ಕೊಡಗು

ವಾಣಿಜ್ಯ ಸಚಿವ ಪಿಯೂಷ್ ಗೋಯಲ್‌ಗೆ ಮನವಿ ಸಲ್ಲಿಸಿದ ಸಂಸದ ಯದುವೀರ್

ಕಾಫಿ ಬೆಳಗಾರರ ಸಹಕಾರ ಸಂಘದ ಸಮಸ್ಯೆ ಬಗೆಹರಿಸಿ

ಹೊಸದಿಲ್ಲಿ : ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘದ ಆರ್ಥಿಕ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಿರುವ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘ ಈಗ ತೀವ್ರ ಆರ್ಥಿಕ ಸಂಕಷ್ಟಕ್ಕೊಳಗಾಗಿದ್ದು, ಕೇಂದ್ರ ವಾಣಿಜ್ಯ ಸಚಿವಾಲಯ ಮತ್ತು ಹಣಕಾಸು ಸಚಿವಾಲಯ ಮಧ್ಯ ಪ್ರವೇಶಿಸಿ ಪರಿಹಾರ ದೊರಕಿಸಿಕೊಡಬೇಕು ಎಂದು ಹೊಸದಿಲ್ಲಿಯಲ್ಲಿ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

೧೯೫೬ರಲ್ಲಿ ಸ್ಥಾಪನೆಯಾದ ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘವು, ಕೊಡಗು, ಮೈಸೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ೧೦ರಿಂದ ೧೨ ಸಾವಿರಕ್ಕೂ ಹೆಚ್ಚು ಸಣ್ಣ ಮತ್ತು ಮಧ್ಯಮ ಕಾಫಿ ಬೆಳೆಗಾರರಿಗೆ ಬೆಂಬಲವಾಗಿ ನಿಂತಿದೆ. ಸುಮಾರು ೪೦,೦೦೦ ಕುಟುಂಬಗಳಿಗೆ ಬೆನ್ನೆಲುಬಾಗಿದೆ. ಸಾವಿರಾರು ಎಸ್ಟೇಟ್ ಕಾರ್ಮಿಕರಿಗೆ ಉದ್ಯೋಗ ನೀಡಿದೆ. ಇಂಥ ಸಂಘ ಮಾರುಕಟ್ಟೆ ಏರಿಳಿತಗಳು ಹಾಗೂ ಬಂಡವಾಳದ ಕೊರತೆಯಿಂದಾಗಿ, ೧೯೯೫-೯೬ ರಲ್ಲಿ ೬.೮೫ ಕೋಟಿ ನಷ್ಟವನ್ನು ಅನುಭವಿಸಿತು ಎಂದು ತಿಳಿಸಲಾಗಿದೆ ಎಂದು ವಿವರಿಸಿದ್ದಾರೆ.

ಭಾರಿ ಬಡ್ಡಿ ಹೇರಿಕೆ:
ಕಾಫಿ ಮಂಡಳಿಯು ೧೨.೯.೨೦೧೧ರಂದು ನೀಡಿದ ತೀರ್ಪಿನ ಪ್ರಕಾರ, ಸೊಸೈಟಿಯು ೧,೫೫,೨೮,೦೩೪ ಬಡ್ಡಿ ಪಾವತಿಸಲು ಸೂಚಿಸಿತ್ತು. ನಂತರ ಕಾಫಿ ಮಂಡಳಿಯು ೨೦.೦೯.೨೦೧೫ರಂದು ಪತ್ರ ಬರೆದು, ಅಸಲು ಪಾವತಿಸಿದರೆ ಬಡ್ಡಿ ಮನ್ನಾ ಮಾಡುವ ಅವಕಾಶ ಒದಗಿಸಿತ್ತು. ಅದರನ್ವಯ ಸೊಸೈಟಿಯು ೨೨.೧೨.೨೦೧೫ರಂದು ೧,೫೫,೨೮,೦೯೦ ರೂ. ಪಾವತಿಸಿತು. ಆದರೆ ೨೦೧೭ರಲ್ಲಿ ಕಾಫಿ ಮಂಡಳಿಯು ೫,೮೩,೮೫,೧೫೫ ರೂ. ಬಡ್ಡಿ ವಿಽಸಿ ಮತ್ತು ಹೆಚ್ಚಿನ ಮೊತ್ತದ ವೆಚ್ಚವನ್ನು ಪಾವತಿಸಲು ಪತ್ರ ಬರೆಯಿತು ಎಂದು ಕೇಂದ್ರ ಸಚಿವರಿಗೆ ವಸ್ತುಸ್ಥಿತಿ ತಿಳಿಸಿದರು.

