ಕೊಡಗು

ಕೇರಳದಲ್ಲಿ ನಿಫಾ ವೈರಸ್ ಆತಂಕ : ಕೊಡಗಿನಲ್ಲಿಯೂ ಕಟ್ಟೆಚ್ಚರ

ಮಡಿಕೇರಿ : ಕೇರಳದ ಕೆಲವೆಡೆ ನಿಫಾ ವೈರಸ್‌ ಪತ್ತೆಯಾಗಿರುವ ಹಿನ್ನೆಲೆ ಕೊಡಗಿನಲ್ಲೂ ಕಟ್ಟೆಚ್ಚರ ವಹಿಸಲಾಗಿದ್ದು, ಎಚ್ಚರದಿಂದ ಇರುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸತೀಶ್ ಕುಮಾರ್ ಮನವಿ ಮಾಡಿದ್ದಾರೆ.

ಕೇರಳದ ವಿವಿಧ ಭಾಗಗಳಲ್ಲಿ 4 ಸಂಶಯಾಸ್ಪದ ನಿಫಾ ವೈರಸ್‌ ರೋಗದ ಪ್ರಕರಣಗಳು ಕಂಡು ಬಂದಿದ್ದು, ಕೇರಳಕ್ಕೆ ಹೊಂದಿಕೊಂಡಿರುವ ಕೊಡಗಿನಲ್ಲಿಯೂ ಆತಂಕ ಸೃಷ್ಟಿಸಿದೆ.

ನಿಫಾ ವೈರಸ್‌ ಕಾಯಿಲೆ 1998 ಮತ್ತು 1999ನೇ ಇಸವಿಯಲ್ಲಿ, ಮಲೇಶಿಯಾ ಮತ್ತು ಸಿಂಗಪೂರ್‌ ದೇಶಗಳಲ್ಲಿನ ಮನೆಯಲ್ಲಿ ಸಾಕಿರುವ ಹಂದಿಗಳಲ್ಲಿ ಪತ್ತೆಯಾಗಿದ್ದು, ಮಲೇಶಿಯಾ ದೇಶದ ನಿಫಾ ಗ್ರಾಮದಲ್ಲಿ ಈ ವೈರಸ್‌ ಪ್ರಭೇದವನ್ನು ಪ್ರಪ್ರಥಮವಾಗಿ ಕಂಡು ಹಿಡಿಯಲಾಗಿದೆ.

ಮನೆಯಲ್ಲಿ ಸಾಕುವ ನಾಯಿ, ಬೆಕ್ಕು, ಮೇಕೆ, ಕುದುರೆ ಮತ್ತು ಕೆಲವು ಸಂದರ್ಭದಲ್ಲಿ ಕುರಿಗಳೂ ಸೋಂಕಿಗೆ ತುತ್ತಾಗುವ ಸಂಭವವಿದ್ದು, ಮಲೇಷಿಯಾ, ಸಿಂಗಪೂರ್‌, ಬಾಂಗ್ಲಾದೇಶ ಮತ್ತು ಭಾರತದಲ್ಲಿಈವರೆಗೆ 477 ಖಚಿತ ಪ್ರಕರಣಗಳು ವರದಿಯಾಗಿದ್ದು, ಅವುಗಳಲ್ಲಿ 248 ಸಾವುಗಳು ಸಂಭವಿಸಿದೆ.

2018 ರಲ್ಲಿ ಕೇರಳದಲ್ಲಿ 14 ಖಚಿತ ನಿಫಾ ಪ್ರಕರಣಗಳು ವರದಿಯಾಗಿದ್ದು, ಅವುಗಳಲ್ಲಿ 11 ಸಾವುಗಳು ಸಂಭಸಿದ್ದವು. 2021 ರಲ್ಲಿ ಕೇರಳದಲ್ಲಿ ಒಂದು ನಿಫಾ ವೈರಸ್‌ ರೋಗದ ಪ್ರಕರಣ ವರದಿಯಾಗಿತ್ತು. ಈಗ ಶಂಕಿತ ನಿಫಾ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆ ಜಿಲ್ಲೆಯ ಸಾರ್ವಜನಿಕರು ಎಚ್ಚರದಿಂದ ಆರೋಗ್ಯ ಇಲಾಖೆ ಸೂಚಿಸಿದೆ.

lokesh

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

7 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

8 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

9 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

9 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

10 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

10 hours ago