ಕೊಡಗು

ವಾಣಿಜ್ಯ ಸಚಿವ ಪಿಯೂಷ್ ಗೋಯಲ್‌ಗೆ ಮನವಿ ಸಲ್ಲಿಸಿದ ಸಂಸದ ಯದುವೀರ್

ಕಾಫಿ ಬೆಳಗಾರರ ಸಹಕಾರ ಸಂಘದ ಸಮಸ್ಯೆ ಬಗೆಹರಿಸಿ

ಹೊಸದಿಲ್ಲಿ : ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘದ ಆರ್ಥಿಕ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಿರುವ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘ ಈಗ ತೀವ್ರ ಆರ್ಥಿಕ ಸಂಕಷ್ಟಕ್ಕೊಳಗಾಗಿದ್ದು, ಕೇಂದ್ರ ವಾಣಿಜ್ಯ ಸಚಿವಾಲಯ ಮತ್ತು ಹಣಕಾಸು ಸಚಿವಾಲಯ ಮಧ್ಯ ಪ್ರವೇಶಿಸಿ ಪರಿಹಾರ ದೊರಕಿಸಿಕೊಡಬೇಕು ಎಂದು ಹೊಸದಿಲ್ಲಿಯಲ್ಲಿ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

೧೯೫೬ರಲ್ಲಿ ಸ್ಥಾಪನೆಯಾದ ಕೊಡಗು ಕಾಫಿ ಬೆಳೆಗಾರರ ಸಹಕಾರ ಸಂಘವು, ಕೊಡಗು, ಮೈಸೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ೧೦ರಿಂದ ೧೨ ಸಾವಿರಕ್ಕೂ ಹೆಚ್ಚು ಸಣ್ಣ ಮತ್ತು ಮಧ್ಯಮ ಕಾಫಿ ಬೆಳೆಗಾರರಿಗೆ ಬೆಂಬಲವಾಗಿ ನಿಂತಿದೆ. ಸುಮಾರು ೪೦,೦೦೦ ಕುಟುಂಬಗಳಿಗೆ ಬೆನ್ನೆಲುಬಾಗಿದೆ. ಸಾವಿರಾರು ಎಸ್ಟೇಟ್ ಕಾರ್ಮಿಕರಿಗೆ ಉದ್ಯೋಗ ನೀಡಿದೆ. ಇಂಥ ಸಂಘ ಮಾರುಕಟ್ಟೆ ಏರಿಳಿತಗಳು ಹಾಗೂ ಬಂಡವಾಳದ ಕೊರತೆಯಿಂದಾಗಿ, ೧೯೯೫-೯೬ ರಲ್ಲಿ ೬.೮೫ ಕೋಟಿ ನಷ್ಟವನ್ನು ಅನುಭವಿಸಿತು ಎಂದು ತಿಳಿಸಲಾಗಿದೆ ಎಂದು ವಿವರಿಸಿದ್ದಾರೆ.

ಭಾರಿ ಬಡ್ಡಿ ಹೇರಿಕೆ:
ಕಾಫಿ ಮಂಡಳಿಯು ೧೨.೯.೨೦೧೧ರಂದು ನೀಡಿದ ತೀರ್ಪಿನ ಪ್ರಕಾರ, ಸೊಸೈಟಿಯು ೧,೫೫,೨೮,೦೩೪ ಬಡ್ಡಿ ಪಾವತಿಸಲು ಸೂಚಿಸಿತ್ತು. ನಂತರ ಕಾಫಿ ಮಂಡಳಿಯು ೨೦.೦೯.೨೦೧೫ರಂದು ಪತ್ರ ಬರೆದು, ಅಸಲು ಪಾವತಿಸಿದರೆ ಬಡ್ಡಿ ಮನ್ನಾ ಮಾಡುವ ಅವಕಾಶ ಒದಗಿಸಿತ್ತು. ಅದರನ್ವಯ ಸೊಸೈಟಿಯು ೨೨.೧೨.೨೦೧೫ರಂದು ೧,೫೫,೨೮,೦೯೦ ರೂ. ಪಾವತಿಸಿತು. ಆದರೆ ೨೦೧೭ರಲ್ಲಿ ಕಾಫಿ ಮಂಡಳಿಯು ೫,೮೩,೮೫,೧೫೫ ರೂ. ಬಡ್ಡಿ ವಿಽಸಿ ಮತ್ತು ಹೆಚ್ಚಿನ ಮೊತ್ತದ ವೆಚ್ಚವನ್ನು ಪಾವತಿಸಲು ಪತ್ರ ಬರೆಯಿತು ಎಂದು ಕೇಂದ್ರ ಸಚಿವರಿಗೆ ವಸ್ತುಸ್ಥಿತಿ ತಿಳಿಸಿದರು.

ಸೊಸೈಟಿಯು ಈಗ ತೀವ್ರ ಆರ್ಥಿಕ ಬಿಕ್ಕಟ್ಟಿನಲ್ಲಿದ್ದು, ೧೩.೧೩ ಕೋಟಿ ರೂ. ನಷ್ಟ ಅನುಭವಿಸಿದೆ. ಈ ಸಂದರ್ಭದಲ್ಲಿ ಬಡ್ಡಿ ಪಾವತಿಸಲು ಸಾಧ್ಯವಾಗುತ್ತಿಲ್ಲ. ಒಂದು ವೇಳೆ ಬಡ್ಡಿ ಪಾವತಿಸಿದರೆ, ಸೊಸೈಟಿಯು ಆರ್ಥಿಕವಾಗಿ ದಿವಾಳಿಯಾಗಲಿದೆ. ಇದರಿಂದ ಸುಮಾರು ಒಂದು ಲಕ್ಷ ಜನರು ತೀವ್ರ ಪರಿಣಾಮ ಎದುರಿಸಬೇಕಾದೀತು ಎಂದು ಮನವರಿಕೆ ಮಾಡಿಕೊಟ್ಟಿದ್ದಾರೆ.

ಈ ನಿಟ್ಟಿನಲ್ಲಿ ವಾಣಿಜ್ಯ ಸಚಿವರು ಕೂಡಲೇ ಮಧ್ಯಪ್ರವೇಶಿಸಿ, ಸೊಸೈಟಿಯನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡಬೇಕು. ಈ ಸಂಬಂಧ ಹಣಕಾಸು ಸಚಿವಾಲಯದ ಜೊತೆಗೆ ಸಮನ್ವಯ ಸಾಽಸಿ ಸಂಸ್ಥೆಗೆ ಸೂಕ್ತ ಪರಿಹಾರ ಹಾಗೂ ನೆರವು ನೀಡಬೇಕು ಎಂದು ಮನವಿ ಮಡಿದ್ದಾರೆ. ಮನವಿ ಸ್ವೀಕರಿಸಿದ ಸಚಿವರು ಕೂಡಲೇ ಈ ಸಂಬಂಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

22 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

22 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

22 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

22 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

22 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

22 hours ago