ಕೊಡಗು

ಡ್ಯಾಂ ಪಕ್ಕದಲ್ಲೇ ಗಣಿಗಾರಿಕೆ: ಹಾರಂಗಿ ಡ್ಯಾಮ್‌ಗೂ ಕಾದಿದೆ ಕಂಟಕ?

ಕೊಡಗು: ಜಿಲ್ಲೆಯ ಏಕೈಕ ನೀರು ಸಂಗ್ರಹಣಾ ಜಲಾಶಯವಾಗಿರುವ ಹಾರಂಗಿ ಜಲಾಶಯಕ್ಕೆ ಈಗ ಆತಂಕ ಎದುರಾಗಿದೆ. ಜಿಲ್ಲೆಯ ಸಾವಿರಾರು ಎಕರೆ ಕೃಷಿಗೆ ನೀರು ಕೊಡುವ ಏಕೈಕ ಅಣೆಕಟ್ಟು ಇದಾಗಿದ್ದು, ಇಂದು ಇಂತಹ ಡ್ಯಾಂ ಗೂ ಕೂಡಾ ಕಂಟಕ ಎದುರಾಗಿದೆ.

ಡ್ಯಾಂ ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಟ್ಟ ಕೊರೆದು ಕಲ್ಲು ಗಣಿಗಾರಿಕೆ ಮಾಡುವ ಮೂಲಕ ಪರೋಕ್ಷವಾಗಿ ಡ್ಯಾಂಗೆ ತೊಂದರೆ ಉಂಟಾಗುತ್ತಿದೆ. 1982 ರಲ್ಲಿ ಉದ್ಘಾಟನೆಯಾದ 162ಅಡಿ ಎತ್ತರದ (8.50 TMC ಸಾಮರ್ಥ್ಯ) 2775.8 ಉದ್ದವಿರುವ ಅಣೆಕಟ್ಟು ಇಂದು ಕೆಆರ್‌ಎಸ್‌ ಜಲಾಶಯದ ರೀತಿಯಲ್ಲಿ ತೊಂದರೆಗೆ ಸಿಲುಕಲಿದೆ.

ಸೋಮವಾರ ಪೇಟೆ ತಾಲ್ಲೂಕಿನ ಹೊಸಳ್ಳಿ ವ್ಯಾಪ್ತಿಯ ಮತ್ತು ಕುಶಾಲನಗರ ನಗರ ವ್ಯಾಪ್ತಿಯಲ್ಲಿ ಸರ್ಕಾರಿ ಜಾಗದಲ್ಲಿ ಕಲ್ಲು ಗಣಿಗಾರಿಕೆ ನಡೆಯುವ ಮೂಲಕ ಪ್ರಕೃತಿ ಸಂಪತ್ತು ನಾಶವಾಗುತ್ತ ಬರತ್ತಿದ್ದು, ಇದರಿಂದ ಡ್ಯಾಂನ ಭದ್ರತೆಗೆ ಹೆಚ್ಚಿನ ಪೆಟ್ಟು ಬೀಳಲಿದೆ ಎಂದು ಸ್ಥಳೀಯರು ದೂರಿದ್ದಾರೆ.

ಸರ್ಕಾರದ, ಜಿಲ್ಲಾಡಳಿತದ ಎಲ್ಲಾ NOC ಮತ್ತು ಅನುಮತಿ ಪಡೆದು ನಡೆಯುತ್ತಿರುವ ಗಣಿಗಾರಿಕೆಯಾಗಿದ್ದು, ಆರಣ್ಯವ್ಯಾಪ್ತಿಯಲ್ಲಿ ಬಫೋರ್ ಜೋನ್ ಬಿಡದೆ ನಡೆಯುತ್ತಿದೆ. ಇದರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಈವರೆಗೆ ಯಾವುದೇ ಕ್ರಮ ಕೈಗೊಳ್ಳದೇ ಇರುವುದು ಬೇಸರದ ಸಂಗತಿಯಾಗಿದೆ.

