ಮಡಿಕೇರಿ: ಹಣಕ್ಕಾಗಿ ತನ್ನ ಪತಿಯನ್ನೇ ಕೊಲೆ ಮಾಡಿ ದೇಹವನ್ನು ಸುಟ್ಟು ಹಾಕಿದ ಪ್ರಕರಣವನ್ನು ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಇದೀಗ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಘಟನೆ ಹಿನ್ನೆಲೆ….
ಅ.10 ರಂದು ಸುಂಟಿಕೊಪ್ಪ ಪೊಲೀಸ್ ಠಾಣಾ ಸರಹದ್ದಿನ ಪನ್ಯ ಎಸ್ಟೇಟ್ ಎಂಬಲ್ಲಿ ಸಂದೇಶ್ ಅವರ ಕಾಫಿ ತೋಟದಲ್ಲಿ ಅರ್ಧಂಬರ್ಧ ಬೆಂದಿರುವ ಗಂಡಸಿನ ಶವವನ್ನು ಕಾಫಿ ತೋಟದ ಕೆಲಸಗಾರರು ನೋಡಿದ್ದು, ತೋಟದ ಮಾಲಿಕರು ನೀಡಿದ ದೂರಿಗೆ ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಕಲಂ: 103, 234 ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿತ್ತು.
ಕೃತ್ಯದ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸ್ ಅಧೀಕ್ಷಕ ಕೆ. ರಾಮರಾಜನ್, ಘಟನೆ ಸಂಬಂದ ಆರೋಪಿಗಳ ಪತ್ತೆಗೆ ಸಿಪಿಐ ಕುಶಾಲನಗರ ವೃತ್ತ, ಪಿ.ಐ. ಸೋಮವಾರಪೇಟೆ ಠಾಣೆ ಹಾಗೂ ಪಿಎಸ್ಐ, ಸುಂಟಿಕೊಪ್ಪ ಪೊಲೀಸ್ ಠಾಣೆ, ಪಿಎಸ್ಐ, ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆ ಮತ್ತು ಉಪವಿಭಾಗ ಮಟ್ಟದ ಅಪರಾಧ ಪತ್ತೆ ಸಿಬ್ಬಂದಿಗಳು & ತಾಂತ್ರಿಕ ಸಿಬ್ಬಂದಿಗಳನ್ನು ಒಳಗೊಂಡಂತೆ 16 ಜನರ ಒಟ್ಟು 4 ವಿಶೇಷ ತನಿಖಾ ತಂಡವನ್ನು ರಚಿಸಿ ತನಿಖೆ ಕೈಗೊಳ್ಳಲಾಗಿತ್ತು.
ಇದೊಂದು ಅತ್ಯಂತ ಸೂಕ್ಷ್ಮ ಪ್ರಕರಣವಾಗಿದ್ದು, ಅರ್ಧ ಸುಟ್ಟು ಕರಕಲಾಗಿರುವ ಮೃತದೇಹ ಯಾರದೆಂಬುದು ಗೊತ್ತಿಲ್ಲದೇ ಇದ್ದು, ಪೊಲೀಸರಿಗೆ ಪತ್ತೆಕಾರ್ಯ ಒಂದು ಸವಾಲಾಗಿದ್ದು, ತಂಡವು ತಾಂತ್ರಿಕ ಮತ್ತು ವೈಜ್ಞಾನಿಕ ರೀತಿಯಲ್ಲಿ ಮಾಹಿತಿ ಸಂಗ್ರಹಿಸಿ ಸುಮಾರು 500 ಕ್ಕೂ ಹೆಚ್ಚು ಸಿಸಿ ಕ್ಯಾಮರಾಗಳ ಪರಿಶೀಲನೆ ಮಾಡಿ ಸದರಿ ಮಾರ್ಗದಲ್ಲಿ ಸಂಚರಿಸಿರುವ ವಾಹನಗಳ ಪರಿಶೀಲನೆ, ಮೊಬೈಲ್ ಕರೆಗಳ ಜಾಡನ್ನು ಹಿಡಿದು ಸತತ 10 ದಿನಗಳವರೆಗೆ ಮಾಹಿತಿ ಸಂಗ್ರಹಣೆ ಕಾರ್ಯಚರಣೆ ನಡೆಸಿರುತ್ತಾರೆ. ಅಕ್ಕಪಕ್ಕದ ಜಿಲ್ಲೆಗಳಲ್ಲಿ ಕಾಣೆಯಾದ ವ್ಯಕ್ತಿಗಳ ಮಾಹಿತಿಗಳನ್ನು ಸಂಗ್ರಹಿಸಿದ್ದು, ಕೊನೆಯದಾಗಿ ಕೃತ್ಯಕ್ಕೆ ಬಳಸಿರಬಹುದಾದ ಸಂಶಾಯಸ್ಪದ ಕಾರಿನ ಮಾಹಿತಿ ಆದಾರದ ಮೇಲೆ ಮೃತ ರಮೇಶ್ ಕುಮಾರ್ (54) ಹೈದರಾಬಾದ್ ಎಂಬುದಾಗಿ ಪತ್ತೆಹಚ್ಚಿರುತ್ತಾರೆ.
