ಕೊಡಗು

ಡ್ಯಾಂ ಪಕ್ಕದಲ್ಲೇ ಗಣಿಗಾರಿಕೆ: ಹಾರಂಗಿ ಡ್ಯಾಮ್‌ಗೂ ಕಾದಿದೆ ಕಂಟಕ?

ಕೊಡಗು: ಜಿಲ್ಲೆಯ ಏಕೈಕ ನೀರು ಸಂಗ್ರಹಣಾ ಜಲಾಶಯವಾಗಿರುವ ಹಾರಂಗಿ ಜಲಾಶಯಕ್ಕೆ ಈಗ ಆತಂಕ ಎದುರಾಗಿದೆ. ಜಿಲ್ಲೆಯ ಸಾವಿರಾರು ಎಕರೆ ಕೃಷಿಗೆ ನೀರು ಕೊಡುವ ಏಕೈಕ ಅಣೆಕಟ್ಟು ಇದಾಗಿದ್ದು, ಇಂದು ಇಂತಹ ಡ್ಯಾಂ ಗೂ ಕೂಡಾ ಕಂಟಕ ಎದುರಾಗಿದೆ.

ಡ್ಯಾಂ ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಟ್ಟ ಕೊರೆದು ಕಲ್ಲು ಗಣಿಗಾರಿಕೆ ಮಾಡುವ ಮೂಲಕ ಪರೋಕ್ಷವಾಗಿ ಡ್ಯಾಂಗೆ ತೊಂದರೆ ಉಂಟಾಗುತ್ತಿದೆ. 1982 ರಲ್ಲಿ ಉದ್ಘಾಟನೆಯಾದ 162ಅಡಿ ಎತ್ತರದ (8.50 TMC ಸಾಮರ್ಥ್ಯ) 2775.8 ಉದ್ದವಿರುವ ಅಣೆಕಟ್ಟು ಇಂದು ಕೆಆರ್‌ಎಸ್‌ ಜಲಾಶಯದ ರೀತಿಯಲ್ಲಿ ತೊಂದರೆಗೆ ಸಿಲುಕಲಿದೆ.

ಸೋಮವಾರ ಪೇಟೆ ತಾಲ್ಲೂಕಿನ ಹೊಸಳ್ಳಿ ವ್ಯಾಪ್ತಿಯ ಮತ್ತು ಕುಶಾಲನಗರ ನಗರ ವ್ಯಾಪ್ತಿಯಲ್ಲಿ ಸರ್ಕಾರಿ ಜಾಗದಲ್ಲಿ ಕಲ್ಲು ಗಣಿಗಾರಿಕೆ ನಡೆಯುವ ಮೂಲಕ ಪ್ರಕೃತಿ ಸಂಪತ್ತು ನಾಶವಾಗುತ್ತ ಬರತ್ತಿದ್ದು, ಇದರಿಂದ ಡ್ಯಾಂನ ಭದ್ರತೆಗೆ ಹೆಚ್ಚಿನ ಪೆಟ್ಟು ಬೀಳಲಿದೆ ಎಂದು ಸ್ಥಳೀಯರು ದೂರಿದ್ದಾರೆ.

ಸರ್ಕಾರದ, ಜಿಲ್ಲಾಡಳಿತದ ಎಲ್ಲಾ NOC ಮತ್ತು ಅನುಮತಿ ಪಡೆದು ನಡೆಯುತ್ತಿರುವ ಗಣಿಗಾರಿಕೆಯಾಗಿದ್ದು, ಆರಣ್ಯವ್ಯಾಪ್ತಿಯಲ್ಲಿ ಬಫೋರ್ ಜೋನ್ ಬಿಡದೆ ನಡೆಯುತ್ತಿದೆ. ಇದರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಈವರೆಗೆ ಯಾವುದೇ ಕ್ರಮ ಕೈಗೊಳ್ಳದೇ ಇರುವುದು ಬೇಸರದ ಸಂಗತಿಯಾಗಿದೆ.

100 ಅಡಿಗೂ ಹೆಚ್ಚು ಆಳದಲ್ಲಿ ಬಂಡೆ ಸಿಡಿಸಿ, ಭೂಮಿ ಕೊರೆದು ಗಣಿಗಾರಿಕೆ ನಡೆಯುತ್ತಿದ್ದು, ಇದರಿಂದ ಡ್ಯಾಂಗೆ ತೊಂದರೆಯಗಲಿದೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಕೆಆರ್‌ಎಸ್‌ ಅಣೆಕಟ್ಟಿನ ಸುತ್ತಮುತ್ತಲಿನ 20 ಕಿಲೋಮೀಟರ್ ದೂರದಲ್ಲಿ ಕಲ್ಲು ಗಣಿಗಾರಿಕೆ ನಡೆಸದಂತೆ ಕೋರ್ಟ್ ಆದೇಶ ಹೊರಡಿಸಿರುವ ರೀತಿಯಲ್ಲಿಯೇ ಹಾರಂಗಿ ಸುತಮುತ್ತಲಿನಲ್ಲಿ ಕಲ್ಲು ಗಣಿಗಾರಿಕೆ ತಡೆಯುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇನ್ನು ಈ ಡ್ಯಾಂ ಒಂದು ವೇಳೆ ಹಾನಿಗೆ ಒಳಗಾದಲ್ಲಿ ಅಕ್ಕಪಕ್ಕದ ಮೂರ್ನಾಲ್ಕು ಗ್ರಾಮಗಳು ಮುಳುಗಲಿದೆ. ಹಾಗೂ ಅಪಾರ ಪ್ರಮಾಣದ ಅಸ್ತಪಾಸ್ತಿಗೆ ಕೆಡುಕಾಗಲಿದೆ ಎಂದು ಸ್ಥಳೀಯರು ಬೇಸರ ಹೊರಹಾಕಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

2 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

3 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

3 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

6 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

6 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

7 hours ago