ಮಡಿಕೇರಿ: ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ಮಡಿಕೇರಿ ಜಿಲ್ಲಾಡಳಿತ ಕಟ್ಟಡದಲ್ಲಿ ನೂತನ ಸಂಸದ ಕಚೇರಿಯನ್ನು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಸಾರ್ವಜನಿಕರು ತಮ್ಮ ಸಮಸ್ಯೆಗಳ ಅಹವಾಲುಗಳನ್ನು ನಮಗೆ ನೇರವಾಗಿ ತಲುಪಿಸಬಹುದು.. ಇಲ್ಲಿ ಇನ್ನು ಮಂದಿನ ದಿನಗಳಲ್ಲಿ ನಮ್ಮ ಸಲಹೆಗಾರರು ವಾರದ ಎಲ್ಲಾ ದಿವಸಗಳು ನಮ್ಮ ಕಚೇರಿಯಲ್ಲಿ ಇರುತ್ತಾರೆ. ನಾನು ಸಹ ವಾರದಲ್ಲಿ ಒಂದು ದಿನ ಸಾರ್ವಜನಿಕರಿಗೆ ಸಿಗುವ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.
ವಿಕಸಿತ ಭಾರತದಲ್ಲಿ ಕೊಡಗಿನ ಗ್ರಾಮ ಮಟ್ಟದ ಸೇವೆಗಳಿಗೆ ನಾನು ಸದಾ ಬದ್ಧನಾಗಿ ನಿಮ್ಮ ಸೇವೆ ಮಾಡಲು ಸಿದ್ದನಿದ್ದೇನೆ. ಕೊಡಗಿನ ಕುಶಾಲನಗರದಿಂದ ಶ್ರೀರಂಗಪಟ್ಟಣದವರೆಗಿನ ಕೆಂದ್ರ ಹೆದ್ದಾರಿಯ ಕಾಮಗಾರಿ ಅತಿ ಶೀಘ್ರದಲ್ಲಿ ಚಾಲನೆ ನೀಡಿ ಕೊಡಗಿನ ಜನತೆಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಹೇಳಿದರು.
ಮಾಜಿ ವಿಧಾನಸಭಾಧ್ಯಕ್ಷರಾದ ಕೆ ಜಿ ಬೋಪಯ್ಯ, ಮಾಜಿ ಸಚಿವರಾದ ಅಪ್ಪಚ್ಚು ರಂಜನ್, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ರವಿ ಕಾಳಪ್ಪ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ರವಿ ಕುಶಾಲಪ್ಪ, ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಅನಿತಾ ಪೂವಯ್ಯ, ಮಹೇಶ್ ಜೈನಿ, ನಾಗೇಶ್ ಕುಂದಾಲ್ಪಡಿ ಮತ್ತಿತರ ಪ್ರಮುಖರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…