ಕೊಡಗು

ಕೊಡಗಿನಲ್ಲಿ ವಿಕೋಪ ನಿರ್ವಹಣೆಗೆ ಎನ್‌ಡಿಆರ್‌ಎಫ್‌ ಸಜ್ಜು

ಮಡಿಕೇರಿ: ಕೊಡಗು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮಳೆ ಅಬ್ಬರಿಸಿದೆ. ಸದ್ಯ ಕಳದೆರಡು ದಿನಗಳಿಂದ ಜಿಲ್ಲೆಯಲ್ಲಿ ಮಳೆ ಕ್ಷೀಣಿಸಿದ್ದು, ಆಗೊಮ್ಮೆ ಹಿಗೊಮ್ಮೆ ಬಿಸಿಲಿನ ವಾತವರಣ ಕಂಡುಬರುತ್ತಿದ್ದು, ಸಾಧಾರಣ ಮಳೆಯಾಗುತ್ತಿದೆ.

ಜಿಲ್ಲೆಯಲ್ಲಿ ಮಳೆ ಕಡಿಮೆಯಾದರೂ ಮುಂದಿನ ದಿನಗಳಲ್ಲಿ ಸಂಭವಿಸಬಹುದಾದ ವಿಪತ್ತು ನಿರ್ವಹಣೆಗೆ ಎನ್‌ಡಿಆರ್‌ಎಫ್‌ ತಂಡ ಸಜ್ಜಾಗಿದ್ದು, ಜಿಲ್ಲೆಯ ಸುತ್ತಮುತ್ತ ಭೂಕುಸಿತ ಉಂಟಾಗುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ.

ಜಿಲ್ಲೆಯಲ್ಲಿ ಮಳೆ ಕ್ಷೀಣಿಸಿದ್ದು, ಜು.11 ರಂದು 3.03 ಮಿ.ಮೀ ಮಳೆಯಾಗಿದ್ದು, ಶುಕ್ರವಾರ(ಜು.12) ಹಾಗೂ ಶನಿವಾರವೂ(ಜು.13) ಹೆಚ್ಚಿನ ಮಳೆಯಾಗಲಿಲ್ಲ. ಮಡಿಕೇರಿ, ವಿರಾಜಪೇಟೆ, ಪೊನ್ನಂಪೇಟೆ ಹಾಗೂ ಸೋಮವಾರಪೇಟೆಯಲ್ಲಿ ಆಗೊಮ್ಮೆ ಹಿಗೊಮ್ಮೆ ಸೂರ್ಯ ಭೂಮಿಯನ್ನು ಸ್ಪರ್ಶಿಸುತ್ತಿದ್ದಾನೆ. ಉಳಿದ ಸಮಯ ಮೋಡ ಕವಿದ ವಾತವಾರಣದೊಂದಿಗೆ ಸಾಮಾನ್ಯ ಮಳೆಯಾಗುತ್ತಿದೆ.

ಜಿಲ್ಲೆಯಲ್ಲಿ ಬಿಡುಬಿಟ್ಟ ಎನ್‌ಡಿಆರ್‌ಎಫ್‌ ತಂಡ ಹಿಂದೆ ಭೂಕುಸಿತ ಉಂಟಾದ ಹಾಗೂ ಭೂಕುಸಿತದ ಅಪಾಯವಿರುವ ಸ್ಥಳಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದೆ. ಭೂಕುಸಿತ ಹಾಗೂ ಜಲ ಸ್ಫೋಟದಂತಹ ವಿಪತ್ತು ಸಂಭವಿಸಿದರೆ, ಜನ ಜಾನುವಾರು ರಕ್ಷಣೆಗೆ ಹೇಗೆ ಕ್ರಮಕೈಗೊಳ್ಳಬೇಕು ಎಂದು ತಂಡದಲ್ಲಿರುವ ಪರಿಣಿತರಿಂದ ಮಾಹಿತಿ ಪಡೆದು ಸಿದ್ಧರಾಗುತ್ತಿದ್ದಾರೆ. ಕೆಲವೆಡೆ ಪ್ರಾತ್ಯಕ್ಷೆಕೆಯನ್ನೂ ಸಹ ನಡೆಸುತ್ತಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗುರುಪುರದ ಬಳಿ ಮತ್ತೆ ಹುಲಿ ಪ್ರತ್ಯಕ್ಷ : ಸ್ಥಳೀಯರಲ್ಲಿ ಹೆಚ್ಚಿದ ಆತಂಕ