ಸೊಸೈಟಿಯು ಈಗ ತೀವ್ರ ಆರ್ಥಿಕ ಬಿಕ್ಕಟ್ಟಿನಲ್ಲಿದ್ದು, ೧೩.೧೩ ಕೋಟಿ ರೂ. ನಷ್ಟ ಅನುಭವಿಸಿದೆ. ಈ ಸಂದರ್ಭದಲ್ಲಿ ಬಡ್ಡಿ ಪಾವತಿಸಲು ಸಾಧ್ಯವಾಗುತ್ತಿಲ್ಲ. ಒಂದು ವೇಳೆ ಬಡ್ಡಿ ಪಾವತಿಸಿದರೆ, ಸೊಸೈಟಿಯು ಆರ್ಥಿಕವಾಗಿ ದಿವಾಳಿಯಾಗಲಿದೆ. ಇದರಿಂದ ಸುಮಾರು ಒಂದು ಲಕ್ಷ ಜನರು ತೀವ್ರ ಪರಿಣಾಮ ಎದುರಿಸಬೇಕಾದೀತು ಎಂದು ಮನವರಿಕೆ ಮಾಡಿಕೊಟ್ಟಿದ್ದಾರೆ.

ಈ ನಿಟ್ಟಿನಲ್ಲಿ ವಾಣಿಜ್ಯ ಸಚಿವರು ಕೂಡಲೇ ಮಧ್ಯಪ್ರವೇಶಿಸಿ, ಸೊಸೈಟಿಯನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡಬೇಕು. ಈ ಸಂಬಂಧ ಹಣಕಾಸು ಸಚಿವಾಲಯದ ಜೊತೆಗೆ ಸಮನ್ವಯ ಸಾಽಸಿ ಸಂಸ್ಥೆಗೆ ಸೂಕ್ತ ಪರಿಹಾರ ಹಾಗೂ ನೆರವು ನೀಡಬೇಕು ಎಂದು ಮನವಿ ಮಡಿದ್ದಾರೆ. ಮನವಿ ಸ್ವೀಕರಿಸಿದ ಸಚಿವರು ಕೂಡಲೇ ಈ ಸಂಬಂಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಅಲರ್ಟ್‌ ಆದ ಲಾಟ್ಕರ್‌ : ಡ್ರಗ್ಸ್‌ ಜಾಲಮುಕ್ತಕ್ಕೆ ಪಣ : ದಿಢೀರ್‌ ದಾಳಿ

ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…

2 hours ago

ಫೆ.8ರಂದು ಸ್ವಚ್ಛತಾ ಓಟ : ʻಓಡೋಣ ಮೈಸೂರಿಗಾಗಿ-ಒಂದಾಗೋಣ ಸ್ವಚ್ಛತೆಗಾಗಿʼ

ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…

3 hours ago

ಗ್ರಾಮ ಪಂಚಾಯ್ತಿ ಅಧಿಕಾರ ಅವಧಿ ಮುಕ್ತಾಯ : ಈಗಿರುವ ಸದಸ್ಯರನ್ನೇ ಮುಂದುವರೆಸುತ್ತಾ ಸರ್ಕಾರ?

ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…

4 hours ago

ಪ್ರತ್ಯೇಕ ಕಳವು ಪ್ರಕರಣ : 11 ಮಂದಿ ಬಂಧನ

19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್‌ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…

5 hours ago

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…

5 hours ago

ಮಂಡ್ಯ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…

5 hours ago