ಕೊಡಗು

ಕುಶಾಲನಗರ| ಕಳಪೆ ಕಾಮಗಾರಿಗೆ ಶಾಸಕ ಡಾ.ಮಂಥರ್ ಗೌಡ ಅಸಮಾಧಾನ

ಕುಶಾಲನಗರ: ಪುರಸಭೆ ವ್ಯಾಪ್ತಿಯ ಎರಡನೇ ವಾರ್ಡ್‌ನ ನಿಂಗೇಗೌಡ ಬಡಾವಣೆಯ ರಸ್ತೆಯ ಕಾಮಗಾರಿ ಉದ್ಘಾಟನೆಗೆ ಬಂದ ಶಾಸಕರು ಕಾಮಗಾರಿ ವೀಕ್ಷಿಸಿ ಅತೃಪ್ತಗೊಂಡು ಉದ್ಘಾಟಿಸದೇ ವಾಪಸ್ ತೆರಳಿದ ಘಟನೆ ನಡೆದಿದೆ. ಶಾಸಕ ಮಂಥರ್ ಗೌಡ ನಡೆಗೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿದೆ.

ಕುಶಾಲನಗರದ ಹೃದಯ ಭಾಗದಲ್ಲಿರುವ ನಿಂಗೇಗೌಡ ಬಡಾವಣೆಯ ಎರಡನೇ ಹಂತದ ಕಾಮಗಾರಿ ಉದ್ಘಾಟನೆಗೆ ಮಡಿಕೇರಿ ಕ್ಷೇತ್ರದ ಶಾಸಕ ಮಂಥರ್ ಗೌಡ ಸ್ಥಳಕ್ಕೆ ತೆರಳಿದ್ದರು. ಈ ವೇಳೆ ಕಾಮಗಾರಿ ಗುಣಮಟ್ಟದಿಂದ ಕೂಡಿರದೆ ಇರುವುದನ್ನು ಗಮನಿಸಿದ ಶಾಸಕರು, ಸಾರ್ವಜನಿಕ ಹಣದ ದುರುಪಯೋಗಕ್ಕೆ ಸಾಕ್ಷಿಯಾಗುವ ಕಾಮಗಾರಿಗೆ ಅಸಮಾಧಾನ ವ್ಯಕ್ತಪಡಿಸಿದರು. ಕಳಪೆ ಕಾಮಗಾರಿ ಎಂಬುದು ಸ್ಪಷ್ಟವಾದ ಹಿನ್ನೆಲೆಯಲ್ಲಿ ಉದ್ಘಾಟನೆಗೆಂದು ಬಂದಿದ್ದರೂ ಉದ್ಘಾಟನೆ ಮಾಡದೆ ಹಿಂತಿರುಗಿದ ಘಟನೆ ನಡೆಯಿತು.

ಈ ಕಾಮಗಾರಿಯ ಗುಣಮಟ್ಟವಾಗಿ ಸರಿ ಮಾಡಿಕೊಡದಿದ್ದರೆ ಯಾವುದೇ ಕಾರಣಕ್ಕೂ ಬಿಲ್ ಮಾಡಬಾರದೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ನಿಂಗೇಗೌಡ ನಿವಾಸಿಗಳು ಈ ಕಾಮಗಾರಿಯ ಗುಣಮಟ್ಟ ಚೆನ್ನಾಗಿದೆ ಎಂದು ಹೇಳಿದರೆ ಮಾತ್ರ ಬಿಲ್ ಪಾವತಿಯಾಗಲಿದೆ ಎಂದು ಶಾಸಕರು ಹೇಳಿದ್ದಾರೆ.

ಈ ವೇಳೆ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ. ಶಶಿಧರ್, ಕೂಡ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಗುಂಡೂರಾವ್, ನಗರ ಕಾಂಗ್ರೆಸಿನ ಅಧ್ಯಕ್ಷ ವಿಕ್ಟರ್ ಸೋನ್ಸ್, ಮಾಜಿ ಪುರಸಭೆ ಸದಸ್ಯ ವಿ.ಎಸ್. ಆನಂದ್ ಕುಮಾರ್ ಇತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಹನೂರು| 6 ಹಸುಗಳು ಅನುಮಾನಸ್ಪದ ಸಾವು: ವಿಷಪ್ರಾಶನ ಶಂಕೆ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಆರು ಹಸುಗಳು ಅನುಮಾನಸ್ಪದವಾಗಿ ಮೃತಪಟ್ಟಿರುವ ಘಟನೆ…

17 mins ago

ಸಿದ್ದಾಪುರ| ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಆನೆಗಳನ್ನು ಕಾಡಿಗಟ್ಟಿದ ಅರಣ್ಯ ಇಲಾಖೆ

ನವೀನ್‌ ಡಿಸೋಜ: ಕೊಡಗು ಜಿಲ್ಲಾ ವರದಿಗಾರರು  ಸಿದ್ದಾಪುರ: ತಿತಿಮತಿ ವಲಯದ ಚೆನ್ನಂಗಿ ಶಾಖೆಯ ವ್ಯಾಪ್ತಿಗೆ ಒಳಪಡುವ ಕೊಡಗು ಶ್ರೀರಂಗಪಟ್ಟಣ ಗ್ರಾಮದ…

45 mins ago

ಓದುಗರ ಪತ್ರ: ಗಾಂಜಾ ಮಾರಾಟ ತಡೆಗಟ್ಟಿ

ಗುಂಡ್ಲುಪೇಟೆ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಹಲವಾರು ಭಾಗಗಳಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ. ಕೆಲವು ಚಾಲಕರು ಗಾಂಜಾ ಸೇವಿಸಿ ವಾಹನ ಚಾಲನೆ…

2 hours ago

ಓದುಗರ ಪತ್ರ: ಕೇರಳದಲ್ಲಿ ಉಚಿತ ಶಿಕ್ಷಣ ಶ್ಲಾಘನೀಯ

ಇಂದು ಶಿಕ್ಷಣ ಎನ್ನುವುದು ವ್ಯಾಪಾರೀಕರಣವಾಗಿದ್ದು, ಪೋಷಕರು ದುಡಿಮೆಯ ಬಹುತೇಕ ಆದಾಯವನ್ನು ಮಕ್ಕಳ ಶಿಕ್ಷಣಕ್ಕೆ ಖರ್ಚು ಮಾಡುವುದು ಅನಿವಾರ್ಯವಾಗಿದೆ. ಕೇರಳ ಸರ್ಕಾರ…

2 hours ago

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ನಂಜನಗೂಡು ತಾಲ್ಲೂಕು ಬೆಳಗುಂದ ಗ್ರಾಮದಲ್ಲಿ ಬಸ್ ತಂಗುದಾಣವಿಲ್ಲದೆ ಪ್ರತಿದಿನ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲಿಯೇ…

2 hours ago

ಓದುಗರ ಪತ್ರ: ಬಸ್‌ಗಳ ಮೇಲೆ ಗುಟ್ಕಾ ಜಾಹೀರಾತು ನಿಷೇಧ ಸ್ವಾಗತಾರ್ಹ

ರಾಜ್ಯ ರಸ್ತೆ ಸಾರಿಗೆ ನಿಗಮ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ನಿಗಮದ ಬಸ್‌ಗಳ ಮೇಲೆ ಅಳವಡಿಸಿರುವ ಗುಟ್ಕಾ ಹಾಗೂ ತಂಬಾಕು…

2 hours ago