ಕೊಡಗು

ಕೊಡಗಿನಲ್ಲಿ ವಿಕೋಪ ನಿರ್ವಹಣೆಗೆ ಎನ್‌ಡಿಆರ್‌ಎಫ್‌ ಸಜ್ಜು

ಮಡಿಕೇರಿ: ಕೊಡಗು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮಳೆ ಅಬ್ಬರಿಸಿದೆ. ಸದ್ಯ ಕಳದೆರಡು ದಿನಗಳಿಂದ ಜಿಲ್ಲೆಯಲ್ಲಿ ಮಳೆ ಕ್ಷೀಣಿಸಿದ್ದು, ಆಗೊಮ್ಮೆ ಹಿಗೊಮ್ಮೆ ಬಿಸಿಲಿನ ವಾತವರಣ ಕಂಡುಬರುತ್ತಿದ್ದು, ಸಾಧಾರಣ ಮಳೆಯಾಗುತ್ತಿದೆ.

ಜಿಲ್ಲೆಯಲ್ಲಿ ಮಳೆ ಕಡಿಮೆಯಾದರೂ ಮುಂದಿನ ದಿನಗಳಲ್ಲಿ ಸಂಭವಿಸಬಹುದಾದ ವಿಪತ್ತು ನಿರ್ವಹಣೆಗೆ ಎನ್‌ಡಿಆರ್‌ಎಫ್‌ ತಂಡ ಸಜ್ಜಾಗಿದ್ದು, ಜಿಲ್ಲೆಯ ಸುತ್ತಮುತ್ತ ಭೂಕುಸಿತ ಉಂಟಾಗುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ.

ಜಿಲ್ಲೆಯಲ್ಲಿ ಮಳೆ ಕ್ಷೀಣಿಸಿದ್ದು, ಜು.11 ರಂದು 3.03 ಮಿ.ಮೀ ಮಳೆಯಾಗಿದ್ದು, ಶುಕ್ರವಾರ(ಜು.12) ಹಾಗೂ ಶನಿವಾರವೂ(ಜು.13) ಹೆಚ್ಚಿನ ಮಳೆಯಾಗಲಿಲ್ಲ. ಮಡಿಕೇರಿ, ವಿರಾಜಪೇಟೆ, ಪೊನ್ನಂಪೇಟೆ ಹಾಗೂ ಸೋಮವಾರಪೇಟೆಯಲ್ಲಿ ಆಗೊಮ್ಮೆ ಹಿಗೊಮ್ಮೆ ಸೂರ್ಯ ಭೂಮಿಯನ್ನು ಸ್ಪರ್ಶಿಸುತ್ತಿದ್ದಾನೆ. ಉಳಿದ ಸಮಯ ಮೋಡ ಕವಿದ ವಾತವಾರಣದೊಂದಿಗೆ ಸಾಮಾನ್ಯ ಮಳೆಯಾಗುತ್ತಿದೆ.

ಜಿಲ್ಲೆಯಲ್ಲಿ ಬಿಡುಬಿಟ್ಟ ಎನ್‌ಡಿಆರ್‌ಎಫ್‌ ತಂಡ ಹಿಂದೆ ಭೂಕುಸಿತ ಉಂಟಾದ ಹಾಗೂ ಭೂಕುಸಿತದ ಅಪಾಯವಿರುವ ಸ್ಥಳಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದೆ. ಭೂಕುಸಿತ ಹಾಗೂ ಜಲ ಸ್ಫೋಟದಂತಹ ವಿಪತ್ತು ಸಂಭವಿಸಿದರೆ, ಜನ ಜಾನುವಾರು ರಕ್ಷಣೆಗೆ ಹೇಗೆ ಕ್ರಮಕೈಗೊಳ್ಳಬೇಕು ಎಂದು ತಂಡದಲ್ಲಿರುವ ಪರಿಣಿತರಿಂದ ಮಾಹಿತಿ ಪಡೆದು ಸಿದ್ಧರಾಗುತ್ತಿದ್ದಾರೆ. ಕೆಲವೆಡೆ ಪ್ರಾತ್ಯಕ್ಷೆಕೆಯನ್ನೂ ಸಹ ನಡೆಸುತ್ತಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

8 seconds ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

9 mins ago

ರಾಜ್ಯದಲ್ಲಿ ತೀವ್ರ ಚಳಿ, ದಟ್ಟ ಮಂಜು : ವಾಹನ ಸವಾರರಿಗೆ ಮುನ್ನೆಚ್ಚರಿಕೆ

ಬೆಂಗಳೂರು : ರಾಜ್ಯದಲ್ಲಿ ತೀವ್ರ ಚಳಿ, ಶೀತಗಾಳಿಯ ಜೊತೆಗೆ ಬೆಳಗಿನ ವೇಳೆ ಕೆಲವೆಡೆ ದಟ್ಟವಾದ ಮಂಜು ಆವರಿಸುತ್ತಿದೆ. ಬೆಳಗಿನ ವೇಳೆಯಲ್ಲಿ…

19 mins ago

ಅರಣ್ಯ ಇಲಾಖೆ ಖಾಯಂ ಅಧಿಕಾರಿ, ಸಿಬ್ಬಂದಿಗೆ ಸಿಹಿ ಸುದ್ದಿ : ೧ ಕೋಟಿ ರೂ.ಅಪಘಾತ ವಿಮೆ

ಬೆಂಗಳೂರು : ಅರಣ್ಯ ಇಲಾಖೆಯ ಖಾಯಂ ಅಧಿಕಾರಿ, ಸಿಬ್ಬಂದಿಗೆ ೧ ಕೋಟಿ ರೂ. ಅಪಘಾತ (ಮರಣ)ವಿಮೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗೆ…

23 mins ago

ದಿಲ್ಲಿಯಲ್ಲಿ ಅಟಲ್‌ ಕ್ಯಾಂಟಿನ್‌ ಆರಂಭ : ಕರ್ನಾಟಕದ ಇಂದಿರಾ ಕ್ಯಾಂಟಿನ್ ಮಾದರಿಯಲ್ಲಿ 5 ರೂ.ಗೆ ಊಟ

ಹೊಸದಿಲ್ಲಿ : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ೧೦೧ನೇ ಜಯಂತಿ ಹಿನ್ನೆಲೆಯಲ್ಲಿ ದಿಲ್ಲಿ ಸರ್ಕಾರ ಗುರುವಾರ ರಾಜಧಾನಿಯಲ್ಲಿ…

33 mins ago

ರೈತರ ನೆರವಿಗೆ ಕ್ರೆಡಲ್‌ನಿಂದ `ಪಿಎಂ ಕುಸುಮ್‌ ಬಿ’ ಸಹಾಯವಾಣಿ ಕೇಂದ್ರ ಸ್ಥಾಪನೆ

ಬೆಂಗಳೂರು : ಮಾಹಿತಿ ಕೊರತೆ ಅಥವಾ ತಾಂತ್ರಿಕ ತೊಂದರೆಗಳಿಂದಾಗಿ ಅರ್ಹ ರೈತರು ಕುಸುಮ್-ಬಿ ಯೋಜನೆಯಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಕರ್ನಾಟಕ ನವೀಕರಿಸಬಹುದಾದ…

42 mins ago