ಕೊಡಗು

ಡ್ಯಾಂ ಪಕ್ಕದಲ್ಲೇ ಗಣಿಗಾರಿಕೆ: ಹಾರಂಗಿ ಡ್ಯಾಮ್‌ಗೂ ಕಾದಿದೆ ಕಂಟಕ?

ಕೊಡಗು: ಜಿಲ್ಲೆಯ ಏಕೈಕ ನೀರು ಸಂಗ್ರಹಣಾ ಜಲಾಶಯವಾಗಿರುವ ಹಾರಂಗಿ ಜಲಾಶಯಕ್ಕೆ ಈಗ ಆತಂಕ ಎದುರಾಗಿದೆ. ಜಿಲ್ಲೆಯ ಸಾವಿರಾರು ಎಕರೆ ಕೃಷಿಗೆ ನೀರು ಕೊಡುವ ಏಕೈಕ ಅಣೆಕಟ್ಟು ಇದಾಗಿದ್ದು, ಇಂದು ಇಂತಹ ಡ್ಯಾಂ ಗೂ ಕೂಡಾ ಕಂಟಕ ಎದುರಾಗಿದೆ.

ಡ್ಯಾಂ ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಟ್ಟ ಕೊರೆದು ಕಲ್ಲು ಗಣಿಗಾರಿಕೆ ಮಾಡುವ ಮೂಲಕ ಪರೋಕ್ಷವಾಗಿ ಡ್ಯಾಂಗೆ ತೊಂದರೆ ಉಂಟಾಗುತ್ತಿದೆ. 1982 ರಲ್ಲಿ ಉದ್ಘಾಟನೆಯಾದ 162ಅಡಿ ಎತ್ತರದ (8.50 TMC ಸಾಮರ್ಥ್ಯ) 2775.8 ಉದ್ದವಿರುವ ಅಣೆಕಟ್ಟು ಇಂದು ಕೆಆರ್‌ಎಸ್‌ ಜಲಾಶಯದ ರೀತಿಯಲ್ಲಿ ತೊಂದರೆಗೆ ಸಿಲುಕಲಿದೆ.

ಸೋಮವಾರ ಪೇಟೆ ತಾಲ್ಲೂಕಿನ ಹೊಸಳ್ಳಿ ವ್ಯಾಪ್ತಿಯ ಮತ್ತು ಕುಶಾಲನಗರ ನಗರ ವ್ಯಾಪ್ತಿಯಲ್ಲಿ ಸರ್ಕಾರಿ ಜಾಗದಲ್ಲಿ ಕಲ್ಲು ಗಣಿಗಾರಿಕೆ ನಡೆಯುವ ಮೂಲಕ ಪ್ರಕೃತಿ ಸಂಪತ್ತು ನಾಶವಾಗುತ್ತ ಬರತ್ತಿದ್ದು, ಇದರಿಂದ ಡ್ಯಾಂನ ಭದ್ರತೆಗೆ ಹೆಚ್ಚಿನ ಪೆಟ್ಟು ಬೀಳಲಿದೆ ಎಂದು ಸ್ಥಳೀಯರು ದೂರಿದ್ದಾರೆ.

ಸರ್ಕಾರದ, ಜಿಲ್ಲಾಡಳಿತದ ಎಲ್ಲಾ NOC ಮತ್ತು ಅನುಮತಿ ಪಡೆದು ನಡೆಯುತ್ತಿರುವ ಗಣಿಗಾರಿಕೆಯಾಗಿದ್ದು, ಆರಣ್ಯವ್ಯಾಪ್ತಿಯಲ್ಲಿ ಬಫೋರ್ ಜೋನ್ ಬಿಡದೆ ನಡೆಯುತ್ತಿದೆ. ಇದರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಈವರೆಗೆ ಯಾವುದೇ ಕ್ರಮ ಕೈಗೊಳ್ಳದೇ ಇರುವುದು ಬೇಸರದ ಸಂಗತಿಯಾಗಿದೆ.

100 ಅಡಿಗೂ ಹೆಚ್ಚು ಆಳದಲ್ಲಿ ಬಂಡೆ ಸಿಡಿಸಿ, ಭೂಮಿ ಕೊರೆದು ಗಣಿಗಾರಿಕೆ ನಡೆಯುತ್ತಿದ್ದು, ಇದರಿಂದ ಡ್ಯಾಂಗೆ ತೊಂದರೆಯಗಲಿದೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಕೆಆರ್‌ಎಸ್‌ ಅಣೆಕಟ್ಟಿನ ಸುತ್ತಮುತ್ತಲಿನ 20 ಕಿಲೋಮೀಟರ್ ದೂರದಲ್ಲಿ ಕಲ್ಲು ಗಣಿಗಾರಿಕೆ ನಡೆಸದಂತೆ ಕೋರ್ಟ್ ಆದೇಶ ಹೊರಡಿಸಿರುವ ರೀತಿಯಲ್ಲಿಯೇ ಹಾರಂಗಿ ಸುತಮುತ್ತಲಿನಲ್ಲಿ ಕಲ್ಲು ಗಣಿಗಾರಿಕೆ ತಡೆಯುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಇನ್ನು ಈ ಡ್ಯಾಂ ಒಂದು ವೇಳೆ ಹಾನಿಗೆ ಒಳಗಾದಲ್ಲಿ ಅಕ್ಕಪಕ್ಕದ ಮೂರ್ನಾಲ್ಕು ಗ್ರಾಮಗಳು ಮುಳುಗಲಿದೆ. ಹಾಗೂ ಅಪಾರ ಪ್ರಮಾಣದ ಅಸ್ತಪಾಸ್ತಿಗೆ ಕೆಡುಕಾಗಲಿದೆ ಎಂದು ಸ್ಥಳೀಯರು ಬೇಸರ ಹೊರಹಾಕಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

6 hours ago

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

6 hours ago

ಓದುಗರ ಪತ್ರ: ಆಹಾರ ಸರಬರಾಜಿಗೆ ಕಪ್ಪು ಪ್ಲಾಸ್ಟಿಕ್ ಡಬ್ಬಿಗಳನ್ನು ನಿಷೇಧಿಸಿ

ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…

6 hours ago

ಓದುಗರ ಪತ್ರ: ಅಧಿಕಾರಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಲಿ

ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…

6 hours ago

ಓದುಗರ ಪತ್ರ: ಎಸ್‌ಐಆರ್: ಸಂಪೂರ್ಣ ಮಾಹಿತಿ ನೀಡಿ

ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…

6 hours ago

ಅನನ್ಯಾಳ ಬದುಕು ಬದಲಾಯಿಸಿದ 20 ರೂಪಾಯಿ ನೋಟು

ಪಂಜು ಗಂಗೊಳ್ಳಿ  ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…

6 hours ago