ಮಡಿಕೇರಿ: ಕೊಡಗು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮಳೆ ಅಬ್ಬರಿಸಿದೆ. ಸದ್ಯ ಕಳದೆರಡು ದಿನಗಳಿಂದ ಜಿಲ್ಲೆಯಲ್ಲಿ ಮಳೆ ಕ್ಷೀಣಿಸಿದ್ದು, ಆಗೊಮ್ಮೆ ಹಿಗೊಮ್ಮೆ ಬಿಸಿಲಿನ ವಾತವರಣ ಕಂಡುಬರುತ್ತಿದ್ದು, ಸಾಧಾರಣ ಮಳೆಯಾಗುತ್ತಿದೆ.
ಜಿಲ್ಲೆಯಲ್ಲಿ ಮಳೆ ಕಡಿಮೆಯಾದರೂ ಮುಂದಿನ ದಿನಗಳಲ್ಲಿ ಸಂಭವಿಸಬಹುದಾದ ವಿಪತ್ತು ನಿರ್ವಹಣೆಗೆ ಎನ್ಡಿಆರ್ಎಫ್ ತಂಡ ಸಜ್ಜಾಗಿದ್ದು, ಜಿಲ್ಲೆಯ ಸುತ್ತಮುತ್ತ ಭೂಕುಸಿತ ಉಂಟಾಗುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ.
ಜಿಲ್ಲೆಯಲ್ಲಿ ಮಳೆ ಕ್ಷೀಣಿಸಿದ್ದು, ಜು.11 ರಂದು 3.03 ಮಿ.ಮೀ ಮಳೆಯಾಗಿದ್ದು, ಶುಕ್ರವಾರ(ಜು.12) ಹಾಗೂ ಶನಿವಾರವೂ(ಜು.13) ಹೆಚ್ಚಿನ ಮಳೆಯಾಗಲಿಲ್ಲ. ಮಡಿಕೇರಿ, ವಿರಾಜಪೇಟೆ, ಪೊನ್ನಂಪೇಟೆ ಹಾಗೂ ಸೋಮವಾರಪೇಟೆಯಲ್ಲಿ ಆಗೊಮ್ಮೆ ಹಿಗೊಮ್ಮೆ ಸೂರ್ಯ ಭೂಮಿಯನ್ನು ಸ್ಪರ್ಶಿಸುತ್ತಿದ್ದಾನೆ. ಉಳಿದ ಸಮಯ ಮೋಡ ಕವಿದ ವಾತವಾರಣದೊಂದಿಗೆ ಸಾಮಾನ್ಯ ಮಳೆಯಾಗುತ್ತಿದೆ.
ಜಿಲ್ಲೆಯಲ್ಲಿ ಬಿಡುಬಿಟ್ಟ ಎನ್ಡಿಆರ್ಎಫ್ ತಂಡ ಹಿಂದೆ ಭೂಕುಸಿತ ಉಂಟಾದ ಹಾಗೂ ಭೂಕುಸಿತದ ಅಪಾಯವಿರುವ ಸ್ಥಳಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದೆ. ಭೂಕುಸಿತ ಹಾಗೂ ಜಲ ಸ್ಫೋಟದಂತಹ ವಿಪತ್ತು ಸಂಭವಿಸಿದರೆ, ಜನ ಜಾನುವಾರು ರಕ್ಷಣೆಗೆ ಹೇಗೆ ಕ್ರಮಕೈಗೊಳ್ಳಬೇಕು ಎಂದು ತಂಡದಲ್ಲಿರುವ ಪರಿಣಿತರಿಂದ ಮಾಹಿತಿ ಪಡೆದು ಸಿದ್ಧರಾಗುತ್ತಿದ್ದಾರೆ. ಕೆಲವೆಡೆ ಪ್ರಾತ್ಯಕ್ಷೆಕೆಯನ್ನೂ ಸಹ ನಡೆಸುತ್ತಿದೆ.
ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ…
ಕೋಲ್ಕತ್ತಾ : ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ಸೋಮವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ…
ನಂಜನಗೂಡು : ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ವಿಧಿಸುವ…
ಬೆಂಗಳೂರು : ದುಬೈನ ಕರ್ನಾಟಕ ಸಂಘದೊಂದಿಗೆ ನವೆಂಬರ್ 22 ರಂದು ನಾವಿಕ ರಾಜ್ಯೋತ್ಸವ ಮತ್ತು ನಾಟಕೋತ್ಸವವನ್ನು ಆಯೋಜಿಸಲಾಗಿದೆ ಎಂದು ನಾವು…
ಹೊಸದಿಲ್ಲಿ : ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2…
ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…