ಕೊಡಗು

ತೆಲಂಗಾಣದಲ್ಲಿ ಹತ್ಯೆ, ಮಡಿಕೇರಿಯಲ್ಲಿ ಸಾಕ್ಷ್ಯ ನಾಶ; ಪ್ರಕರಣ ಭೇಧಿಸಿದ ಕೊಡಗು ಪೊಲೀಸರು

ಮಡಿಕೇರಿ: ಹಣಕ್ಕಾಗಿ ತನ್ನ ಪತಿಯನ್ನೇ ಕೊಲೆ ಮಾಡಿ ದೇಹವನ್ನು ಸುಟ್ಟು ಹಾಕಿದ ಪ್ರಕರಣವನ್ನು ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಇದೀಗ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಘಟನೆ ಹಿನ್ನೆಲೆ….
ಅ.10 ರಂದು ಸುಂಟಿಕೊಪ್ಪ ಪೊಲೀಸ್ ಠಾಣಾ ಸರಹದ್ದಿನ ಪನ್ಯ ಎಸ್ಟೇಟ್ ಎಂಬಲ್ಲಿ ಸಂದೇಶ್ ಅವರ ಕಾಫಿ ತೋಟದಲ್ಲಿ ಅರ್ಧಂಬರ್ಧ ಬೆಂದಿರುವ ಗಂಡಸಿನ ಶವವನ್ನು ಕಾಫಿ ತೋಟದ ಕೆಲಸಗಾರರು ನೋಡಿದ್ದು, ತೋಟದ ಮಾಲಿಕರು ನೀಡಿದ ದೂರಿಗೆ ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಕಲಂ: 103, 234 ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿತ್ತು.

ಕೃತ್ಯದ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸ್ ಅಧೀಕ್ಷಕ ಕೆ. ರಾಮರಾಜನ್, ಘಟನೆ ಸಂಬಂದ ಆರೋಪಿಗಳ ಪತ್ತೆಗೆ ಸಿಪಿಐ ಕುಶಾಲನಗರ ವೃತ್ತ, ಪಿ.ಐ. ಸೋಮವಾರಪೇಟೆ ಠಾಣೆ ಹಾಗೂ ಪಿಎಸ್ಐ, ಸುಂಟಿಕೊಪ್ಪ ಪೊಲೀಸ್ ಠಾಣೆ, ಪಿಎಸ್ಐ, ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆ ಮತ್ತು ಉಪವಿಭಾಗ ಮಟ್ಟದ ಅಪರಾಧ ಪತ್ತೆ ಸಿಬ್ಬಂದಿಗಳು & ತಾಂತ್ರಿಕ ಸಿಬ್ಬಂದಿಗಳನ್ನು ಒಳಗೊಂಡಂತೆ 16 ಜನರ ಒಟ್ಟು 4 ವಿಶೇಷ ತನಿಖಾ ತಂಡವನ್ನು ರಚಿಸಿ ತನಿಖೆ ಕೈಗೊಳ್ಳಲಾಗಿತ್ತು.

