ಮಡಿಕೇರಿ: ನಗರದ ಗಾಳಿ ಬೀಡಿನಲ್ಲಿರುವ ನವೋದಯ ಶಾಲೆಯಿಂದ ನಾಪತ್ತೆಯಾಗಿದ್ದ ಎಂ. ಅಮಿತ್ (17) ಎಂಬ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ.
ನವೋದಯ ಶಾಲೆಯ ಸಿಬ್ಬಂದಿ ಆನಂದ್ ಎಂಬವರ ಪುತ್ರನಾಗಿರುವ ಎಂ.ಅಮಿತ್ ಫೆ.11ರಂದು ಬೆಳಗೆ 7 ಗಂಟೆಗೆ ಶಾಲಾ ಆವರಣದಲ್ಲಿರುವ ಸಿಬ್ಬಂದಿಗಳ ವಸತಿ ಗೃಹದಿಂದ ಶಾಲೆಗೆಂದು ತೆರಳಿದ್ದಾನೆ. 11 ಗಂಟೆಯ ವೇಳೆಗೆ ಅಮಿತ್ ಶಾಲೆಯ ಮುಖ್ಯ ದ್ವಾರದ ಮೂಲಕ ರಸ್ತೆ ಕಡೆಗೆ ಬಂದಿದ್ದಾನೆ.
ಇದನ್ನು ಕಂಡ ಅಲ್ಲಿನ ಸೆಕ್ಯುರಿಟಿ ಸಿಬ್ಬಂದಿ, ಅಮಿತ್ ತಂದೆ ಆನಂದ್ ಅವರಿಗೆ ತಿಳಿಸಿದ್ದಾರೆ. ತಕ್ಷಣವೇ ಆನಂದ್ ರಸ್ತೆ ಕಡೆಗೆ ಬಂದಿದ್ದು, ಆದ್ರೆ ಅಮಿತ್ ಮಾತ್ರ ಕಂಡು ಬರಲಿಲ್ಲ. ಈ ಕುರಿತು ಆನಂದ್ ಮಡಿಕೇರಿ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು.
ಕೂಟುಪೊಳೆಯಲ್ಲಿ ಶೋಧ:
ಅಮಿತ್ ಚಪ್ಪಲಿ ಕೂಟುಪೊಳೆ ದಡದಲ್ಲಿ ಪತ್ತೆಯಾದ ಹಿನ್ನಲೆಯಲ್ಲಿ, ಅಗ್ನಿ ಶಾಮಕ ದಳದ ಸಿಬ್ಬಂದಿಗಳು ನಿನ್ನೆಯಿಂದ ಕೂಟುಪೊಳೆಯಲ್ಲಿ ಅಮಿತ್ಗಾಗಿ ಶೋಧ ನಡೆಸಿದರು.
ಪೊಲೀಸರ ಕೋರಿಕೆಯ ಮೇರೆಗೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ರ್ಯಾಫ್ಟ್ ಬೋಟ್ ಮೂಲಕ ಕೂಟುಹೊಳೆ ಮುಂಭಾಗದಿಂದ ಹಿನ್ನೀರಿನವರೆಗೂ ತೆರಳಿ ಶೋಧಿಸಿದರು. ಇದೀಗ ಮೃತ ದೇಹ ಕೂಟು ಪೊಳೆಯಲ್ಲಿ ಪತ್ತೆಯಾಗಿದೆ.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…