ಕೊಡಗು

ಕೇರಳದಲ್ಲಿ ನಿಫಾ ವೈರಸ್ ಆತಂಕ : ಕೊಡಗಿನಲ್ಲಿಯೂ ಕಟ್ಟೆಚ್ಚರ

ಮಡಿಕೇರಿ : ಕೇರಳದ ಕೆಲವೆಡೆ ನಿಫಾ ವೈರಸ್‌ ಪತ್ತೆಯಾಗಿರುವ ಹಿನ್ನೆಲೆ ಕೊಡಗಿನಲ್ಲೂ ಕಟ್ಟೆಚ್ಚರ ವಹಿಸಲಾಗಿದ್ದು, ಎಚ್ಚರದಿಂದ ಇರುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಕುಮಾರ್ ಮನವಿ ಮಾಡಿದ್ದಾರೆ.

ಕೇರಳದ ವಿವಿಧ ಭಾಗಗಳಲ್ಲಿ 4 ಸಂಶಯಾಸ್ಪದ ನಿಫಾ ವೈರಸ್‌ ರೋಗದ ಪ್ರಕರಣಗಳು ಕಂಡು ಬಂದಿದ್ದು, ಕೇರಳಕ್ಕೆ ಹೊಂದಿಕೊಂಡಿರುವ ಕೊಡಗಿನಲ್ಲಿಯೂ ಆತಂಕ ಸೃಷ್ಟಿಸಿದೆ.

ನಿಫಾ ವೈರಸ್‌ ಕಾಯಿಲೆ 1998 ಮತ್ತು 1999ನೇ ಇಸವಿಯಲ್ಲಿ, ಮಲೇಶಿಯಾ ಮತ್ತು ಸಿಂಗಪೂರ್‌ ದೇಶಗಳಲ್ಲಿನ ಮನೆಯಲ್ಲಿ ಸಾಕಿರುವ ಹಂದಿಗಳಲ್ಲಿ ಪತ್ತೆಯಾಗಿದ್ದು, ಮಲೇಶಿಯಾ ದೇಶದ ನಿಫಾ ಗ್ರಾಮದಲ್ಲಿ ಈ ವೈರಸ್‌ ಪ್ರಭೇದವನ್ನು ಪ್ರಪ್ರಥಮವಾಗಿ ಕಂಡು ಹಿಡಿಯಲಾಗಿದೆ.

ಮನೆಯಲ್ಲಿ ಸಾಕುವ ನಾಯಿ, ಬೆಕ್ಕು, ಮೇಕೆ, ಕುದುರೆ ಮತ್ತು ಕೆಲವು ಸಂದರ್ಭದಲ್ಲಿ ಕುರಿಗಳೂ ಸೋಂಕಿಗೆ ತುತ್ತಾಗುವ ಸಂಭವವಿದ್ದು, ಮಲೇಷಿಯಾ, ಸಿಂಗಪೂರ್‌, ಬಾಂಗ್ಲಾದೇಶ ಮತ್ತು ಭಾರತದಲ್ಲಿಈವರೆಗೆ 477 ಖಚಿತ ಪ್ರಕರಣಗಳು ವರದಿಯಾಗಿದ್ದು, ಅವುಗಳಲ್ಲಿ 248 ಸಾವುಗಳು ಸಂಭವಿಸಿದೆ.

2018 ರಲ್ಲಿ ಕೇರಳದಲ್ಲಿ 14 ಖಚಿತ ನಿಫಾ ಪ್ರಕರಣಗಳು ವರದಿಯಾಗಿದ್ದು, ಅವುಗಳಲ್ಲಿ 11 ಸಾವುಗಳು ಸಂಭಸಿದ್ದವು. 2021 ರಲ್ಲಿ ಕೇರಳದಲ್ಲಿ ಒಂದು ನಿಫಾ ವೈರಸ್‌ ರೋಗದ ಪ್ರಕರಣ ವರದಿಯಾಗಿತ್ತು. ಈಗ ಶಂಕಿತ ನಿಫಾ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆ ಜಿಲ್ಲೆಯ ಸಾರ್ವಜನಿಕರು ಎಚ್ಚರದಿಂದ ಆರೋಗ್ಯ ಇಲಾಖೆ ಸೂಚಿಸಿದೆ.

lokesh

Recent Posts

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…

9 hours ago

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

9 hours ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

10 hours ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

10 hours ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

10 hours ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

10 hours ago