ಇದೊಂದು ಅತ್ಯಂತ ಸೂಕ್ಷ್ಮ ಪ್ರಕರಣವಾಗಿದ್ದು, ಅರ್ಧ ಸುಟ್ಟು ಕರಕಲಾಗಿರುವ ಮೃತದೇಹ ಯಾರದೆಂಬುದು ಗೊತ್ತಿಲ್ಲದೇ ಇದ್ದು, ಪೊಲೀಸರಿಗೆ ಪತ್ತೆಕಾರ್ಯ ಒಂದು ಸವಾಲಾಗಿದ್ದು, ತಂಡವು ತಾಂತ್ರಿಕ ಮತ್ತು ವೈಜ್ಞಾನಿಕ ರೀತಿಯಲ್ಲಿ ಮಾಹಿತಿ ಸಂಗ್ರಹಿಸಿ ಸುಮಾರು 500 ಕ್ಕೂ ಹೆಚ್ಚು ಸಿಸಿ ಕ್ಯಾಮರಾಗಳ ಪರಿಶೀಲನೆ ಮಾಡಿ ಸದರಿ ಮಾರ್ಗದಲ್ಲಿ ಸಂಚರಿಸಿರುವ ವಾಹನಗಳ ಪರಿಶೀಲನೆ, ಮೊಬೈಲ್ ಕರೆಗಳ ಜಾಡನ್ನು ಹಿಡಿದು ಸತತ 10 ದಿನಗಳವರೆಗೆ ಮಾಹಿತಿ ಸಂಗ್ರಹಣೆ ಕಾರ್ಯಚರಣೆ ನಡೆಸಿರುತ್ತಾರೆ.  ಅಕ್ಕಪಕ್ಕದ ಜಿಲ್ಲೆಗಳಲ್ಲಿ ಕಾಣೆಯಾದ ವ್ಯಕ್ತಿಗಳ ಮಾಹಿತಿಗಳನ್ನು ಸಂಗ್ರಹಿಸಿದ್ದು, ಕೊನೆಯದಾಗಿ ಕೃತ್ಯಕ್ಕೆ ಬಳಸಿರಬಹುದಾದ ಸಂಶಾಯಸ್ಪದ ಕಾರಿನ ಮಾಹಿತಿ ಆದಾರದ ಮೇಲೆ ಮೃತ ರಮೇಶ್ ಕುಮಾರ್ (54) ಹೈದರಾಬಾದ್ ಎಂಬುದಾಗಿ ಪತ್ತೆಹಚ್ಚಿರುತ್ತಾರೆ.

ಆತನನ್ನು ಕೊಲೆ ಮಾಡಿದ ಆರೋಪಿಗಳಾದ ಆತನ 2ನೇ ಹೆಂಡತಿ ನಿಹಾರಿಕಾ ಮತ್ತು ಆಕೆಯ ಬಾಯ್ ಫ್ರೆಂಡ್ ಗಳಾದ ಹರಿಯಾಣ ಮೂಲದ ಅಂಕುಲ್ ರಾಣ ಮತ್ತು ಬೆಂಗಳೂರು ವಾಸಿ ನಿಖಿಲ್ ಎಂಬುವವರನ್ನು ಬಂದಿಸಿ ಕೃತ್ಯಕ್ಕೆ ಬಳಸಿದ Mercedes benz, ಕಾರನ್ನು ವಶಪಡಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

ಘಟನೆಯ ಸಂಕ್ಷಿಪ್ತ ವಿವರ…
ಆರೋಪಿಯು ನಿಹಾರಿಕ ಮೃತ ರಮೇಶ್ ಕುಮಾರ್‌ ನನ್ನು ವಿವಾಹವಾಗಿದ್ದು, ನಿಹಾರಿಕಾಳು ಆಸ್ತಿ ಮಾರಾಟದಲ್ಲಿ 8 ಕೋಟಿ ಹಣ ಪಡೆಯುವ ಉದ್ದೇಶದಿಂದ, ನಿಹಾರಿಕಾಳ ಮತ್ತೊಬ್ಬ ಬಾಯ್ ಫ್ರೆಂಡ್ ಹರಿಯಾಣ ಮೂಲದ ಅಂಕುರ್ ರಾಣ ಎಂಬಾತನನ್ನು ದಿನಾಂಕ 01-10-2024 ರಂದು ಹೈದರಾಬಾದ್ ಬರಲು ತಿಳಿಸಿರುತ್ತಾಳೆ.

