ಕೊಡಗು

ವಾಣಿಜ್ಯ ಸಚಿವ ಪಿಯೂಷ್ ಗೋಯಲ್‌ಗೆ ಮನವಿ ಸಲ್ಲಿಸಿದ ಸಂಸದ ಯದುವೀರ್

ಕಾಫಿ ಬೆಳಗಾರರ ಸಹಕಾರ ಸಂಘದ ಸಮಸ್ಯೆ ಬಗೆಹರಿಸಿ

ಹೊಸದಿಲ್ಲಿ : ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘದ ಆರ್ಥಿಕ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಿರುವ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘ ಈಗ ತೀವ್ರ ಆರ್ಥಿಕ ಸಂಕಷ್ಟಕ್ಕೊಳಗಾಗಿದ್ದು, ಕೇಂದ್ರ ವಾಣಿಜ್ಯ ಸಚಿವಾಲಯ ಮತ್ತು ಹಣಕಾಸು ಸಚಿವಾಲಯ ಮಧ್ಯ ಪ್ರವೇಶಿಸಿ ಪರಿಹಾರ ದೊರಕಿಸಿಕೊಡಬೇಕು ಎಂದು ಹೊಸದಿಲ್ಲಿಯಲ್ಲಿ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

೧೯೫೬ರಲ್ಲಿ ಸ್ಥಾಪನೆಯಾದ ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘವು, ಕೊಡಗು, ಮೈಸೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ೧೦ರಿಂದ ೧೨ ಸಾವಿರಕ್ಕೂ ಹೆಚ್ಚು ಸಣ್ಣ ಮತ್ತು ಮಧ್ಯಮ ಕಾಫಿ ಬೆಳೆಗಾರರಿಗೆ ಬೆಂಬಲವಾಗಿ ನಿಂತಿದೆ. ಸುಮಾರು ೪೦,೦೦೦ ಕುಟುಂಬಗಳಿಗೆ ಬೆನ್ನೆಲುಬಾಗಿದೆ. ಸಾವಿರಾರು ಎಸ್ಟೇಟ್ ಕಾರ್ಮಿಕರಿಗೆ ಉದ್ಯೋಗ ನೀಡಿದೆ. ಇಂಥ ಸಂಘ ಮಾರುಕಟ್ಟೆ ಏರಿಳಿತಗಳು ಹಾಗೂ ಬಂಡವಾಳದ ಕೊರತೆಯಿಂದಾಗಿ, ೧೯೯೫-೯೬ ರಲ್ಲಿ ೬.೮೫ ಕೋಟಿ ನಷ್ಟವನ್ನು ಅನುಭವಿಸಿತು ಎಂದು ತಿಳಿಸಲಾಗಿದೆ ಎಂದು ವಿವರಿಸಿದ್ದಾರೆ.

ಭಾರಿ ಬಡ್ಡಿ ಹೇರಿಕೆ:
ಕಾಫಿ ಮಂಡಳಿಯು ೧೨.೯.೨೦೧೧ರಂದು ನೀಡಿದ ತೀರ್ಪಿನ ಪ್ರಕಾರ, ಸೊಸೈಟಿಯು ೧,೫೫,೨೮,೦೩೪ ಬಡ್ಡಿ ಪಾವತಿಸಲು ಸೂಚಿಸಿತ್ತು. ನಂತರ ಕಾಫಿ ಮಂಡಳಿಯು ೨೦.೦೯.೨೦೧೫ರಂದು ಪತ್ರ ಬರೆದು, ಅಸಲು ಪಾವತಿಸಿದರೆ ಬಡ್ಡಿ ಮನ್ನಾ ಮಾಡುವ ಅವಕಾಶ ಒದಗಿಸಿತ್ತು. ಅದರನ್ವಯ ಸೊಸೈಟಿಯು ೨೨.೧೨.೨೦೧೫ರಂದು ೧,೫೫,೨೮,೦೯೦ ರೂ. ಪಾವತಿಸಿತು. ಆದರೆ ೨೦೧೭ರಲ್ಲಿ ಕಾಫಿ ಮಂಡಳಿಯು ೫,೮೩,೮೫,೧೫೫ ರೂ. ಬಡ್ಡಿ ವಿಽಸಿ ಮತ್ತು ಹೆಚ್ಚಿನ ಮೊತ್ತದ ವೆಚ್ಚವನ್ನು ಪಾವತಿಸಲು ಪತ್ರ ಬರೆಯಿತು ಎಂದು ಕೇಂದ್ರ ಸಚಿವರಿಗೆ ವಸ್ತುಸ್ಥಿತಿ ತಿಳಿಸಿದರು.

