ಮಡಿಕೇರಿ: ತಾಲೂಕಿನ ನಾಪೋಕ್ಲು ವ್ಯಾಪ್ತಿಯಲ್ಲಿ ಭಾನುವಾರ(ಜು.21) ಮಳೆಯ ಬಿರುಸು ತಗ್ಗಿದ್ದು,
ಕಾವೇರಿ ನದಿ ಪ್ರವಾಹ ಇಳಿಮುಖವಾಗಿದೆ. ಇದರಿಂದ ಜಲಾವೃತಗೊಂಡಿದ್ದ ರಸ್ತೆಗಳು ಸಂಚಾರ ಮುಕ್ತವಾಗಿವೆ.
ನಾಪೋಕ್ಲು ವ್ಯಾಪ್ತಿಯಲ್ಲಿ ಸುರಿದ ಧಾರಾಕಾರ ಮಳೆಗೆ ಕಾವೇರಿ ನದಿ ಮೈದುಂಬಿ ಹರಿದು ಮೂರು ದಿನಗಳಿಂದ ರಸ್ತೆಗಳು ಜಲಾವೃತ ಗೊಂಡು ಸಂಚಾರ ಸ್ಥಗಿತವಾಗಿ ಜನರು ಆತಂಕ ಎದುರಿಸಿದ್ದರು. ಇದೀಗ ಮಳೆ ಇಳಿಮುಖಗೊಂಡಿದ್ದು ಪ್ರವಾಹ ತಗ್ಗಿದೆ.
ನಾಪೋಕ್ಲು-ಮೂರ್ನಾಡು ಸಂಪರ್ಕ ರಸ್ತೆಯ ಬೊಳಿಬಾಣೆಯಲ್ಲಿ ಕಾವೇರಿ ನದಿ ಪ್ರವಾಹ ಇಳಿಕೆಯಾಗಿ ವಾಹನ ಸಂಚಾರ ಆರಂಭವಾಗಿದೆ. ನಾಪೋಕ್ಲು ಚೆರಿಯಪರಂಬು ಕಲ್ಲುಮೊಟ್ಟೆ ಸಂಪರ್ಕ ರಸ್ತೆಯಲ್ಲೂ ಪ್ರವಾಹ ಇಳಿಕೆ ಕಂಡಿದ್ದು ಇಂದು ಸಂಚಾರಕ್ಕೆ ಮುಕ್ತವಾಗುವ ಸಾಧ್ಯತೆಯಿದೆ.
ಜತೆಗೆ ನಾಪೋಕ್ಲು ಕೊಟ್ಟಮುಡಿ, ಬೆಟ್ಟಗೇರಿ, ಕೈಕಾಡು ಪಾರಾಣೆ, ಕಕ್ಕಬ್ಬೆ ರಸ್ತೆಯಲ್ಲೂ ಪ್ರವಾಹ ಇಳಿಮುಖವಾಗಿದ್ದು, ಈ ಮಾರ್ಗವಾಗಿ ವಿರಾಜಪೇಟೆಗೆ ತೆರಳುವ ರಸ್ತೆ ಸಂಚಾರಕ್ಕೆ ಮುಕ್ತವಾಗಿದೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…