ಕೊಡಗು

ಕತ್ತಿಯಿಂದ ಕಡಿದು ‌ವ್ಯಕ್ತಿಯ ಕೊಲೆಗೆ ಯತ್ನ

ಕೊಡಗು: ವ್ಯಕ್ತಿಯೋರ್ವನ ಮೇಲೆ ನಾಲ್ವರು ಹಲ್ಲೆ ಮಾಡಿ ಕತ್ತಿಯಿಂದ ಕಡಿದು ಕೊಲೆ ಮಾಡಲು ಯತ್ನಿಸಿರುವ ಘಟನೆ ಕುಶಾಲನಗರ ತಾಲ್ಲೂಕಿನ ನಂಜರಾಯಪಟ್ಟಣದಲ್ಲಿ ನಡೆದಿದೆ.

ಅಲ್ಲಿನ ನಿವಾಸಿ ಎಂ. ಮಂಜುನಾಥ ಎಂಬುವವರು ಮನೆಯಲ್ಲಿ ಒಬ್ಬರೇ ಇದ್ದ ಸಮಯ ಸಾಧಿಸಿ, ಪಕ್ಕದ ಮನೆಯಲ್ಲಿ ವಾಸವಿದ್ದ ಅವರ ತಂಗಿ ಜಾನಕಿ ಮತ್ತು ಆಕೆಯ ಮಕ್ಕಳಾದ ಸುಜಿತ್, ಸುಜೇಶ್ ಹಾಗೂ ಸಂದೀಪ್ ಎಂಬುವವರು ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ್ದಾರೆ.

ಆರೋಪಿಗಳ ಪೈಕಿ ಸುಜಿತ್ ಎಂಬಾತ ಕತ್ತಿಯಿಂದ ಮಂಜುನಾಥ್ ತಲೆಗೆ ಮತ್ತು ಕಾಲಿಗೆ ಕಡಿದಿದ್ದಾರೆ. ನಂತರ ಗಾಯಳುವನ್ನು ಮಡಿಕೇರಿಯಲ್ಲಿರುವ ಜಿಲ್ಲಾಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿದೆ. ಈ ಹಿಂದೆಯೂ ಕೂಡ ಇವರುಗಳ ನಡುವೆ ಆಸ್ತಿ ವಿಚಾರದಲ್ಲಿ ಕಲಹ ಏರ್ಪಟ್ಟಿತ್ತು ಎಂದು ಹೇಳಲಾಗಿದೆ. ಈ ಸಂಬಂಧ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

6 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

8 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

9 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

10 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

12 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

13 hours ago