ದಿನಾಂಕ 03-10-2024 ರಂದು ನಿಹಾರಿಕಾ ರಮೇಶ್ ಕುಮಾರ್ ನನ್ನು ಬರಲು ತಿಳಿಸಿ, ಕಾರಿನಲ್ಲಿ ಡ್ರಾಪ್ ಮಾಡುವ ನೆಪದಲ್ಲಿ ರಮೇಶ್ ಕುಮಾರ್ Mercedes benz (TS- 07-FS-5679) ಕಾರಿನಲ್ಲಿ ಹೊರಟು ಉಪ್ಪಲ್-ಭುವನಗಿರಿ ನಡುವಿನ ಹೆದ್ದಾರಿಯ ಬಳಿ ಕಾರನ್ನು ಬದಿಗೆ ನಿಲ್ಲಿಸಿ ಕೊಲೆ ಮಾಡುವ ಉದ್ದೇಶದಿಂದ ಅಂಕುರ್ ರಾಣಾನೊಂದಿಗೆ ಸೇರಿ ರಮೇಶ್ ಕುಮಾರ್ ನನ್ನು ಕೊಲೆ ಮಾಡಿ ನಂತರ ಬೆಂಗಳೂರಿನ ಹೊರಮಾವು ಎಂಬಲ್ಲಿಗೆ ಬಂದು ತನ್ನ ಬಾಯ್ಫ್ ಫ್ರೆಂಡ್ ನಿಖಿಲ್ ರವರ ಬಳಿ ವಿಚಾರ ತಿಳಿಸಿ ಶವವನ್ನು ಯಾರಿಗೂ ಸಿಗದಂತೆ ನಾಶ ಮಾಡುವ ಉದ್ದೇಶದಿಂದ ಸುಂಟಿಕೊಪ್ಪ ಬಳಿ ಪನ್ಯ ಎಸ್ಟೇಟ್ಗೆ ತಂದು ಯಾರಿಗೂ ಗೊತ್ತಾಗದಂತೆ ಬೆಂಕಿ ಹಚ್ಚಿ ಕಾರಿನೊಂದಿಗೆ ತೆರಳಿರುತ್ತಾರೆ.

ವಿಶೇಷ ತನಿಖಾ ತಂಡವು ಪ್ರಕರಣವನ್ನು ಭೇದಿಸಿ ದಿನಾಂಕ : 22-10-2024 ರಂದು ಮೊದಲಿಗೆ ನಿಹಾರಿಕಾ ಮತ್ತು ನಿಖಿಲ್ ನನ್ನು ಬಂದಿಸಿ ವಿಚಾರಣೆ ಮಾಡಿ ಕೃತ್ಯಕ್ಕೆ ಬಳಸಿದ ಕಾರು, ಮೊಬೈಲ್ ಹಾಗೂ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಯಿತು.

ಪ್ರಕರಣದ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ಅಂಕುರ್ ರಾಣ ಈತನ ಪತ್ತೆಗೆ ವಿಶೇಷ ತಂಡ ರಚಿಸಿದ್ದು, ಪಿಎಸ್ಐ, ಚಂದ್ರಶೇಖ, ಸಿಬ್ಬಂದಿಯವರಾದ ರಂಜಿತ್, ಉದಯಕುಮಾರ್, ಸುದೀಶ್ ಕುಮಾರ್ ರವರು ಹರಿದ್ವಾರಕ್ಕೆ ತೆರಳಿ ಮಿಂಚಿನ ಕಾರ್ಯಚರಣೆ ನಡೆಸಿ ಆತನನ್ನು ವಶಕ್ಕೆ ಪಡೆದುಕೊಂಡು ಕರೆತರುವಲ್ಲಿ ಯಶಸ್ವಿಯಾಗಿರುತ್ತಾರೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

2 hours ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

2 hours ago

ಟಿ-20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ :ಸೂರ್ಯಕುಮಾರ್ ಯಾದವ್ ನಾಯಕ

ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್‌ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…

2 hours ago

ಮೊಟ್ಟೆ ಕ್ಯಾನ್ಸರ್‌ ಕಾರಕವಲ್ಲ : ಕೇಂದ್ರ ವರದಿ

ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…

2 hours ago

‘ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ ನೀಡಿ’ : ಶಿವಶಂಕರ್ ಸೂಚನೆ

ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…

2 hours ago

ಮೈಸೂರು | ನಾಳೆಯಿಂದ ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ

ಮೈಸೂರು : ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…

3 hours ago