ಕೊಡಗು: ವ್ಯಕ್ತಿಯೋರ್ವನ ಮೇಲೆ ನಾಲ್ವರು ಹಲ್ಲೆ ಮಾಡಿ ಕತ್ತಿಯಿಂದ ಕಡಿದು ಕೊಲೆ ಮಾಡಲು ಯತ್ನಿಸಿರುವ ಘಟನೆ ಕುಶಾಲನಗರ ತಾಲ್ಲೂಕಿನ ನಂಜರಾಯಪಟ್ಟಣದಲ್ಲಿ ನಡೆದಿದೆ.
ಅಲ್ಲಿನ ನಿವಾಸಿ ಎಂ. ಮಂಜುನಾಥ ಎಂಬುವವರು ಮನೆಯಲ್ಲಿ ಒಬ್ಬರೇ ಇದ್ದ ಸಮಯ ಸಾಧಿಸಿ, ಪಕ್ಕದ ಮನೆಯಲ್ಲಿ ವಾಸವಿದ್ದ ಅವರ ತಂಗಿ ಜಾನಕಿ ಮತ್ತು ಆಕೆಯ ಮಕ್ಕಳಾದ ಸುಜಿತ್, ಸುಜೇಶ್ ಹಾಗೂ ಸಂದೀಪ್ ಎಂಬುವವರು ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ್ದಾರೆ.
ಆರೋಪಿಗಳ ಪೈಕಿ ಸುಜಿತ್ ಎಂಬಾತ ಕತ್ತಿಯಿಂದ ಮಂಜುನಾಥ್ ತಲೆಗೆ ಮತ್ತು ಕಾಲಿಗೆ ಕಡಿದಿದ್ದಾರೆ. ನಂತರ ಗಾಯಳುವನ್ನು ಮಡಿಕೇರಿಯಲ್ಲಿರುವ ಜಿಲ್ಲಾಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿದೆ. ಈ ಹಿಂದೆಯೂ ಕೂಡ ಇವರುಗಳ ನಡುವೆ ಆಸ್ತಿ ವಿಚಾರದಲ್ಲಿ ಕಲಹ ಏರ್ಪಟ್ಟಿತ್ತು ಎಂದು ಹೇಳಲಾಗಿದೆ. ಈ ಸಂಬಂಧ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…