ಕೊಡಗು

ಕುಶಾಲನಗರ| ಕಳಪೆ ಕಾಮಗಾರಿಗೆ ಶಾಸಕ ಡಾ.ಮಂಥರ್ ಗೌಡ ಅಸಮಾಧಾನ

ಕುಶಾಲನಗರ: ಪುರಸಭೆ ವ್ಯಾಪ್ತಿಯ ಎರಡನೇ ವಾರ್ಡ್‌ನ ನಿಂಗೇಗೌಡ ಬಡಾವಣೆಯ ರಸ್ತೆಯ ಕಾಮಗಾರಿ ಉದ್ಘಾಟನೆಗೆ ಬಂದ ಶಾಸಕರು ಕಾಮಗಾರಿ ವೀಕ್ಷಿಸಿ ಅತೃಪ್ತಗೊಂಡು ಉದ್ಘಾಟಿಸದೇ ವಾಪಸ್ ತೆರಳಿದ ಘಟನೆ ನಡೆದಿದೆ. ಶಾಸಕ ಮಂಥರ್ ಗೌಡ ನಡೆಗೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿದೆ.

ಕುಶಾಲನಗರದ ಹೃದಯ ಭಾಗದಲ್ಲಿರುವ ನಿಂಗೇಗೌಡ ಬಡಾವಣೆಯ ಎರಡನೇ ಹಂತದ ಕಾಮಗಾರಿ ಉದ್ಘಾಟನೆಗೆ ಮಡಿಕೇರಿ ಕ್ಷೇತ್ರದ ಶಾಸಕ ಮಂಥರ್ ಗೌಡ ಸ್ಥಳಕ್ಕೆ ತೆರಳಿದ್ದರು. ಈ ವೇಳೆ ಕಾಮಗಾರಿ ಗುಣಮಟ್ಟದಿಂದ ಕೂಡಿರದೆ ಇರುವುದನ್ನು ಗಮನಿಸಿದ ಶಾಸಕರು, ಸಾರ್ವಜನಿಕ ಹಣದ ದುರುಪಯೋಗಕ್ಕೆ ಸಾಕ್ಷಿಯಾಗುವ ಕಾಮಗಾರಿಗೆ ಅಸಮಾಧಾನ ವ್ಯಕ್ತಪಡಿಸಿದರು. ಕಳಪೆ ಕಾಮಗಾರಿ ಎಂಬುದು ಸ್ಪಷ್ಟವಾದ ಹಿನ್ನೆಲೆಯಲ್ಲಿ ಉದ್ಘಾಟನೆಗೆಂದು ಬಂದಿದ್ದರೂ ಉದ್ಘಾಟನೆ ಮಾಡದೆ ಹಿಂತಿರುಗಿದ ಘಟನೆ ನಡೆಯಿತು.

ಈ ಕಾಮಗಾರಿಯ ಗುಣಮಟ್ಟವಾಗಿ ಸರಿ ಮಾಡಿಕೊಡದಿದ್ದರೆ ಯಾವುದೇ ಕಾರಣಕ್ಕೂ ಬಿಲ್ ಮಾಡಬಾರದೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ನಿಂಗೇಗೌಡ ನಿವಾಸಿಗಳು ಈ ಕಾಮಗಾರಿಯ ಗುಣಮಟ್ಟ ಚೆನ್ನಾಗಿದೆ ಎಂದು ಹೇಳಿದರೆ ಮಾತ್ರ ಬಿಲ್ ಪಾವತಿಯಾಗಲಿದೆ ಎಂದು ಶಾಸಕರು ಹೇಳಿದ್ದಾರೆ.

ಈ ವೇಳೆ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ. ಶಶಿಧರ್, ಕೂಡ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಗುಂಡೂರಾವ್, ನಗರ ಕಾಂಗ್ರೆಸಿನ ಅಧ್ಯಕ್ಷ ವಿಕ್ಟರ್ ಸೋನ್ಸ್, ಮಾಜಿ ಪುರಸಭೆ ಸದಸ್ಯ ವಿ.ಎಸ್. ಆನಂದ್ ಕುಮಾರ್ ಇತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

10 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

11 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

13 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

13 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

17 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

17 hours ago