MLA Mantar Gowda
ಕುಶಾಲನಗರ: ಕೊಡಗು ಜಿಲ್ಲೆಯಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಗಾಳಿ-ಮಳೆಯಿಂದ ಮರಗಳು ಧರೆಗುರುಳಿ ಅನಾಹುತ ಸಂಭವಿಸಿದ್ದು, ಮಳೆ ಹಾನಿ ಪ್ರದೇಶಗಳಿಗೆ ಶಾಸಕ ಮಂತರ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆದಿದ್ದಾರೆ.
ಸೋಮವಾರಪೇಟೆಯ ಚೌಡ್ಲು ಗ್ರಾಮ ಪಂಚಾಯತ್ ಹಾಗೂ ಬೇಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಳೆಯಿಂದ ವಿದ್ಯುತ್ ಕಂಬ ಹಾನಿಗೀಡಾದ ಪ್ರದೇಶಕ್ಕೆ ಶಾಸಕ ಡಾ.ಮಂತರ್ ಗೌಡ ರವರು ಭೇಟಿ ನೀಡಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಪರಿಹಾರ ಕ್ರಮಕ್ಕೆ ಸೂಚನೆ ನೀಡಿದರು.
ಕುಶಾಲನಗರ ತಾಲ್ಲೂಕಿನ 7ನೇ ಹೊಸಕೋಟೆ ಪಂಚಾಯತ್ ವ್ಯಾಪ್ತಿಗೆ ಸೇರಿದ ಉರುಗುಪ್ಪ 3ನೇ ವಾರ್ಡ್ನ ಮೊಹಮದ್ ಅವರ ಮನೆಯ ಮೇಲೆ ಮರ ಬಿದ್ದು ಹಾನಿಯಾದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದರು.
ಕುಶಾಲನಗರ ತಾಲ್ಲೂಕಿನ ವಾಲ್ನೂರು ತ್ಯಾಗತೂರ್ನ ಅತ್ತಿ ಮಂಗಲ ಜಂಕ್ಷನ್ನಲ್ಲಿ ರಸ್ತೆಗೆ ಭಾರೀ ಗಾತ್ರದ ಮರ ಬಿದ್ದು ಹಾನಿಯಾದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಧಿಕಾರಿಗಳು ಸಾರ್ವಜನಿಕರಿಗೆ ಸೂಕ್ತ ರೀತಿಯಲ್ಲಿ ಸ್ಪಂದನೆ ನೀಡುವಂತೆ ಹಾಗೂ ಸೂಕ್ತ ಪರಿಹಾರ ನೀಡುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಕುಶಾಲನಗರ ತಹಶೀಲ್ದಾರ್, ಪಂಚಾಯಿತಿ ಪಿಡಿಒ, ಅರಣ್ಯ ಅಧಿಕಾರಿಗಳು, ಸ್ಥಳೀಯರು, ಮುಖಂಡರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಂಗಳೂರು: ಕೆಂಪೇಗೌಡ ಏರ್ಪೋರ್ಟ್ನಲ್ಲಿ ಇಂದು ಕೂಡ 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ…
ನಂಜನಗೂಡಿನ ಸದ್ವೈದ್ಯ ಶಾಲಾ ಸಂಸ್ಥಾಪಕರಾಗಿದ್ದ ಬಿ.ವಿ.ಪಂಡಿತರು ಆಯುರ್ವೇದ ಉತ್ಪನ್ನಗಳನ್ನು ರೂಪಿಸಿದ ಹಿರಿಮೆ ಹೊಂದಿದ್ದಾರೆ. ದಂತಧಾವನ ಚೂರ್ಣ (ನಂಜನಗೂಡು ಹಲ್ಲು ಪುಡಿ)…
ಮೈಸೂರಿನಲ್ಲಿ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕ ನಿರ್ಮಾಣ ಹಾಗೂ ಬೇಲೂರಿನಲ್ಲಿ ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ವಸ್ತು ಸಂಗ್ರಹಾಲಯ…
ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಇತಿಹಾಸ ಪ್ರಸಿದ್ಧ ಕ್ಷೇತ್ರ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ಪ್ರವೇಶವಿರುವುದಿಲ್ಲ. ರಾಜ್ಯ ರಸ್ತೆ ಸಾರಿಗೆ ನಿಗಮದ…
ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನ ಆರಂಭವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಸದನದಲ್ಲಿ ಯಾವುದೇ ವಿಷಯ, ಜನರ ಸಮಸ್ಯೆ, ಮಸೂದೆಗಳ ಬಗ್ಗೆ ರಚನಾತ್ಮಕ ಚರ್ಚೆ…
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಡೆವಿಲ್ ಚಿತ್ರ ಇಂದು ರಾಜ್ಯಾದ್ಯಂತ ರಿಲೀಸ್ ಆಗಿದ್ದು, ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.…