ಆತನನ್ನು ಕೊಲೆ ಮಾಡಿದ ಆರೋಪಿಗಳಾದ ಆತನ 2ನೇ ಹೆಂಡತಿ ನಿಹಾರಿಕಾ ಮತ್ತು ಆಕೆಯ ಬಾಯ್ ಫ್ರೆಂಡ್ ಗಳಾದ ಹರಿಯಾಣ ಮೂಲದ ಅಂಕುಲ್ ರಾಣ ಮತ್ತು ಬೆಂಗಳೂರು ವಾಸಿ ನಿಖಿಲ್ ಎಂಬುವವರನ್ನು ಬಂದಿಸಿ ಕೃತ್ಯಕ್ಕೆ ಬಳಸಿದ Mercedes benz, ಕಾರನ್ನು ವಶಪಡಿಸುವಲ್ಲಿ ಯಶಸ್ವಿಯಾಗಿರುತ್ತಾರೆ.
ಘಟನೆಯ ಸಂಕ್ಷಿಪ್ತ ವಿವರ…
ಆರೋಪಿಯು ನಿಹಾರಿಕ ಮೃತ ರಮೇಶ್ ಕುಮಾರ್ ನನ್ನು ವಿವಾಹವಾಗಿದ್ದು, ನಿಹಾರಿಕಾಳು ಆಸ್ತಿ ಮಾರಾಟದಲ್ಲಿ 8 ಕೋಟಿ ಹಣ ಪಡೆಯುವ ಉದ್ದೇಶದಿಂದ, ನಿಹಾರಿಕಾಳ ಮತ್ತೊಬ್ಬ ಬಾಯ್ ಫ್ರೆಂಡ್ ಹರಿಯಾಣ ಮೂಲದ ಅಂಕುರ್ ರಾಣ ಎಂಬಾತನನ್ನು ದಿನಾಂಕ 01-10-2024 ರಂದು ಹೈದರಾಬಾದ್ ಬರಲು ತಿಳಿಸಿರುತ್ತಾಳೆ.
ದಿನಾಂಕ 03-10-2024 ರಂದು ನಿಹಾರಿಕಾ ರಮೇಶ್ ಕುಮಾರ್ ನನ್ನು ಬರಲು ತಿಳಿಸಿ, ಕಾರಿನಲ್ಲಿ ಡ್ರಾಪ್ ಮಾಡುವ ನೆಪದಲ್ಲಿ ರಮೇಶ್ ಕುಮಾರ್ Mercedes benz (TS- 07-FS-5679) ಕಾರಿನಲ್ಲಿ ಹೊರಟು ಉಪ್ಪಲ್-ಭುವನಗಿರಿ ನಡುವಿನ ಹೆದ್ದಾರಿಯ ಬಳಿ ಕಾರನ್ನು ಬದಿಗೆ ನಿಲ್ಲಿಸಿ ಕೊಲೆ ಮಾಡುವ ಉದ್ದೇಶದಿಂದ ಅಂಕುರ್ ರಾಣಾನೊಂದಿಗೆ ಸೇರಿ ರಮೇಶ್ ಕುಮಾರ್ ನನ್ನು ಕೊಲೆ ಮಾಡಿ ನಂತರ ಬೆಂಗಳೂರಿನ ಹೊರಮಾವು ಎಂಬಲ್ಲಿಗೆ ಬಂದು ತನ್ನ ಬಾಯ್ಫ್ ಫ್ರೆಂಡ್ ನಿಖಿಲ್ ರವರ ಬಳಿ ವಿಚಾರ ತಿಳಿಸಿ ಶವವನ್ನು ಯಾರಿಗೂ ಸಿಗದಂತೆ ನಾಶ ಮಾಡುವ ಉದ್ದೇಶದಿಂದ ಸುಂಟಿಕೊಪ್ಪ ಬಳಿ ಪನ್ಯ ಎಸ್ಟೇಟ್ಗೆ ತಂದು ಯಾರಿಗೂ ಗೊತ್ತಾಗದಂತೆ ಬೆಂಕಿ ಹಚ್ಚಿ ಕಾರಿನೊಂದಿಗೆ ತೆರಳಿರುತ್ತಾರೆ.
