ಕೊಡಗು: ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತಮ್ಮ ಕಚೇರಿಯಲ್ಲಿಯೇ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಮಡಿಕೇರಿಯಲ್ಲಿ ಇಂದು(ಜನವರಿ.11) ನಮ್ಮ ಸಾರ್ವಜನಿಕರ ಕಚೇರಿಗೆ ಆಗಮಿಸಿದ್ದ ಸಾರ್ವಜನಿಕರ ಕುಂದು-ಕೊರತೆಗಳನ್ನು ಆಲಿಸಿ ಅವರ ಅಹವಾಲುಗಳನ್ನು ಸ್ವೀಕರಿಸಲಾಯಿತು ಎಂದು ತಿಳಿಸಿದ್ದಾರೆ.
ಅಹವಾಲುಗಳನ್ನು ಪರಿಶೀಲಿಸಿ ಶೀಘ್ರದಲ್ಲೇ ಪರಿಹಾರ ಕಲ್ಪಿಸುವ ಭರವಸೆ ನೀಡಿದೆ. ಸಾಧ್ಯವಾದಷ್ಟು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸಲಾಯಿತು ಎಂದು ಹೇಳಿದ್ದಾರೆ.
ಮುದ್ದಂಡ ಕಪ್ ಹಾಕಿ ಉತ್ಸವ”ದ ಲೋಗೊ ಬಿಡುಗಡೆ ಕಾರ್ಯಕ್ರಮ
ಮಡಿಕೇರಿಯ ಕಾವೇರಿ ಹಾಲ್ನಲ್ಲಿ ಇಂದು(ಜನವರಿ.11) ಹಮ್ಮಿಕೊಂಡಿದ್ದ ಕೊಡವ ಕುಟುಂಬಗಳ ನಡುವಿನ ಹಾಕಿ ಉತ್ಸವದ 25ನೇ ವರ್ಷದ ಪಂದ್ಯಾವಳಿಯ “ಮುದ್ದಂಡ ಕಪ್ ಹಾಕಿ ಉತ್ಸವ”ದ ಲೋಗೊ ಬಿಡುಗಡೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿˌ ಪಂದ್ಯಾವಳಿಯ ಲೋಗೊವನ್ನು ಅನಾವರಣಗೊಳಿಸಿˌ ನಂತರ ಕಾರ್ಯಕ್ರಮವನ್ನು ಉದ್ದೇಶಿ ಮಾತನಾಡಿದೆ ಎಂದಿದ್ದಾರೆ.
ಈ ಸಂದರ್ಭದಲ್ಲಿ ಶಾಸಕರಾದ ಡಾ.ಮಂತರ್ ಗೌಡ, ವಿಧಾನ ಪರಿಷತ್ನ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಬಿಜೆಪಿಯ ಹಿರಿಯ ಮುಖಂಡ ಕೆ.ಜಿ.ಬೋಪಯ್ಯˌ ಮುದ್ದಂಡ ಕುಟುಂಬದ ಪಟ್ಟೇದಾರ ಮುದ್ದಂಡ ಡಾಲಿ ತಿಮ್ಮಯ್ಯˌ ಹಾಗೂ ಹಾಕಿ ಅಕಾಡೆಮಿಯ ಮುಖ್ಯಸ್ಥರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು ಎಂದು ತಿಳಿಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…