ಮಡಿಕೇರಿ: ತಾಲೂಕಿನ ನಾಪೋಕ್ಲು ವ್ಯಾಪ್ತಿಯಲ್ಲಿ ಭಾನುವಾರ(ಜು.21) ಮಳೆಯ ಬಿರುಸು ತಗ್ಗಿದ್ದು,
ಕಾವೇರಿ ನದಿ ಪ್ರವಾಹ ಇಳಿಮುಖವಾಗಿದೆ. ಇದರಿಂದ ಜಲಾವೃತಗೊಂಡಿದ್ದ ರಸ್ತೆಗಳು ಸಂಚಾರ ಮುಕ್ತವಾಗಿವೆ.
ನಾಪೋಕ್ಲು ವ್ಯಾಪ್ತಿಯಲ್ಲಿ ಸುರಿದ ಧಾರಾಕಾರ ಮಳೆಗೆ ಕಾವೇರಿ ನದಿ ಮೈದುಂಬಿ ಹರಿದು ಮೂರು ದಿನಗಳಿಂದ ರಸ್ತೆಗಳು ಜಲಾವೃತ ಗೊಂಡು ಸಂಚಾರ ಸ್ಥಗಿತವಾಗಿ ಜನರು ಆತಂಕ ಎದುರಿಸಿದ್ದರು. ಇದೀಗ ಮಳೆ ಇಳಿಮುಖಗೊಂಡಿದ್ದು ಪ್ರವಾಹ ತಗ್ಗಿದೆ.
ನಾಪೋಕ್ಲು-ಮೂರ್ನಾಡು ಸಂಪರ್ಕ ರಸ್ತೆಯ ಬೊಳಿಬಾಣೆಯಲ್ಲಿ ಕಾವೇರಿ ನದಿ ಪ್ರವಾಹ ಇಳಿಕೆಯಾಗಿ ವಾಹನ ಸಂಚಾರ ಆರಂಭವಾಗಿದೆ. ನಾಪೋಕ್ಲು ಚೆರಿಯಪರಂಬು ಕಲ್ಲುಮೊಟ್ಟೆ ಸಂಪರ್ಕ ರಸ್ತೆಯಲ್ಲೂ ಪ್ರವಾಹ ಇಳಿಕೆ ಕಂಡಿದ್ದು ಇಂದು ಸಂಚಾರಕ್ಕೆ ಮುಕ್ತವಾಗುವ ಸಾಧ್ಯತೆಯಿದೆ.
ಜತೆಗೆ ನಾಪೋಕ್ಲು ಕೊಟ್ಟಮುಡಿ, ಬೆಟ್ಟಗೇರಿ, ಕೈಕಾಡು ಪಾರಾಣೆ, ಕಕ್ಕಬ್ಬೆ ರಸ್ತೆಯಲ್ಲೂ ಪ್ರವಾಹ ಇಳಿಮುಖವಾಗಿದ್ದು, ಈ ಮಾರ್ಗವಾಗಿ ವಿರಾಜಪೇಟೆಗೆ ತೆರಳುವ ರಸ್ತೆ ಸಂಚಾರಕ್ಕೆ ಮುಕ್ತವಾಗಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…