ಮಡಿಕೇರಿ: ಕೊಡಗು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮಳೆ ಅಬ್ಬರಿಸಿದೆ. ಸದ್ಯ ಕಳದೆರಡು ದಿನಗಳಿಂದ ಜಿಲ್ಲೆಯಲ್ಲಿ ಮಳೆ ಕ್ಷೀಣಿಸಿದ್ದು, ಆಗೊಮ್ಮೆ ಹಿಗೊಮ್ಮೆ ಬಿಸಿಲಿನ ವಾತವರಣ ಕಂಡುಬರುತ್ತಿದ್ದು, ಸಾಧಾರಣ ಮಳೆಯಾಗುತ್ತಿದೆ.
ಜಿಲ್ಲೆಯಲ್ಲಿ ಮಳೆ ಕಡಿಮೆಯಾದರೂ ಮುಂದಿನ ದಿನಗಳಲ್ಲಿ ಸಂಭವಿಸಬಹುದಾದ ವಿಪತ್ತು ನಿರ್ವಹಣೆಗೆ ಎನ್ಡಿಆರ್ಎಫ್ ತಂಡ ಸಜ್ಜಾಗಿದ್ದು, ಜಿಲ್ಲೆಯ ಸುತ್ತಮುತ್ತ ಭೂಕುಸಿತ ಉಂಟಾಗುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ.
ಜಿಲ್ಲೆಯಲ್ಲಿ ಮಳೆ ಕ್ಷೀಣಿಸಿದ್ದು, ಜು.11 ರಂದು 3.03 ಮಿ.ಮೀ ಮಳೆಯಾಗಿದ್ದು, ಶುಕ್ರವಾರ(ಜು.12) ಹಾಗೂ ಶನಿವಾರವೂ(ಜು.13) ಹೆಚ್ಚಿನ ಮಳೆಯಾಗಲಿಲ್ಲ. ಮಡಿಕೇರಿ, ವಿರಾಜಪೇಟೆ, ಪೊನ್ನಂಪೇಟೆ ಹಾಗೂ ಸೋಮವಾರಪೇಟೆಯಲ್ಲಿ ಆಗೊಮ್ಮೆ ಹಿಗೊಮ್ಮೆ ಸೂರ್ಯ ಭೂಮಿಯನ್ನು ಸ್ಪರ್ಶಿಸುತ್ತಿದ್ದಾನೆ. ಉಳಿದ ಸಮಯ ಮೋಡ ಕವಿದ ವಾತವಾರಣದೊಂದಿಗೆ ಸಾಮಾನ್ಯ ಮಳೆಯಾಗುತ್ತಿದೆ.
ಜಿಲ್ಲೆಯಲ್ಲಿ ಬಿಡುಬಿಟ್ಟ ಎನ್ಡಿಆರ್ಎಫ್ ತಂಡ ಹಿಂದೆ ಭೂಕುಸಿತ ಉಂಟಾದ ಹಾಗೂ ಭೂಕುಸಿತದ ಅಪಾಯವಿರುವ ಸ್ಥಳಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದೆ. ಭೂಕುಸಿತ ಹಾಗೂ ಜಲ ಸ್ಫೋಟದಂತಹ ವಿಪತ್ತು ಸಂಭವಿಸಿದರೆ, ಜನ ಜಾನುವಾರು ರಕ್ಷಣೆಗೆ ಹೇಗೆ ಕ್ರಮಕೈಗೊಳ್ಳಬೇಕು ಎಂದು ತಂಡದಲ್ಲಿರುವ ಪರಿಣಿತರಿಂದ ಮಾಹಿತಿ ಪಡೆದು ಸಿದ್ಧರಾಗುತ್ತಿದ್ದಾರೆ. ಕೆಲವೆಡೆ ಪ್ರಾತ್ಯಕ್ಷೆಕೆಯನ್ನೂ ಸಹ ನಡೆಸುತ್ತಿದೆ.
ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…
ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…
ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…
ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…
ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.28ರವರೆಗೂ ಕರ್ನಾಟಕದಲ್ಲಿ ಮಳೆ…
ನವದೆಹಲಿ: ನೀಟ್ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್ ಹಾಗೂ…