ಮೈಸೂರು : ಕೊಡಗು ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ ಬಹು ಗ್ರಾಮ ಯೋಜನೆ (ಎಂವಿಎಸ್)ಗಳನ್ನು ತ್ವರಿತವಾಗಿ ಅನುಮೋದನೆ ಮಾಡಬೇಕು ಎಂದು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರಿಗೆ ಮನವಿ ಮಾಡಲಾಗಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.
ಹೊಸದಿಲ್ಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿ, ಮನವಿ ಪತ್ರ ಸಲ್ಲಿಸಿದ ನಂತರ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಒದಗಿಸಲು ಎಂವಿಎಸ್ಗೆ ತ್ವರಿತ ಅನುಮೋದನೆ ನೀಡಬೇಕಾಗಿದೆ ಎಂದು ಮಡಿಕೇರಿ ವಿಭಾಗದ ಗ್ರಾಮೀಣ ಕುಡಿಯುವ ನೀರು ಮತ್ತು ಒಳಚರಂಡಿ ವಿಭಾಗದ ಅಧಿಕಾರಿಗಳು ನನಗೆ ಮಾಹಿತಿ ನೀಡಿದ್ದರು ಎಂದು ವಿವರಿಸಿದ್ದಾರೆ.
ಈ ಸಂಬಂಧ ಕೊಡಗು ಜಿಲ್ಲೆಯವರ ನೀರಿನ ಸಮಸ್ಯೆ ನೀಗಿಸಲು ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇನೆ. ಅತಿ ಶೀಘ್ರದಲ್ಲೇ ಇದಕ್ಕೆ ಅನುಮೋದನೆ ನೀಡುವ ಭರವಸೆ ನೀಡಿದ್ದಾರೆ. ಮನವಿ ಸ್ವೀಕರಿಸಿದ ಸಚಿವರು, ಸಂಬಂಧಪಟ್ಟ ಅಧಿಕಾರಿಗಳಿಗೆ ಕೂಡಲೇ ಮಾತನಾಡಿ, ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ಕುಡಿಯುವ ನೀರಿನ ಸಮಸ್ಯೆ ಅತಿ ಶೀಘ್ರದಲ್ಲೇ ಪರಿಹಾರವಾಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…