No Leave for Officials in This District for 40 Days…!
ಮಡಿಕೇರಿ : ಮುಂದಿನ 40 ದಿನಗಳು ಕೊಡಗಿನ ಎಲ್ಲಾ ಅಧಿಕಾರಿಗಳಿಗೆ ರಜೆ ಇಲ್ಲ ಎಂದು ಕೊಡಗು ಉಸ್ತುವಾರಿ ಸಚಿವ ಭೋಸರಾಜು ಖಡಕ್ ಸೂಚನೆ ನೀಡಿದ್ದಾರೆ.
ನಗರದ ಜಿ.ಪಂ. ಸಭಾಂಗಣದಲ್ಲಿ ಶುಕ್ರವಾರ ನಡೆದ 2025-26ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಸಚಿವರು ಮಾತನಾಡಿದರು.
ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗಿದ್ದು ಅನಾಹುತಗಳು ಸಂಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಯಾವುದೇ ಅಧಿಕಾರಿಗಳು ಕೇಂದ್ರಸ್ಥಾನ ಬಿಟ್ಟು ಎಲ್ಲೂ ಹೋಗಬಾರದು. ಮಳೆಗಾಲ ಎದುರಿಸಲು ಅಧಿಕಾರಿಗಳು ಸರ್ವಸನ್ನದ್ಧರಾಗಿರಬೇಕು. ಜೊತೆಗೆ ಈ ನಿಯಮ ಚಾಚೂ ತಪ್ಪದೆ ಪಾಲಿಸಬೇಕು. 10 ದಿನಗಳ ಒಳಗೆ ಹಾಸ್ಟೆಲ್, ಶಾಲಾ ಕಟ್ಟಡದ ಪರಿಸ್ಥಿತಿ ಪರಿಶೀಲಿಸಿ ವರದಿ ನೀಡಬೇಕು ಎಂದು ಸೂಚಿಸಿದರು.
ನಾಡಗೀತೆಗೆ ಅವಮಾನ: ಭೋಜೇಗೌಡ ಅಸಮಾಧಾನ
ಕೆಡಿಪಿ ಸಭೆಯಲ್ಲಿ ನಾಡಗೀತೆಗೆ ಅವಮಾನ ಮಾಡಿದ ಘಟನೆ ಸಾಕಷ್ಟು ಮುಜುಗರಕ್ಕೆ ಕಾರಣವಾಯಿತು. ಸಭೆಯ ಆರಂಭದಲ್ಲಿ ಅಧಿಕಾರಿಗಳು ನಾಡಗೀತೆಯ ರೆಕಾರ್ಡ್ ಅನ್ನು ಪ್ಲೇ ಮಾಡಿದರು. ಆದರೆ ಗೀತೆಯಲ್ಲಿ ಸರ್ವ ಜನಾಂಗದ ಶಾಂತಿಯ ತೋಟ ಪ್ಯಾರದ ಭಾಗವನ್ನು ಕಟ್ ಮಾಡಲಾಗಿತ್ತು. ಇದರಿಂದ ಕೆಂಡಾಮಂಡಲರಾದ ಎಂಎಲ್ಸಿ ಭೋಜೇಗೌಡ, ಜಿಲ್ಲಾಧಿಕಾರಿ ಸೇರಿದಂತೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ನಾಡಗೀತೆ ಸರಿಯಾಗಿ ಹಾಕಿಲ್ಲ. ನಿಯಮದಂತೆ ಗೀತೆಯನ್ನು ಹಾಕಬೇಕಾಗಿತ್ತು. ಹೀಗೆ ಕಟ್ ಮಾಡಿ ಎಡಿಟ್ ಮಾಡಿ ಹಾಕುವ ಬದಲು ಮಕ್ಕಳಿಂದ ಹಾಡಿಸಬಹುದಿತ್ತಲ್ಲ ಅಂತ ಖಾರವಾಗಿ ಪ್ರಶ್ನಿಸಿದರು. ಅಲ್ಲದೆ ಅಧಿಕಾರಿ ಮತ್ತು ಸಿಬ್ಬಂದಿ ಅಮಾನತ್ತಿಗೆ ಒತ್ತಾಯಿಸಿದರು.
ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…
ಮೈಸೂರು : ಸೋಮವಾರ ಪಬ್ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…
ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್ ಬಂಪರ್ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…
ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…
ನವದೆಹಲಿ: ಮೆಡಿಕಲ್ ಶಾಪ್ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…
ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…