100 ಅಡಿಗೂ ಹೆಚ್ಚು ಆಳದಲ್ಲಿ ಬಂಡೆ ಸಿಡಿಸಿ, ಭೂಮಿ ಕೊರೆದು ಗಣಿಗಾರಿಕೆ ನಡೆಯುತ್ತಿದ್ದು, ಇದರಿಂದ ಡ್ಯಾಂಗೆ ತೊಂದರೆಯಗಲಿದೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಕೆಆರ್‌ಎಸ್‌ ಅಣೆಕಟ್ಟಿನ ಸುತ್ತಮುತ್ತಲಿನ 20 ಕಿಲೋಮೀಟರ್ ದೂರದಲ್ಲಿ ಕಲ್ಲು ಗಣಿಗಾರಿಕೆ ನಡೆಸದಂತೆ ಕೋರ್ಟ್ ಆದೇಶ ಹೊರಡಿಸಿರುವ ರೀತಿಯಲ್ಲಿಯೇ ಹಾರಂಗಿ ಸುತಮುತ್ತಲಿನಲ್ಲಿ ಕಲ್ಲು ಗಣಿಗಾರಿಕೆ ತಡೆಯುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇನ್ನು ಈ ಡ್ಯಾಂ ಒಂದು ವೇಳೆ ಹಾನಿಗೆ ಒಳಗಾದಲ್ಲಿ ಅಕ್ಕಪಕ್ಕದ ಮೂರ್ನಾಲ್ಕು ಗ್ರಾಮಗಳು ಮುಳುಗಲಿದೆ. ಹಾಗೂ ಅಪಾರ ಪ್ರಮಾಣದ ಅಸ್ತಪಾಸ್ತಿಗೆ ಕೆಡುಕಾಗಲಿದೆ ಎಂದು ಸ್ಥಳೀಯರು ಬೇಸರ ಹೊರಹಾಕಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ನಮ್ಮ ಪಕ್ಷವನ್ನು ಯಾರೂ ನಾಶ ಮಾಡಲು ಸಾಧ್ಯವಿಲ್ಲ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಜೆಡಿಎಸ್‌ ರೈತರಿಂದ ಬೆಳೆದ ಪಕ್ಷ, ನಾಶ ಮಾಡಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಹಾಸನ…

15 mins ago

ಗಣರಾಜ್ಯೋತ್ಸವ ಭಾಷಣ ಓದಲೂ ರಾಜ್ಯಪಾಲರ ತಗಾದೆ

ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನದ ವೇಳೆ ರಾಜ್ಯ ಸರ್ಕಾರದ ಭಾಷಣವನ್ನು ಸಂಪೂರ್ಣವಾಗಿ ಓದದೆ ಕೇವಲ ಎರಡು ಸಾಲಿನ ಭಾಷಣ ಓದಿ…

37 mins ago

2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಪ್ರಸಕ್ತ 2025-26ನೇ ಸಾಲಿನ ರಾಜ್ಯಮಟ್ಟದ ಎಸ್‍ಎಸ್‍ಎಲ್‍ಸಿ ಪೂರ್ವ ಸಿದ್ಧತಾ ಪರೀಕ್ಷೆ-2ರ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಜ.27…

56 mins ago

ಸರ್ಕಾರಿ ಕಾರ್ಯಕ್ರಮಗಳಲ್ಲಿ ಜನರ ಸುರಕ್ಷತೆ: ಹೊಸ ಸುತ್ತೋಲೆ

ಬೆಂಗಳೂರು: ಕರ್ನಾಟಕ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿದೆ. ಸರ್ಕಾರಿ ಕಾರ್ಯಕ್ರಮ, ರಾಷ್ಟ್ರೀಯ ಹಬ್ಬಗಳು, ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಲ್ಲಿ ಜನರ ಹಾಗೂ ಮಕ್ಕಳ ಸುರಕ್ಷತೆಗೆ…

2 hours ago

ಲಕ್ಕುಂಡಿ ಬೆನ್ನಲ್ಲೇ ಯಾದಗಿರಿಯಲ್ಲೂ ಉತ್ಖನನ ನಡೆಸಲು ಸಿದ್ಧತೆ

ಯಾದಗಿರಿ: ದೇವರದಾಸಿಮಯ್ಯ ಪುಣ್ಯಕ್ಷೇತ್ರ ಯಾದಗಿರಿ ಜಿಲ್ಲೆಯ ಮುದನೂರು ಗ್ರಾಮದಲ್ಲಿಯೂ ಉತ್ಖನನ ನಡೆಸಲು ಸಿದ್ಧತೆ ನಡೆದಿದೆ. ಮುದನೂರು ಗ್ರಾಮ ರಾಜ-ಮಹಾರಾಜರ ಕಾಲದಲ್ಲಿ…

2 hours ago

ಸಂಸದ ಯದುವೀರ್‌ ಒಡೆಯರ್‌ ಭೇಟಿಯಾದ ಪ್ರತಾಪ್‌ ಸಿಂಹ

ಮೈಸೂರು: ಮಾಜಿ ಸಂಸದ ಪ್ರತಾಪ್‌ ಸಿಂಹ ಅವರು ಸಂಸದ ಯದುವೀರ್‌ ಒಡೆಯರ್‌ ಅವರನ್ನು ಭೇಟಿಯಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು…

3 hours ago