆ ಮಾಡುವ ಮೂಲಕ ಪರೋಕ್ಷವಾಗಿ ಡ್ಯಾಂಗೆ ತೊಂದರೆ ಉಂಟಾಗುತ್ತಿದೆ. 1982 ರಲ್ಲಿ ಉದ್ಘಾಟನೆಯಾದ 162ಅಡಿ ಎತ್ತರದ (8.50 TMC ಸಾಮರ್ಥ್ಯ) 2775.8 ಉದ್ದವಿರುವ ಅಣೆಕಟ್ಟು ಇಂದು ಕೆಆರ್ಎಸ್ ಜಲಾಶಯದ ರೀತಿಯಲ್ಲಿ ತೊಂದರೆಗೆ ಸಿಲುಕಲಿದೆ.
ಸೋಮವಾರ ಪೇಟೆ ತಾಲ್ಲೂಕಿನ ಹೊಸಳ್ಳಿ ವ್ಯಾಪ್ತಿಯ ಮತ್ತು ಕುಶಾಲನಗರ ನಗರ ವ್ಯಾಪ್ತಿಯಲ್ಲಿ ಸರ್ಕಾರಿ ಜಾಗದಲ್ಲಿ ಕಲ್ಲು ಗಣಿಗಾರಿಕೆ ನಡೆಯುವ ಮೂಲಕ ಪ್ರಕೃತಿ ಸಂಪತ್ತು ನಾಶವಾಗುತ್ತ ಬರತ್ತಿದ್ದು, ಇದರಿಂದ ಡ್ಯಾಂನ ಭದ್ರತೆಗೆ ಹೆಚ್ಚಿನ ಪೆಟ್ಟು ಬೀಳಲಿದೆ ಎಂದು ಸ್ಥಳೀಯರು ದೂರಿದ್ದಾರೆ.
ಸರ್ಕಾರದ, ಜಿಲ್ಲಾಡಳಿತದ ಎಲ್ಲಾ NOC ಮತ್ತು ಅನುಮತಿ ಪಡೆದು ನಡೆಯುತ್ತಿರುವ ಗಣಿಗಾರಿಕೆಯಾಗಿದ್ದು, ಆರಣ್ಯವ್ಯಾಪ್ತಿಯಲ್ಲಿ ಬಫೋರ್ ಜೋನ್ ಬಿಡದೆ ನಡೆಯುತ್ತಿದೆ. ಇದರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಈವರೆಗೆ ಯಾವುದೇ ಕ್ರಮ ಕೈಗೊಳ್ಳದೇ ಇರುವುದು ಬೇಸರದ ಸಂಗತಿಯಾಗಿದೆ.
100 ಅಡಿಗೂ ಹೆಚ್ಚು ಆಳದಲ್ಲಿ ಬಂಡೆ ಸಿಡಿಸಿ, ಭೂಮಿ ಕೊರೆದು ಗಣಿಗಾರಿಕೆ ನಡೆಯುತ್ತಿದ್ದು, ಇದರಿಂದ ಡ್ಯಾಂಗೆ ತೊಂದರೆಯಗಲಿದೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.
ಕೆಆರ್ಎಸ್ ಅಣೆಕಟ್ಟಿನ ಸುತ್ತಮುತ್ತಲಿನ 20 ಕಿಲೋಮೀಟರ್ ದೂರದಲ್ಲಿ ಕಲ್ಲು ಗಣಿಗಾರಿಕೆ ನಡೆಸದಂತೆ ಕೋರ್ಟ್ ಆದೇಶ ಹೊರಡಿಸಿರುವ ರೀತಿಯಲ್ಲಿಯೇ ಹಾರಂಗಿ ಸುತಮುತ್ತಲಿನಲ್ಲಿ ಕಲ್ಲು ಗಣಿಗಾರಿಕೆ ತಡೆಯುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಇನ್ನು ಈ ಡ್ಯಾಂ ಒಂದು ವೇಳೆ ಹಾನಿಗೆ ಒಳಗಾದಲ್ಲಿ ಅಕ್ಕಪಕ್ಕದ ಮೂರ್ನಾಲ್ಕು ಗ್ರಾಮಗಳು ಮುಳುಗಲಿದೆ. ಹಾಗೂ ಅಪಾರ ಪ್ರಮಾಣದ ಅಸ್ತಪಾಸ್ತಿಗೆ ಕೆಡುಕಾಗಲಿದೆ ಎಂದು ಸ್ಥಳೀಯರು ಬೇಸರ ಹೊರಹಾಕಿದ್ದಾರೆ.
ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…
ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…
ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್ಸಿ ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಈ…
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಾಳೆ ಸರ್ವ ಪಕ್ಷಗಳ ಸಭೆ ಕರೆದಿದ್ದು, ವಿರೋಧ ಪಕ್ಷಗಳಿಗೆ ಪರಿಸ್ಥಿತಿ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಶಿವಪುರ ಸಮೀಪದ ಕಲ್ಲುಕಟ್ಟೆ ಬಳಿಯ ಜಮೀನಿನ ತೋಟದ ಮನೆಯ ಬಳಿ…