ಮಡಿಕೇರಿ: ಕೊಡಗು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮಳೆ ಅಬ್ಬರಿಸಿದೆ. ಸದ್ಯ ಕಳದೆರಡು ದಿನಗಳಿಂದ ಜಿಲ್ಲೆಯಲ್ಲಿ ಮಳೆ ಕ್ಷೀಣಿಸಿದ್ದು, ಆಗೊಮ್ಮೆ ಹಿಗೊಮ್ಮೆ ಬಿಸಿಲಿನ ವಾತವರಣ ಕಂಡುಬರುತ್ತಿದ್ದು, ಸಾಧಾರಣ ಮಳೆಯಾಗುತ್ತಿದೆ.
ಜಿಲ್ಲೆಯಲ್ಲಿ ಮಳೆ ಕಡಿಮೆಯಾದರೂ ಮುಂದಿನ ದಿನಗಳಲ್ಲಿ ಸಂಭವಿಸಬಹುದಾದ ವಿಪತ್ತು ನಿರ್ವಹಣೆಗೆ ಎನ್ಡಿಆರ್ಎಫ್ ತಂಡ ಸಜ್ಜಾಗಿದ್ದು, ಜಿಲ್ಲೆಯ ಸುತ್ತಮುತ್ತ ಭೂಕುಸಿತ ಉಂಟಾಗುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ.
ಜಿಲ್ಲೆಯಲ್ಲಿ ಮಳೆ ಕ್ಷೀಣಿಸಿದ್ದು, ಜು.11 ರಂದು 3.03 ಮಿ.ಮೀ ಮಳೆಯಾಗಿದ್ದು, ಶುಕ್ರವಾರ(ಜು.12) ಹಾಗೂ ಶನಿವಾರವೂ(ಜು.13) ಹೆಚ್ಚಿನ ಮಳೆಯಾಗಲಿಲ್ಲ. ಮಡಿಕೇರಿ, ವಿರಾಜಪೇಟೆ, ಪೊನ್ನಂಪೇಟೆ ಹಾಗೂ ಸೋಮವಾರಪೇಟೆಯಲ್ಲಿ ಆಗೊಮ್ಮೆ ಹಿಗೊಮ್ಮೆ ಸೂರ್ಯ ಭೂಮಿಯನ್ನು ಸ್ಪರ್ಶಿಸುತ್ತಿದ್ದಾನೆ. ಉಳಿದ ಸಮಯ ಮೋಡ ಕವಿದ ವಾತವಾರಣದೊಂದಿಗೆ ಸಾಮಾನ್ಯ ಮಳೆಯಾಗುತ್ತಿದೆ.
ಜಿಲ್ಲೆಯಲ್ಲಿ ಬಿಡುಬಿಟ್ಟ ಎನ್ಡಿಆರ್ಎಫ್ ತಂಡ ಹಿಂದೆ ಭೂಕುಸಿತ ಉಂಟಾದ ಹಾಗೂ ಭೂಕುಸಿತದ ಅಪಾಯವಿರುವ ಸ್ಥಳಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದೆ. ಭೂಕುಸಿತ ಹಾಗೂ ಜಲ ಸ್ಫೋಟದಂತಹ ವಿಪತ್ತು ಸಂಭವಿಸಿದರೆ, ಜನ ಜಾನುವಾರು ರಕ್ಷಣೆಗೆ ಹೇಗೆ ಕ್ರಮಕೈಗೊಳ್ಳಬೇಕು ಎಂದು ತಂಡದಲ್ಲಿರುವ ಪರಿಣಿತರಿಂದ ಮಾಹಿತಿ ಪಡೆದು ಸಿದ್ಧರಾಗುತ್ತಿದ್ದಾರೆ. ಕೆಲವೆಡೆ ಪ್ರಾತ್ಯಕ್ಷೆಕೆಯನ್ನೂ ಸಹ ನಡೆಸುತ್ತಿದೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…