ಸಿದ್ದಾಪುರ : ಇತ್ತೀಚೆಗೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಕಾವೇರಿ ನದಿ ನೀರಿನ ಮಟ್ಟ ಏರಿಕೆ ಕಂಡು ಪ್ರವಾಹದ ಭೀತಿಯನ್ನು ಎದುರಿಸುತ್ತಿದ್ದ ನಿಲ್ಲುವುದಿಕೇರಿ ಗ್ರಾಮಕ್ಕೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬೆಟ್ಟದಕಾಡು ನಲ್ವತ್ಎಕ್ರೆ, ಕುಂಬಾರ ಗುಂಡಿ ನದಿ ದಡ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದರು. ನದಿದಡ ವ್ಯಾಪ್ತಿಯ ರಸ್ತೆಗಳಲ್ಲಿ ಓಡಾಡಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದರೊಂದಿಗೆ ಗ್ರಾಮದಲ್ಲಿ ಹಲವು ಸಮಸ್ಯೆಗಳಿದ್ದು, ಕೂಡಲೇ ಬಗೆಹರಿಸಬೇಕೆಂದು ಗ್ರಾಮಸ್ಥರು ಶಾಸಕರನ್ನು ಒತ್ತಾಯಿಸಿದರು.
ಶಾಸಕ ಮಂಥರ್ ಗೌಡ ಮಾತನಾಡಿ, ರಸ್ತೆ ದುರಸ್ತಿಗೆ ತುರ್ತು ಕ್ರಮ ಕೈಗೊಳ್ಳಲಾಗುತ್ತಿದ್ದು, ತಾತ್ಕಾಲಿಕ ಗುಂಡಿ ಮುಚ್ಚುವ ಕೆಲಸ ಮಾಡಲು ಸೂಚಿಸಲಾಗಿದೆ. ಮಳೆಗಾಲದ ನಂತರ ಗುಣಮಟ್ಟದ ರಸ್ತೆ ಕಾಮಗಾರಿ ಮಾಡಲಾಗುವುದು ಎಂದು ಹೇಳಿದರು.
ಗ್ರಾಪಂ ಮಾಜಿ ಅಧ್ಯಕ್ಷ ಸಾಬು ವರ್ಗಿಸ್ ಮಾತನಾಡಿದರು. ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್, ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ, ಸದಸ್ಯರಾದ ಎ.ಕೆ.ಹಕೀಂ, ಅಶೋಕ್, ಹನೀಫ್, ಮುಸ್ತಾಫಾ, ಶಫಿಯ, ಕೆ.ಎಂ.ಬಶೀರ್, ಕೆ.ಎಂ.ಭಾವ, ಕಾಂಗ್ರೆಸ್ ಮುಖಂಡರಾದ ಸಂಶು, ಅಬ್ದುಲ್ಲ, ಸಿ.ಎಂ.ಹಂಸ ಹಾಜರಿದ್ದರು.
ಚೆನ್ನೈ : ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್ ಅವರ ಕಾರು ಚಾಲಕನ…
ಮೈಸೂರು : ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು ಲಭಿಸಿದ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಜೆಪಿ…
ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.…
ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…
ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್ಡಿಎ…