ವಿಶೇಷ ತನಿಖಾ ತಂಡವು ಪ್ರಕರಣವನ್ನು ಭೇದಿಸಿ ದಿನಾಂಕ : 22-10-2024 ರಂದು ಮೊದಲಿಗೆ ನಿಹಾರಿಕಾ ಮತ್ತು ನಿಖಿಲ್ ನನ್ನು ಬಂದಿಸಿ ವಿಚಾರಣೆ ಮಾಡಿ ಕೃತ್ಯಕ್ಕೆ ಬಳಸಿದ ಕಾರು, ಮೊಬೈಲ್ ಹಾಗೂ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಯಿತು.
ಪ್ರಕರಣದ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ಅಂಕುರ್ ರಾಣ ಈತನ ಪತ್ತೆಗೆ ವಿಶೇಷ ತಂಡ ರಚಿಸಿದ್ದು, ಪಿಎಸ್ಐ, ಚಂದ್ರಶೇಖ, ಸಿಬ್ಬಂದಿಯವರಾದ ರಂಜಿತ್, ಉದಯಕುಮಾರ್, ಸುದೀಶ್ ಕುಮಾರ್ ರವರು ಹರಿದ್ವಾರಕ್ಕೆ ತೆರಳಿ ಮಿಂಚಿನ ಕಾರ್ಯಚರಣೆ ನಡೆಸಿ ಆತನನ್ನು ವಶಕ್ಕೆ ಪಡೆದುಕೊಂಡು ಕರೆತರುವಲ್ಲಿ ಯಶಸ್ವಿಯಾಗಿರುತ್ತಾರೆ.
ಬೆಂಗಳೂರು: ಸೂಕ್ತ ಖಾತೆ ಸಿಗದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರಕ್ಕೆ ಮುಜುಗರ ಸೃಷ್ಟಿಸಿದ್ದ ಸಚಿವ ರಾಮಲಿಂಗ ರೆಡ್ಡಿ…
ರಾಯ್ಪುರ: ಇತ್ತೀಚೆಗೆ ಆಫ್ರಿಕಾದ ಹಲವೆಡೆ ಎಬೋಲಾ ವೈರಸ್ ಭೀತಿ ಸೃಷ್ಟಿಯಾಗಿರುವ ಬೆನ್ನಲ್ಲೇ ಇದೀಗ ಛತ್ತೀಸ್ಗಢದಲ್ಲಿ ಮೂವರು ಆಫ್ರಿಕಾ ಪ್ರಜೆಗಳನ್ನು 21…
ಭಾರತೀನಗರ: ಇಲ್ಲಿಗೆ ಸಮೀಪದ ಬೊಮ್ಮನದೊಡ್ಡಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಮೂಡಿದೆ. ಗುರುದೇವರಹಳ್ಳಿ ಗ್ರಾಮದ ಚೇತನ್ಮಾದೇಗೌಡ ಎಂಬವರು ಬೊಮ್ಮನದೊಡ್ಡಿ…
ತಿರುವನಂತಪುರಂ: ನೆರೆಯ ಕೇರಳ ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, ಹಲವೆಡೆ ಭಾರೀ ಮಳೆಯಾಗುತ್ತಿದೆ. ಮಲ್ಲಪುರಂ, ಕೋಯಿಕ್ಕೋಡ್, ವಯನಾಡು, ಕಣ್ಣೂರು ಮತ್ತು ಕಾಸರಗೋಡಿನಲ್ಲಿ…
ಚೆನ್ನೈ: ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಬಿಜೆಪಿಗೆ ಗುಡ್ಬೈ ಹೇಳಿದ ಬೆನ್ನಲ್ಲೇ ಮತ್ತೆರಡು ವಿಕೆಟ್ ಪತನಗೊಂಡಿದೆ. ರಾಜ್ಯ…
ಬೆಂಗಳೂರು: ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ವಾಪಸ್ ಪಡೆದು ಸಚಿವ ಸಂಪುಟದಲ್ಲಿ ಮುಂದುವರೆಯಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್…