ಹುಣಸೂರು : ತಾಲ್ಲೂಕಿನ ಗುರುಪುರದ ಟಿಬೆಟ್ ನಿರಾಶ್ರಿತರ ಕೇಂದ್ರದಲ್ಲಿ ಮತ್ತೆ ಹುಲಿ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ನಾಗರಹೊಳೆ ರಾಷ್ಟ್ರೀಯ…

22 mins ago

ಜಗತ್ತಿಗೆ ಸ್ಪರ್ಧೆ ನೀಡುತ್ತಿದ್ದ ಬೆಂಗಳೂರಿನ ಮೂಲಸೌಕರ್ಯ ಹಾಳಾಗಿದೆ : ಎಚ್‌ಡಿಕೆ

ಬೆಂಗಳೂರು : ಭಾರತವು ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜಗತ್ತಿನ ಮೂರನೇ ಆರ್ಥಿಕ ಶಕ್ತಿ ಆಗುವತ್ತ ದಾಪುಗಾಲಿಡುತ್ತಿದೆ. ಆದರೆ, ಉತ್ತಮ…

24 mins ago

ಮೈಸೂರು | ಹೊಸ ವರ್ಷದ ಸಂಭ್ರಮಾಚರಣೆಗ ಸಿದ್ದವಾಗ್ತಿದೆ 2 ಲಕ್ಷ ಲಡ್ಡು.!

ಯೋಗ ನರಸಿಂಹಸ್ವಾಮಿ ದೇವಸ್ಥಾನದಲ್ಲಿ 2 ಲಕ್ಷ ಲಡ್ಡುಗಳ ವಿತರಣೆ ಮೈಸೂರು : ನೂತನ ವರ್ಷವನ್ನು ಸ್ವಾಗತಿಸಲು ಸಾಂಸ್ಕೃತಿಕ ನಗರಿ ಮೈಸೂರು…

1 hour ago

ರೈಲು ಪ್ರಯಾಣ ದರ ಹೆಚ್ಚಳ | ರಾಜ್ಯ ಬಿಜೆಪಿ ನಾಯಕರ ಮೌನವೇಕೆ : ಸಿ.ಎಂ ಪ್ರಶ್ನೆ

ದಾವಣಗೆರೆ : ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿದೆ. ಜನಸಾಮಾನ್ಯರ ಮೇಲೆ ದರ ಏರಿಕೆ ಹೊರೆಯಾಗುತ್ತಿರುವ ಬಗ್ಗೆ…

1 hour ago

ಹುಬ್ಬಳ್ಳಿಯಲ್ಲಿ ಮರ್ಯಾದೆ ಹತ್ಯೆ | ಕ್ರೂರಿ ತಂದೆಯನ್ನು ಶೂಟ್‌ ಮಾಡಿ ; ಪ್ರಮೋದ್‌ ಮುತಾಲಿಕ್‌ ಆಗ್ರಹ

ಹುಬ್ಬಳ್ಳಿ : ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಮೇಲ್ಜಾತಿ ಗರ್ಭಿಣಿ ಪುತ್ರಿ ಮಾನ್ಯಳನ್ನು ತಂದೆಯೇ ಕೊಚ್ಚಿ ಕೊಂದಿದ್ದಾನೆ. ಈ ಮರ್ಯಾದೆ…

2 hours ago

ಸ್ಥಳೀಯವಾಗಿ ಬಿಜೆಪಿಯೊಂದಿಗೆ ಮೈತ್ರಿ ಹೊಂದಾಣಿಕೆ ಕಷ್ಟ : ಎಚ್‌ಡಿಡಿ

ಬೆಂಗಳೂರು : ಲೋಕಸಭೆ, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುಂದುವರೆಯಲಿದ್ದು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊಂದಾಣಿಕೆ ಕಷ್ಟವಾಗುತ್ತದೆ ಎಂದು ಮಾಜಿ…

2 hours ago