ಕೊಡಗು

ನಾಪೋಕ್ಲು| ತಗ್ಗಿದ ಮಳೆ: ಪ್ರವಾಹ ಇಳಿಮುಖ

ಮಡಿಕೇರಿ: ತಾಲೂಕಿನ ನಾಪೋಕ್ಲು ವ್ಯಾಪ್ತಿಯಲ್ಲಿ ಭಾನುವಾರ(ಜು.21) ಮಳೆಯ ಬಿರುಸು ತಗ್ಗಿದ್ದು,
ಕಾವೇರಿ ನದಿ ಪ್ರವಾಹ ಇಳಿಮುಖವಾಗಿದೆ. ಇದರಿಂದ ಜಲಾವೃತಗೊಂಡಿದ್ದ ರಸ್ತೆಗಳು ಸಂಚಾರ ಮುಕ್ತವಾಗಿವೆ.

ನಾಪೋಕ್ಲು ವ್ಯಾಪ್ತಿಯಲ್ಲಿ ಸುರಿದ ಧಾರಾಕಾರ ಮಳೆಗೆ ಕಾವೇರಿ ನದಿ ಮೈದುಂಬಿ ಹರಿದು ಮೂರು ದಿನಗಳಿಂದ ರಸ್ತೆಗಳು ಜಲಾವೃತ ಗೊಂಡು ಸಂಚಾರ ಸ್ಥಗಿತವಾಗಿ ಜನರು ಆತಂಕ ಎದುರಿಸಿದ್ದರು. ಇದೀಗ ಮಳೆ ಇಳಿಮುಖಗೊಂಡಿದ್ದು ಪ್ರವಾಹ ತಗ್ಗಿದೆ.

ನಾಪೋಕ್ಲು-ಮೂರ್ನಾಡು ಸಂಪರ್ಕ ರಸ್ತೆಯ ಬೊಳಿಬಾಣೆಯಲ್ಲಿ ಕಾವೇರಿ ನದಿ ಪ್ರವಾಹ ಇಳಿಕೆಯಾಗಿ ವಾಹನ ಸಂಚಾರ ಆರಂಭವಾಗಿದೆ. ನಾಪೋಕ್ಲು ಚೆರಿಯಪರಂಬು ಕಲ್ಲುಮೊಟ್ಟೆ ಸಂಪರ್ಕ ರಸ್ತೆಯಲ್ಲೂ ಪ್ರವಾಹ ಇಳಿಕೆ ಕಂಡಿದ್ದು ಇಂದು ಸಂಚಾರಕ್ಕೆ ಮುಕ್ತವಾಗುವ ಸಾಧ್ಯತೆಯಿದೆ.

ಜತೆಗೆ ನಾಪೋಕ್ಲು ಕೊಟ್ಟಮುಡಿ, ಬೆಟ್ಟಗೇರಿ, ಕೈಕಾಡು ಪಾರಾಣೆ, ಕಕ್ಕಬ್ಬೆ ರಸ್ತೆಯಲ್ಲೂ ಪ್ರವಾಹ ಇಳಿಮುಖವಾಗಿದ್ದು, ಈ ಮಾರ್ಗವಾಗಿ ವಿರಾಜಪೇಟೆಗೆ ತೆರಳುವ ರಸ್ತೆ ಸಂಚಾರಕ್ಕೆ ಮುಕ್ತವಾಗಿದೆ.

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

10 mins ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

13 mins ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

19 mins ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

25 mins ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

13 hours ago