No Leave for Officials in This District for 40 Days…!
ಮಡಿಕೇರಿ : ಮುಂದಿನ 40 ದಿನಗಳು ಕೊಡಗಿನ ಎಲ್ಲಾ ಅಧಿಕಾರಿಗಳಿಗೆ ರಜೆ ಇಲ್ಲ ಎಂದು ಕೊಡಗು ಉಸ್ತುವಾರಿ ಸಚಿವ ಭೋಸರಾಜು ಖಡಕ್ ಸೂಚನೆ ನೀಡಿದ್ದಾರೆ.
ನಗರದ ಜಿ.ಪಂ. ಸಭಾಂಗಣದಲ್ಲಿ ಶುಕ್ರವಾರ ನಡೆದ 2025-26ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಸಚಿವರು ಮಾತನಾಡಿದರು.
ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗಿದ್ದು ಅನಾಹುತಗಳು ಸಂಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಯಾವುದೇ ಅಧಿಕಾರಿಗಳು ಕೇಂದ್ರಸ್ಥಾನ ಬಿಟ್ಟು ಎಲ್ಲೂ ಹೋಗಬಾರದು. ಮಳೆಗಾಲ ಎದುರಿಸಲು ಅಧಿಕಾರಿಗಳು ಸರ್ವಸನ್ನದ್ಧರಾಗಿರಬೇಕು. ಜೊತೆಗೆ ಈ ನಿಯಮ ಚಾಚೂ ತಪ್ಪದೆ ಪಾಲಿಸಬೇಕು. 10 ದಿನಗಳ ಒಳಗೆ ಹಾಸ್ಟೆಲ್, ಶಾಲಾ ಕಟ್ಟಡದ ಪರಿಸ್ಥಿತಿ ಪರಿಶೀಲಿಸಿ ವರದಿ ನೀಡಬೇಕು ಎಂದು ಸೂಚಿಸಿದರು.
ನಾಡಗೀತೆಗೆ ಅವಮಾನ: ಭೋಜೇಗೌಡ ಅಸಮಾಧಾನ
ಕೆಡಿಪಿ ಸಭೆಯಲ್ಲಿ ನಾಡಗೀತೆಗೆ ಅವಮಾನ ಮಾಡಿದ ಘಟನೆ ಸಾಕಷ್ಟು ಮುಜುಗರಕ್ಕೆ ಕಾರಣವಾಯಿತು. ಸಭೆಯ ಆರಂಭದಲ್ಲಿ ಅಧಿಕಾರಿಗಳು ನಾಡಗೀತೆಯ ರೆಕಾರ್ಡ್ ಅನ್ನು ಪ್ಲೇ ಮಾಡಿದರು. ಆದರೆ ಗೀತೆಯಲ್ಲಿ ಸರ್ವ ಜನಾಂಗದ ಶಾಂತಿಯ ತೋಟ ಪ್ಯಾರದ ಭಾಗವನ್ನು ಕಟ್ ಮಾಡಲಾಗಿತ್ತು. ಇದರಿಂದ ಕೆಂಡಾಮಂಡಲರಾದ ಎಂಎಲ್ಸಿ ಭೋಜೇಗೌಡ, ಜಿಲ್ಲಾಧಿಕಾರಿ ಸೇರಿದಂತೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ನಾಡಗೀತೆ ಸರಿಯಾಗಿ ಹಾಕಿಲ್ಲ. ನಿಯಮದಂತೆ ಗೀತೆಯನ್ನು ಹಾಕಬೇಕಾಗಿತ್ತು. ಹೀಗೆ ಕಟ್ ಮಾಡಿ ಎಡಿಟ್ ಮಾಡಿ ಹಾಕುವ ಬದಲು ಮಕ್ಕಳಿಂದ ಹಾಡಿಸಬಹುದಿತ್ತಲ್ಲ ಅಂತ ಖಾರವಾಗಿ ಪ್ರಶ್ನಿಸಿದರು. ಅಲ್ಲದೆ ಅಧಿಕಾರಿ ಮತ್ತು ಸಿಬ್ಬಂದಿ ಅಮಾನತ್ತಿಗೆ ಒತ್ತಾಯಿಸಿದರು.
ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್ಬೋಟ್ಗಳಿಂದ…
ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್, ತನ್ನ ನಿರ್ಧಾರವನ್ನು…
ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…
ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…
ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…
ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…