ಸೊಸೈಟಿಯು ಈಗ ತೀವ್ರ ಆರ್ಥಿಕ ಬಿಕ್ಕಟ್ಟಿನಲ್ಲಿದ್ದು, ೧೩.೧೩ ಕೋಟಿ ರೂ. ನಷ್ಟ ಅನುಭವಿಸಿದೆ. ಈ ಸಂದರ್ಭದಲ್ಲಿ ಬಡ್ಡಿ ಪಾವತಿಸಲು ಸಾಧ್ಯವಾಗುತ್ತಿಲ್ಲ. ಒಂದು ವೇಳೆ ಬಡ್ಡಿ ಪಾವತಿಸಿದರೆ, ಸೊಸೈಟಿಯು ಆರ್ಥಿಕವಾಗಿ ದಿವಾಳಿಯಾಗಲಿದೆ. ಇದರಿಂದ ಸುಮಾರು ಒಂದು ಲಕ್ಷ ಜನರು ತೀವ್ರ ಪರಿಣಾಮ ಎದುರಿಸಬೇಕಾದೀತು ಎಂದು ಮನವರಿಕೆ ಮಾಡಿಕೊಟ್ಟಿದ್ದಾರೆ.

ಈ ನಿಟ್ಟಿನಲ್ಲಿ ವಾಣಿಜ್ಯ ಸಚಿವರು ಕೂಡಲೇ ಮಧ್ಯಪ್ರವೇಶಿಸಿ, ಸೊಸೈಟಿಯನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡಬೇಕು. ಈ ಸಂಬಂಧ ಹಣಕಾಸು ಸಚಿವಾಲಯದ ಜೊತೆಗೆ ಸಮನ್ವಯ ಸಾಽಸಿ ಸಂಸ್ಥೆಗೆ ಸೂಕ್ತ ಪರಿಹಾರ ಹಾಗೂ ನೆರವು ನೀಡಬೇಕು ಎಂದು ಮನವಿ ಮಡಿದ್ದಾರೆ. ಮನವಿ ಸ್ವೀಕರಿಸಿದ ಸಚಿವರು ಕೂಡಲೇ ಈ ಸಂಬಂಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಆಗಲಿ

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…

4 hours ago

ಓದುಗರ ಪತ್ರ: ಒಡೆಯರ್ ಪೋಸ್ಟ್ ಕಾರ್ಡ್ ಬಿಡುಗಡೆ ಶ್ಲಾಘನೀಯ

ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…

4 hours ago

ಓದುಗರ ಪತ್ರ: ಮೈಸೂರು ದಟ್ಟಗಳ್ಳಿಯ ಪಿನ್ ಕೋಡ್ ಸಮಸ್ಯೆ ನಿವಾರಿಸಿ

ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…

4 hours ago

ಮಳೆಗಾಲದ ಸವಾಲು ಎದುರಿಸಲು ಸೆಸ್ಕ್ ಸಜ್ಜು

ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…

4 hours ago

ರಸ್ತೆ ಇಲ್ಲದೆ ಯೋಧನ ಕುಟುಂಬ ಪರದಾಟ

ಮಹೇಶ್ ಕರೋಠಿ ಮುಚ್ಚಿರುವ ರಸ್ತೆಯನ್ನು ಪುನಃ ತೆರೆದು ಸಮಸ್ಯೆ ಬಗೆಹರಿಸಬೇಕೆಂದು ಗ್ರಾಮಸ್ಥರ ಒತ್ತಾಯ ಕಿಕ್ಕೇರಿ: ಜಮ್ಮು-ಕಾಶ್ಮೀರದ ಗಡಿಯಲ್ಲಿ ದೇಶದ ಭದ್ರತೆಗಾಗಿ…

4 hours ago

ಕುತೂಹಲ ಮೂಡಿಸಿದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ

ಮಂಜು ಕೋಟೆ ಕೋಟೆ: ಕಾಂಗ್ರೆಸ್, ಬಿಜೆಪಿ, ಜಾ.ದಳ ಪಕ್ಷಗಳಲ್ಲಿ ಪೈಪೋಟಿ; ಮುಖಂಡರಿಗೆ ಪ್ರತಿ ಎಚ್.ಡಿ.ಕೋಟೆ: ಕ್ಷೇತ್ರದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ…

4 hours ago