ಕೊಡಗು: ಜಿಲ್ಲೆಯ ಏಕೈಕ ನೀರು ಸಂಗ್ರಹಣಾ ಜಲಾಶಯವಾಗಿರುವ ಹಾರಂಗಿ ಜಲಾಶಯಕ್ಕೆ ಈಗ ಆತಂಕ ಎದುರಾಗಿದೆ. ಜಿಲ್ಲೆಯ ಸಾವಿರಾರು ಎಕರೆ ಕೃಷಿಗೆ ನೀರು ಕೊಡುವ ಏಕೈಕ ಅಣೆಕಟ್ಟು ಇದಾಗಿದ್ದು, ಇಂದು ಇಂತಹ ಡ್ಯಾಂ ಗೂ ಕೂಡಾ ಕಂಟಕ ಎದುರಾಗಿದೆ.
ಡ್ಯಾಂ ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಟ್ಟ ಕೊರೆದು ಕಲ್ಲು ಗಣಿಗಾರಿಕೆ ಮಾಡುವ ಮೂಲಕ ಪರೋಕ್ಷವಾಗಿ ಡ್ಯಾಂಗೆ ತೊಂದರೆ ಉಂಟಾಗುತ್ತಿದೆ. 1982 ರಲ್ಲಿ ಉದ್ಘಾಟನೆಯಾದ 162ಅಡಿ ಎತ್ತರದ (8.50 TMC ಸಾಮರ್ಥ್ಯ) 2775.8 ಉದ್ದವಿರುವ ಅಣೆಕಟ್ಟು ಇಂದು ಕೆಆರ್ಎಸ್ ಜಲಾಶಯದ ರೀತಿಯಲ್ಲಿ ತೊಂದರೆಗೆ ಸಿಲುಕಲಿದೆ.
ಸೋಮವಾರ ಪೇಟೆ ತಾಲ್ಲೂಕಿನ ಹೊಸಳ್ಳಿ ವ್ಯಾಪ್ತಿಯ ಮತ್ತು ಕುಶಾಲನಗರ ನಗರ ವ್ಯಾಪ್ತಿಯಲ್ಲಿ ಸರ್ಕಾರಿ ಜಾಗದಲ್ಲಿ ಕಲ್ಲು ಗಣಿಗಾರಿಕೆ ನಡೆಯುವ ಮೂಲಕ ಪ್ರಕೃತಿ ಸಂಪತ್ತು ನಾಶವಾಗುತ್ತ ಬರತ್ತಿದ್ದು, ಇದರಿಂದ ಡ್ಯಾಂನ ಭದ್ರತೆಗೆ ಹೆಚ್ಚಿನ ಪೆಟ್ಟು ಬೀಳಲಿದೆ ಎಂದು ಸ್ಥಳೀಯರು ದೂರಿದ್ದಾರೆ.
ಸರ್ಕಾರದ, ಜಿಲ್ಲಾಡಳಿತದ ಎಲ್ಲಾ NOC ಮತ್ತು ಅನುಮತಿ ಪಡೆದು ನಡೆಯುತ್ತಿರುವ ಗಣಿಗಾರಿಕೆಯಾಗಿದ್ದು, ಆರಣ್ಯವ್ಯಾಪ್ತಿಯಲ್ಲಿ ಬಫೋರ್ ಜೋನ್ ಬಿಡದೆ ನಡೆಯುತ್ತಿದೆ. ಇದರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಈವರೆಗೆ ಯಾವುದೇ ಕ್ರಮ ಕೈಗೊಳ್ಳದೇ ಇರುವುದು ಬೇಸರದ ಸಂಗತಿಯಾಗಿದೆ.
100 ಅಡಿಗೂ ಹೆಚ್ಚು ಆಳದಲ್ಲಿ ಬಂಡೆ ಸಿಡಿಸಿ, ಭೂಮಿ ಕೊರೆದು ಗಣಿಗಾರಿಕೆ ನಡೆಯುತ್ತಿದ್ದು, ಇದರಿಂದ ಡ್ಯಾಂಗೆ ತೊಂದರೆಯಗಲಿದೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.
ಕೆಆರ್ಎಸ್ ಅಣೆಕಟ್ಟಿನ ಸುತ್ತಮುತ್ತಲಿನ 20 ಕಿಲೋಮೀಟರ್ ದೂರದಲ್ಲಿ ಕಲ್ಲು ಗಣಿಗಾರಿಕೆ ನಡೆಸದಂತೆ ಕೋರ್ಟ್ ಆದೇಶ ಹೊರಡಿಸಿರುವ ರೀತಿಯಲ್ಲಿಯೇ ಹಾರಂಗಿ ಸುತಮುತ್ತಲಿನಲ್ಲಿ ಕಲ್ಲು ಗಣಿಗಾರಿಕೆ ತಡೆಯುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಇನ್ನು ಈ ಡ್ಯಾಂ ಒಂದು ವೇಳೆ ಹಾನಿಗೆ ಒಳಗಾದಲ್ಲಿ ಅಕ್ಕಪಕ್ಕದ ಮೂರ್ನಾಲ್ಕು ಗ್ರಾಮಗಳು ಮುಳುಗಲಿದೆ. ಹಾಗೂ ಅಪಾರ ಪ್ರಮಾಣದ ಅಸ್ತಪಾಸ್ತಿಗೆ ಕೆಡುಕಾಗಲಿದೆ ಎಂದು ಸ್ಥಳೀಯರು ಬೇಸರ ಹೊರಹಾಕಿದ್ದಾರೆ.
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…