No Leave for Officials in This District for 40 Days…!
ಮಡಿಕೇರಿ : ಮುಂದಿನ 40 ದಿನಗಳು ಕೊಡಗಿನ ಎಲ್ಲಾ ಅಧಿಕಾರಿಗಳಿಗೆ ರಜೆ ಇಲ್ಲ ಎಂದು ಕೊಡಗು ಉಸ್ತುವಾರಿ ಸಚಿವ ಭೋಸರಾಜು ಖಡಕ್ ಸೂಚನೆ ನೀಡಿದ್ದಾರೆ.
ನಗರದ ಜಿ.ಪಂ. ಸಭಾಂಗಣದಲ್ಲಿ ಶುಕ್ರವಾರ ನಡೆದ 2025-26ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಸಚಿವರು ಮಾತನಾಡಿದರು.
ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗಿದ್ದು ಅನಾಹುತಗಳು ಸಂಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಯಾವುದೇ ಅಧಿಕಾರಿಗಳು ಕೇಂದ್ರಸ್ಥಾನ ಬಿಟ್ಟು ಎಲ್ಲೂ ಹೋಗಬಾರದು. ಮಳೆಗಾಲ ಎದುರಿಸಲು ಅಧಿಕಾರಿಗಳು ಸರ್ವಸನ್ನದ್ಧರಾಗಿರಬೇಕು. ಜೊತೆಗೆ ಈ ನಿಯಮ ಚಾಚೂ ತಪ್ಪದೆ ಪಾಲಿಸಬೇಕು. 10 ದಿನಗಳ ಒಳಗೆ ಹಾಸ್ಟೆಲ್, ಶಾಲಾ ಕಟ್ಟಡದ ಪರಿಸ್ಥಿತಿ ಪರಿಶೀಲಿಸಿ ವರದಿ ನೀಡಬೇಕು ಎಂದು ಸೂಚಿಸಿದರು.
ನಾಡಗೀತೆಗೆ ಅವಮಾನ: ಭೋಜೇಗೌಡ ಅಸಮಾಧಾನ
ಕೆಡಿಪಿ ಸಭೆಯಲ್ಲಿ ನಾಡಗೀತೆಗೆ ಅವಮಾನ ಮಾಡಿದ ಘಟನೆ ಸಾಕಷ್ಟು ಮುಜುಗರಕ್ಕೆ ಕಾರಣವಾಯಿತು. ಸಭೆಯ ಆರಂಭದಲ್ಲಿ ಅಧಿಕಾರಿಗಳು ನಾಡಗೀತೆಯ ರೆಕಾರ್ಡ್ ಅನ್ನು ಪ್ಲೇ ಮಾಡಿದರು. ಆದರೆ ಗೀತೆಯಲ್ಲಿ ಸರ್ವ ಜನಾಂಗದ ಶಾಂತಿಯ ತೋಟ ಪ್ಯಾರದ ಭಾಗವನ್ನು ಕಟ್ ಮಾಡಲಾಗಿತ್ತು. ಇದರಿಂದ ಕೆಂಡಾಮಂಡಲರಾದ ಎಂಎಲ್ಸಿ ಭೋಜೇಗೌಡ, ಜಿಲ್ಲಾಧಿಕಾರಿ ಸೇರಿದಂತೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ನಾಡಗೀತೆ ಸರಿಯಾಗಿ ಹಾಕಿಲ್ಲ. ನಿಯಮದಂತೆ ಗೀತೆಯನ್ನು ಹಾಕಬೇಕಾಗಿತ್ತು. ಹೀಗೆ ಕಟ್ ಮಾಡಿ ಎಡಿಟ್ ಮಾಡಿ ಹಾಕುವ ಬದಲು ಮಕ್ಕಳಿಂದ ಹಾಡಿಸಬಹುದಿತ್ತಲ್ಲ ಅಂತ ಖಾರವಾಗಿ ಪ್ರಶ್ನಿಸಿದರು. ಅಲ್ಲದೆ ಅಧಿಕಾರಿ ಮತ್ತು ಸಿಬ್ಬಂದಿ ಅಮಾನತ್ತಿಗೆ ಒತ್ತಾಯಿಸಿದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…